Avatar

NAMMA MEDIA 24X7

ನಿರ್ಲಕ್ಷ್ಯದ ವಿರುದ್ಧ ತೀಯಾ ಕ್ಷೇಮ ಸಭೆ ಪ್ರತಿಭಟನೆಗೆ

​ನೀಲೇಶ್ವರಂ: ತೀಯಾ ಸಮುದಾಯವು ಎದುರಿಸುತ್ತಿರುವ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ಆರಂಭಿಸುವುದಾಗಿ ತೀಯಾ ಕ್ಷೇಮ ಸಭೆಯ ಮುಖಂಡರಾದ ರವಿ ಕುಳಂಗರ, ನಾರಾಯಣನ್ ಮಯ್ಯಿಲ್, ಸತೀಶನ್ ಕುವತ್ತೋಟ್ಟಿ, ಕೆ.ಪಿ.ಪಿ ಕುಂಞಿಕೋರನ್ ಮತ್ತು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರ್ ಹಾಗೂ ನಾಗೇಶ್ ಕುಂಬಳೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ​ಪ್ರತಿಭಟನೆಯ ವಿವರಗಳು ​ಪ್ರತಿಭಟನೆಯ ಮೊದಲ ಹಂತವಾಗಿ ‘ತೀಯಾ ಸಮುದಾಯದ ಹಕ್ಕುಗಳ ಘೋಷಣಾ ಉತ್ತರ ವಲಯ ಯಾತ್ರೆ’ಯನ್ನು ಜನವರಿ 25 ರಿಂದ 28 ರವರೆಗೆ ಆಯೋಜಿಸಲಾಗಿದೆ. ಜನವರಿ 25 ರಂದು ಬೆಳಿಗ್ಗೆ 9…

Read More

ವಿಟ್ಲ;ಕೊಳ್ನಾಡು ಗ್ರಾಮಪಂಚಾಯತ್ ಮಕ್ಕಳ, ಮಹಿಳಾ ಹಾಗೂ ಅಂಗವಿಕಲರ ಗ್ರಾಮಸಭೆ

ಕೊಳ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಮಕ್ಕಳ, ಮಹಿಳಾ ಹಾಗೂ ಅಂಗವಿಕಲರ ಗ್ರಾಮಸಭೆ ಫೆಬ್ರವರಿ 22ರಂದು ಗ್ರಾಮ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುರಿಬೈಲಿನ ವಿದ್ಯಾರ್ಥಿನಿ ಅಪ್ರಾ ವಹಿಸಿಕೊಂಡು ಗಮನಸೆಳೆದರು. ಸಭೆಗೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸಭೆಯಲ್ಲಿ ಮಕ್ಕಳಿಂದ ತಮ್ಮ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ…

Read More

ಮಂಜೇಶ್ವರದಲ್ಲಿ ಮರಳು ಮಾಫಿಯಾ ವಿರುದ್ಧ ಪೊಲೀಸ್ ಕ್ರಮ: ಅನಧಿಕೃತ ಮರಳು ಸಾಗಾಟದ ವಾಹನ ವಶ, ಆರೋಪಿಗಳು ಪರಾರಿ

ಮಂಜೇಶ್ವರ: ಮರಳು ಮಾಫಿಯಾಗಳ ವಿರುದ್ಧ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಮರಳನ್ನು ಗೋಣಿ ಚೀಲಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಬೆನ್ನಟ್ಟಿ ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿದ್ದವರು ಓಡಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಕೊಯಿಪ್ಪಾಡಿ ಬದ್ರಿಯಾ ನಗರದ ಕೆ.ಬೆಡ್ ತಹ್ವನೂನ್ ಹಾಗೂ ಜೊತೆಗಿದ್ದ ಜುನೈದ್ ಎಂಬಿ ವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕುಂಬಳೆ ಎಸ್‌ಐ ಕೆ. ಶ್ರೀಜೇಶ್, ಎಎಸ್‌ಐ ಸುರೇಶ್, ಸಿಪಿಒ ಸಂದೀಪ್ ಎಂಬಿವರು ನಿನ್ನೆ ರಾತ್ರಿ ಪಟ್ರೋಲಿಂಗ್ ನಡೆಸುತ್ತಿರುವ ಮಧ್ಯೆ ಮೊಗ್ರಾಲ್ ಹೊಳೆಯಿಂದ…

Read More

ಬದಿಯಡ್ಕದಲ್ಲಿ ಗೃಹಿಣಿ ಹತ್ಯೆ: ಕೃತ್ಯದ ಸಂಪೂರ್ಣ ವಿವರ ನೀಡಿದ ಆರೋಪಿ

ಬದಿಯಡ್ಕ:ಕುಂಡಾಜೆ ಅಜಿಲದಲ್ಲಿ ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ (70) ಅವರನ್ನು ಹತ್ಯೆ ಮಾಡಿ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಡು ಕಡಿತ ಕಾರ್ಮಿಕ ಪರಮೇಶ್ವರ ಕೆ. (ರಮೇಶ್ ನಾಯ್ಕ್–48) ಅವರನ್ನು ಸಾಕ್ಷ್ಯ ಸಂಗ್ರಹಕ್ಕಾಗಿ ಕಾಸರಗೋಡು ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಹತ್ಯೆ ನಡೆದ ಪುಷ್ಪಲತಾ ಶೆಟ್ಟಿ ಅವರ ಮನೆಗೆ ಕರೆತಂದು ಪೊಲೀಸರು ಸ್ಥಳ ಮಹಜರು ಹಾಗೂ ಸಾಕ್ಷ್ಯ ಸಂಗ್ರಹ ನಡೆಸಿದರು.ಹತ್ಯೆಯನ್ನು ಹೇಗೆ ನಡೆಸಿದ್ದಾನೆ ಎಂಬುದನ್ನು ಆರೋಪಿಯು…

Read More

ಬದಿಯಡ್ಕದಲ್ಲಿ ಮದುವೆ ಭರವಸೆ ನೀಡಿ ಗಲ್ಫ್ ಉದ್ಯೋಗಿಯ ಪತ್ನಿಗೆ ಕಿರುಕುಳ: ಮೀನು ವ್ಯಾಪಾರಿ ಬಂಧನ

ಬದಿಯಡ್ಕ: ಬದಿಯಡ್ಕದಲ್ಲಿ ಗಲ್ಫ್ ಉದ್ಯೋಗಿಯ ಪತ್ನಿಗೆ ಮದುವೆ ಭರವಸೆ ನೀಡಿ ಕಿರುಕುಳ ನೀಡಿದ ಆರೋಪದ ಮೇಲೆ ಮೀನು ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ನೀರ್ಚಾಲು ಬೀಜಂತಡ್ಕ ನಿವಾಸಿ ಅಬ್ದುಲ್ ಖಾದರ್ (45) ಬಂಧಿತ ಆರೋಪಿ. 38 ವರ್ಷದ ಯುವತಿಯ ದೂರಿನ ಮೇರೆಗೆ ಬದಿಯಡ್ಕ ಪೊಲೀಸರು ಅತ್ಯಾಚಾರ ಕೇಸು ದಾಖಲಿಸಿದ್ದಾರೆ. 2025 ಆಗಸ್ಟ್ 1ರಿಂದ ಆರೋಪಿಯು ಮದುವೆ ಭರವಸೆ ನೀಡಿ ಕಿರುಕುಳ ನೀಡಿದ್ದು, ದೃಶ್ಯಗಳನ್ನು ಪತಿಗೆ ಕಳುಹಿಸುವುದಾಗಿ ಬೆದರಿಸಿದ್ದಾನೆ ಎಂದು ದೂರಲಾಗಿದೆ. ನ್ಯಾಯಾಲಯ ಆರೋಪಿಗೆ ಎರಡು ವಾರಗಳ ರಿಮಾಂಡ್ ವಿಧಿಸಿದೆ.

Read More

ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿ ಬಹಿರಂಗವಾಗುತ್ತಿದೆ:- ಶಾಸಕ ಕಾಮತ್

ಹಿರಿಯ ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಕೋಮು ಪ್ರಚೋದನೆ ಎಂಬ ಕಪೋಲಕಲ್ಪಿತ ಆರೋಪ ಹೊರಿಸಿ ಪ್ರಕರಣ ದಾಖಲಿಸಿರುವುದು, ಉಡುಪಿ ಪರ್ಯಾಯದಲ್ಲಿ ಕೇಸರಿ ಧ್ವಜ ಕುರಿತಾಗಿ ವಿವಾದ ಎಬ್ಬಿಸಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಬಹಿರಂಗಗೊಳಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಲ್ಲಡ್ಕ ಪ್ರಭಾಕರ ಭಟ್ ರವರು ಕಾರ್ಯಕ್ರಮವೊಂದರಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಇತಿಹಾಸ ಹಾಗೂ ಸಮಾಜದಲ್ಲಿ ಪ್ರಸ್ತುತ ನಡೆಯುತ್ತಿರುವ ಅನೇಕ ಗಂಭೀರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದರು. ಅದನ್ನೇ…

Read More

ರಾಜ್ಯಪಾಲರಿಗೆ ಸದನದಲ್ಲಿ ಅಗೌರವ ತೋರಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಖಂಡನೀಯ : ವಿಧಾನ ಪರಿಷತ್ ನಾಯಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು:”ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ,” ಎಂದು ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಕೃಪಾಪೋಷಿತ ಸುಳ್ಳನ್ನು ಓದದಿದ್ದಕ್ಕೆ ರಾಜ್ಯಪಾಲರ…

Read More

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 28 ರಂದು ಸಾರ್ವತ್ರಿಕ ಮುಷ್ಕರ … !

ಮಂಗಳೂರು:ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ದಿಮಾಂದ್ಯತೆ, ಆಟಿಸಂ, ಮೆದುಳಿನ ಪಾಶ್ವ, ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಶ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರಕಾರದಿಂದ ಸೂಕ್ತ ಸ್ಪಂದನೆ, ಹಾಗೂ ಕ್ಲಪ್ತ ಸಮಯಕ್ಕೆ ಅನುದಾನ ಬಾರದೆ ಸಮಸ್ಯೆಯನ್ನು ಈ ಶಾಲೆಗಳು ಎದುರಿಸುತ್ತಿದ್ದು ಈ ಬಗ್ಗೆ ಸರಕಾರ ಕೋರಿಕೆಗೆ ಈಡೇರಿಸಬೇಕ್ಕೆನ್ನುವ…

Read More

ಪ್ರಿಯಕರನೊಂದಿಗೆ ಸರಸದ ಜೀವನಕ್ಕಾಗಿ ಒಂದೂವರೆ ವರ್ಷದ ಕಂದಮ್ಮನನ್ನು ಸಮುದ್ರಕ್ಕೆ ಎಸೆದು ಕೊಂದ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಕಣ್ಣೂರು:ಪ್ರಿಯಕರನೊಂದಿಗೆ ಮೋಜಿನ ಜೀವನ ಸಾಗಿಸುವ ಉದ್ದೇಶದಿಂದ ಒಂದೂವರೆ ವರ್ಷದ ಬಾಲಕನನ್ನು ಸಮುದ್ರಕ್ಕೆ ಎಸೆದು ಕೊಂದ ಪ್ರಕರಣದಲ್ಲಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತಳಿಪರಂಬ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಥೈಯಿಲ್ ಬೀಚ್ ನಿವಾಸಿ ಶರಣ್ಯಗೆ ಶಿಕ್ಷೆ ವಿಧಿಸಿದೆ. ಮಗುವನ್ನು ಕೊಂದ ಪ್ರಕರಣದಲ್ಲಿ ತಾಯಿ ತಪ್ಪಿತಸ್ಥೆ ಎಂದು ನ್ಯಾಯಾಲಯವು ಈ ಹಿಂದೆ ಘೋಷಿಸಿತ್ತು. ಪಿತೂರಿ ಮತ್ತು ಪ್ರಚೋದನೆಯನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಶರಣ್ಯಳ ಸ್ನೇಹಿತ ನಿತಿನ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತು. ಪೊಲೀಸರು ಮತ್ತು ಪ್ರಾಸಿಕ್ಯೂಷನ್ ಪುರಾವೆಗಳನ್ನು ಕಂಡುಹಿಡಿಯಲು ವಿಫಲವಾಗಿದೆ ಎಂದು…

Read More

ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಳ

ಮಂಗಳೂರು : ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಾಗಿದೆ .ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಅಂತರರಾಜ್ಯ ಹೆದ್ದಾರಿಯ ಟೋಲ್ ಬೂತ್ ಮೂಲಕ ಹಾದುಹೋಗುವ ಪ್ರತಿ ಪ್ರಯಾಣಿಕರು ಈಗ ಮೂಲ ದರಕ್ಕಿಂತ ಹೆಚ್ಚುವರಿಯಾಗಿ 7 ರೂಪಾಯಿ ಪಾವತಿಸಬೇಕಾಗುತ್ತದೆ. ಈವರೆಗೆ ಕಾಸರಗೋಡಿನಿಂದ ಮಂಗಳೂರಿಗೆ 81 ರೂಪಾಯಿ ಇದ್ದ ಟಿಕೆಟ್ ದರವು ಇದೀಗ…

Read More
error: Content is protected !!