Avatar

NAMMA MEDIA 24X7

ಜ.28, 29: ಸಂತ ಅಲೋಶಿಯಸ್ ವಿವಿಯಲ್ಲಿ ಅಂತ‌ರ್ ರಾಷ್ಟ್ರೀಯ ಸಮ್ಮೇಳನ …. !

ಮಂಗಳೂರು,:ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯುಮಾನಿಟೀಸ್ ವತಿ ಯಿಂದ ‘ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿ ಮತ್ತು ಸಮಾ ವೇಶಿತ ಸಮಾಜಗಳ ಉತ್ತೇಜನ’ ಎಂಬ ವಿಷಯ ದಲ್ಲಿ ಜ.28 ಮತ್ತು 29ರಂದು ಎರಡು ದಿನಗಳ ಅಂತ‌ರ್ ರಾಷ್ಟ್ರೀಯ ಸಮ್ಮೇಳನ ಆಯೋಜಿ ಸಲಾಗಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಅಧ್ಯಕ್ಷೆ ಡಾ.ರೋಸ್‌ವೀರ ಡಿಸೋಜ, ಜ.28ರಂದು ಬೆಳಗ್ಗೆ 10ಕ್ಕೆ ಎಲ್.ಎಫ್.ರಸ್ಕಿನ್ಹಾ ಸಭಾಂ ಗಣದಲ್ಲಿ ಡಿಸಿ ಎಚ್.ವಿ. ದರ್ಶನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂತ ಅಲೋಶಿಯಸ್ ವಿವಿಯ…

Read More

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ವಿಬಿ–ಜಿ ರಾಮ್ ಜಿ” ಕುರಿತು ಕಾರ್ಯಾಗಾರ

ಮಂಗಳೂರು: ದಿನಾಂಕ 24.01.2026 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಾಗಾರ ನಡೆಯಿತು.ಕಾರ್ಯಾಗಾರದ ಉದ್ಘಾಟನೆ ನಂತರ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕಾಂಗ್ರೇಸ್ ಗೆ ಈ ಯೋಜನೆಯನ್ನು ನೋಡಿ ಭ್ರಮನಿರಸನವಾಗಿದೆ. ಅದಕ್ಕೆ ಜನರ ಮಧ್ಯದಲ್ಲಿ ಅನೇಕ ಸುಳ್ಳುಗಳನ್ನು ಪಸರಿಸಲು ಹೊರಟಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ವಿಬಿ- ಜಿ ರಾಮ್ ಜಿ” ಅಂದರೆ ‘ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಆಜೀವಿಕಾ ಮಿಷನ್ ಗ್ರಾಮೀಣ’ ಇದು ಗ್ರಾಮೀಣಾಭಿವೃದ್ಧಿ…

Read More

ರಾಜ್ಯಪಾಲರನ್ನು ಅಗೌರವಿಸಲೆಂದೇ ವಿಶೇಷ ಅಧಿವೇಶನನ್ನು ಕರೆಯಲಾಗಿದೆ , ಬಿ ಕೆ ಹರಿಪ್ರಸಾದ್ ಗೂಂಡಾ ವರ್ತನೆ ಸರಿಯಲ್ಲ : ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ

ಮಂಗಳೂರು: ಕಾಂಗ್ರೆಸ್ ಸಂವಿಧಾನಕ್ಕೆ ಅಗೌರವವನ್ನು ತೋರಿಸುವ ರೀತಿಯಲ್ಲಿ ಮೊನ್ನೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರನ್ನು ಅಗೌರವಿಸಿದ್ದಾರೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು . ಬರೀ ಬಾಯಿ ಮಾತಿನಲ್ಲಿ ಮಾತ್ರ ಸಂವಿಧಾನಕ್ಕೆ ಕಾಂಗ್ರೆಸಿಗರು ಗೌರವವನ್ನು ನೀಡುತ್ತಾರೆ . ಆದರೆ ಅದರ ಆಶಯಗಳಿಗೆ ಅವರು ಬದ್ದರಾಗುವುದಿಲ್ಲ . ರಾಜ್ಯಪಾಲರ ಮೇಲೆ ಸುಳ್ಳು ಆಪಾಧನೆಯನ್ನು ಅವರು ಮಾಡ್ತಾ ಇದ್ದಾರೆ . ಈ ಜಂಟಿ ಅಧಿವೇಶವನ್ನೇ ಕರೆದಿರುವುದೇ ರಾಜ್ಯಪಾಲರನ್ನು ಅಗೌರವಿಸಲು ಎಂದು ಅವರು ಹೇಳಿದರು…

Read More

ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಮೈಸೂರು ಅಧ್ಯಯನ ಪ್ರವಾಸ: ಇತಿಹಾಸ–ವಿಜ್ಞಾನ–ಕಲೆಯ ಅನುಭವ

ಮಂಜೇಶ್ವರ: ಕೇರಳ–ಕರ್ನಾಟಕ ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿಯ ಆಂಗ್ಲ ಮಾಧ್ಯಮ ಶಾಲೆಗಳ 3 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳು 2025–26ನೇ ಶೈಕ್ಷಣಿಕ ವರ್ಷದ ಅಧ್ಯಯನ ಪ್ರವಾಸದ ಅಂಗವಾಗಿ ಐತಿಹಾಸಿಕ ನಗರಿ ಮೈಸೂರಿನ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಪಾರ ಮಾಹಿತಿಯನ್ನು ಸಂಗ್ರಹಿಸಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್, ಆಡಳಿತ ಮಂಡಳಿ ಹಾಗೂ ಶಿಕ್ಷಕರ ನೇತೃತ್ವದಲ್ಲಿ ನಡೆದ ಈ ಅಧ್ಯಯನ ಪ್ರವಾಸವು…

Read More

ಕಾರ್ಕಳ: ಭೀಕರ ರಸ್ತೆ ಅಪಘಾತ- ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, 9 ಮಂದಿಗೆ ಗಾಯ

ಉಡುಪಿ: ಕಾರ್ಕಳ‌ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಗುಲ್ಬರ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ…

Read More

ಫೆ14 ಮತ್ತು 15ರಂದು ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ ಜಾತ್ರೆ

ಕರಾವಳಿ ಕರ್ನಾಟಕ ಭಾಗದ ಸಾಂಪ್ರದಾಯಿಕ ಜನಪದ ಕ್ರೀಡೆಯಾದ ಕಂಬಳವನ್ನು ಉಳಿಸಬೇಕು ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸಬೇಕ್ಕೆನ್ನುವ ಉದ್ದೇಶದಿಂದ ಜಯ-ವಿಜಯಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಇವರ ನೇತೃತ್ವದಲ್ಲಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೀಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ಫೆ ೧೪ ಮತ್ತು ೧೫ ರಂದು ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮಿತಿಯಯ ಗೌರವಾಧ್ಯಕ್ಷರಾದ…

Read More

ಬೈಕ್ ಕಳ್ಳತನ ಆರೋಪ: ಮರಕ್ಕೆ ಕಟ್ಟಿ ಇಬ್ಬರಿಗೆ ಹಲ್ಲೆ

ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ವ್ಯಕ್ತಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಾ-ಮುಗ್ಗ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಇದೆ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದವರು ನೀಡಿದ ದೂರಿನಂತೆ ಸ್ಥಳೀಯರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ದಿನಾಂಕ 20-01-2026 ರಂದು ಬೆಳಗ್ಗಿನ ಜಾವ 02.10 ರಿಂದ 02.30 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ…

Read More

ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ, 2026.ಫೆಬ್ರವರಿ 22ಕ್ಕೆ

ಡಾ| ವಾವನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಸಾರಥ್ಯದ “ಸೀತಮ್ಮ ಪುರುಷ ನಾಯಕ ಸ್ಮಾರಕ” ಕನ್ನಡ ಭವನ ಗ್ರಂಥಾಲಯ(ರಿ.223/2008) ಇದರ ಅಂಗ ಸಂಸ್ಥೆಯಾದ, ಡಾ| ಮಾನಸ ಅಧ್ಯಕ್ಷರು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಕರ್ನಾಟಕ ಸರಕಾರ ಇವರಿಂದ 2.2.2025 ರಂದು ಉದ್ಘಾಟನೆಗೊಂಡ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವ ದ ಅಂಗವಾಗಿ ಆಯೋಜಿಸಲಿರುವ ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026 ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಸಭಾಂಗಣದಲ್ಲಿ ”ಚುಟುಕು ಯುಗಾಚಾರ್ಯ ಡಾ| ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ 22.02.2026…

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ – ಸಮಾರೋಪ ಸಮಾರಂಭ

ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ಯಕ್ಷದ್ರುವ ಯಕ್ಷ ಶಿಕ್ಷಣ – ಯಕ್ಷಗಾನ ಅಭ್ಯಾಸ ತರಗತಿಯ ಸಮಾರೋಪ ಸಮಾರಂಭ ದಿನಾಂಕ 23-01-2026 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಶಾಲಾ ಸಭಾಂಗಣದಲ್ಲಿ ಜರುಗಿತು. ಅತಿಥಿಗಳಾಗಿ ಭಾಗವಹಿಸಿದ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮಾತನಾಡಿ, “ಅವಕಾಶ ವಂಚಿತ ಸರಕಾರಿ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿರುವ ಯಕ್ಷದ್ರುವ ಯಕ್ಷ ಶಿಕ್ಷಣವು ಯಕ್ಷಗಾನದ ಅರಿವಿನ ಜೊತೆಗೆ ಸಂಸ್ಕಾರ ಭರಿತ ಜೀವನವನ್ನು ಕಟ್ಟಿಕೊಡುವುದರಲ್ಲಿ…

Read More

ಪುಷ್ಪ ಕಾಶಿ ಕದ್ರಿ ಉದ್ಯಾನವನದಲ್ಲಿ ಕಣ್ಮನ ಸೆಳೆಯುವ ವಂದೇ ಭಾರತ್ ರೈಲಿನ ಪ್ರತಿಕೃತಿ … …? ಏನಿದೆ ಬೇರೆ ಬೇರೆ ವಿಶೇಷ

ದ.ಕ. ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಕದ್ರಿ ಉದ್ಯಾನವನದಲ್ಲಿ ಜ.23 ರಿಂದ 26ತನಕ ಪುಷ್ಪ ಮೇಳ ನಡೆಯಲಿದ್ದು ಅದಕ್ಕೆ ನಿನ್ನೆ ಚಾಲನೆ ಸಿಕ್ಕಿತ್ತು . ಈ ಬಾರಿ ಬಗೆಬಗೆಯ ಹೂವುಗಳಿಂದ ತಯಾರಿಸಲಾದ ವಂದೇ ಭಾರತ್ ರೈಲಿನ ಪ್ರತಿಕೃತಿ ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿದೆ.ಈ ರೈಲು 3 ಬೋಗಿಗಳನ್ನು ಹೊಂದಿದ್ದು, 24 ಅಡಿ ಉದ್ದ ಇದೆ. ರೈಲಿನ ಹಳಿ…

Read More
error: Content is protected !!