ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ
ಕಡಬ: ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕಡಬ ತಾಲೂಕು ಆಡಳಿತ ಕಚೇರಿ ಉಪತಹಶೀಲ್ದಾರ ಸಯ್ಯುದುಲ್ ಖಾನ್ ಮಾಹಿತಿ ನೀಡಿ, ಕಡಬದಲ್ಲಿ ಕೆ.ಎಸ್ ಆರ್ ಟಿಸಿ ಬಸ್ಸು ನಿಲ್ದಾಣಕ್ಕೆ ಗುರುತಿಸಲಾದ ಕೋಡಿಂಬಾಳ ಗ್ರಾಮದ ೧೪೩/೧ಎ ಸರ್ವೆ ನಂಬರಿನ ೨.೮೩ ಎಕ್ರೆ ಜಾಗಕ್ಕೆ ಉಚ್ಚ ನ್ಯಾಯಲಯದ ತಡೆಯಾಜ್ಞೆಯಿದೆ. ಅಲ್ಲದೆ ಈ ಜಾಗಕ್ಕೆ ಸಂಪರ್ಕ ರಸ್ತೆ ಕಿರಿದಾಗಿದೆ ಎಂದು ಕೆ…