Avatar

NAMMA MEDIA 24X7

126 ಮಕ್ಕಳಿಂದ ಒಂದೇ ವೇದಿಕೆಯಲ್ಲಿ ಶತಸ್ಮರಣ-ಶತನಮನ-ಚೆಲ್ಡುವಾಲೆ ಭಜನಾ ಸಂಪನ್ನ

ಮಂಗಳೂರು: ಮಂಗಳೂರು ರಥಬೀದಿ ಗುರುವಾರ ಇಳಿಸಂಜೆ ಅಕ್ಷರಶ: ಜನಸಾಗರಕ್ಕೆ ಸಾಕ್ಷಿಯಾಗಿತ್ತು. ಕಾಶೀಮಠದ ಹಿರಿಯ ಯತಿವರೇಣ್ಯರಾದ, ವೃಂದಾವನಸ್ಥ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಪ್ರಯುಕ್ತ 126 ಮಕ್ಕಳು ಒಂದೇ ವೇದಿಕೆಯಲ್ಲಿ ಏಕಕಂಠದಲ್ಲಿ 11 ವಿವಿಧ ಭಜನಾ ಹಾಡುಗಳನ್ನು ಹಾಡುವ ಮೂಲಕ ಸ್ವಾಮೀಜಿಯವರಿಗೆ ಭಜನಾ ಸೇವೆಯನ್ನು ಸಮರ್ಪಿಸಿದರು. ಪುಟ್ಟ ಚಿಣ್ಣರಿಂದ ಹಿಡಿದು ಎಂಟನೇ ತರಗತಿಯ ತನಕ ಮಕ್ಕಳು ಶತಸ್ಮರಣ – ಶತನಮನ- ಚೆಲ್ಡುವಾಲೆ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪರೂಪದ ವಿಶೇಷ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಮಂಗಳೂರು ರಥಬೀದಿ ಶ್ರೀ ವೆಂಕಟರಮಣ…

Read More

ಫೆ.4 ರಿಂದ 10 ರವರೆಗೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು  ನೇಮೋತ್ಸವ.

ಮಂಗಳೂರು : ಮುಲ್ಕಿ ತಾಲೂಕಿನ ಸಸಿಹಿತ್ತು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಸಮಾರಂಭ ಫೆಬ್ರವರಿ 4 ರಿಂದ 10 ರ ತನಕ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸಿ.ಬಿ ಕರ್ಕೆರ ಹೇಳಿದರು. ಅವರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇತಿಹಾಸ ಪುರುಷರಾದ ಕಾಂತಾಬಾರೆ ಬೂದಾಬಾರೆಯರು ರಾತ್ರಿ ಬೆಳಗಾಗುವುದರೊಳಗೆ ಕೈಯಾರೆ ನಿರ್ಮಿಸಿದ ಈ ಕ್ಷೇತ್ರ, ಸಸಿಹಿತ್ತುವಿನ ಕಡಲತಡಿಯ…

Read More

ಬೀಜ ಮಸೂದೆ,ವಿದ್ಯುತ್ ಮಸೂದೆಗಳು ದೇಶದ ಹಾಗೂ ರೈತಾಪಿ ಜನತೆಯ ಹಿತಾಸಕ್ತಿಗಳಿಗೆ ಮಾರಕ – ಕೆ ಯಾದವ ಶೆಟ್ಟಿ

ಕೇಂದ್ರ ಸರ್ಕಾರ ಜಾರಿಗೆ ಮಾಡಲು ಹೊರಟ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಗಳು ಯೋಜನೆಯ ಉದ್ದೇಶಗಳನ್ನೇ ಬುಡಮೇಲುಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳ ಹಿತಾಸಕ್ತಿಗಳನ್ನೇ ಪ್ರದಾನವನ್ನಾಗಿಟ್ಟುಕೊಂಡು ದೇಶದ ಹಾಗೂ ರೈತಾಪಿ ಜನತೆಯ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಬಲಿ ಕೊಟ್ಟಿದೆ.ಇವುಗಳ ವಿರುದ್ಧ ದೇಶದ ಸಮಸ್ತ ಜನಕೋಟಿ ಒಂದಾಗಿ ಹೋರಾಡದಿದ್ದರೆ ದೇಶವನ್ನೇ ಉಳಿಸುವುದು ಕಷ್ಟಸಾದ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ನಾಯಕರಾದ ಕೆ ಯಾದವ ಶೆಟ್ಟಿಯವರು ಆತಂಕ ವ್ಯಕ್ತಪಡಿಸಿದರು. ಅವರು ಬೀಜ ಮಸೂದೆ ವಿದ್ಯುತ್ ಮಸೂದೆ…

Read More

ಇ-ಖಾತಾ ಸಮಸ್ಯೆ ಕಾಂಗ್ರೆಸ್ ಕೃಪಾಪೋಷಿತ ಗ್ಯಾರಂಟಿ :- ಶಾಸಕ ಕಾಮತ್

ಮ.ನ.ಪಾ. ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಇನ್ನೂ ಸಹ ಜನರು ಹರಸಾಹಸ ಪಡುವಂತಾಗಿದ್ದು ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಗ್ಗೆ ಚಿಂತೆಯೇ ಇಲ್ಲವಾಗಿರುವುದು ದುರಂತವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ದಿನದಿಂದಲೂ ನಗರ ವ್ಯಾಪ್ತಿಯಲ್ಲಿ ಅವ್ಯವಸ್ಥೆ ಉಂಟಾಗಿದೆ. ದೂರದ ಊರುಗಳಲ್ಲಿ, ವಿದೇಶಗಳಲ್ಲಿ ನೆಲೆಸಿರುವ ಖರೀದಿದಾರರು, ಮಾರಾಟಗಾರರು ಇಲ್ಲಿಗೆ ಬಂದು ಹಲವು ದಿನಗಳ ನಂತರವೂ ತಮ್ಮ ಕೆಲಸವಾಗದೇ ಬರಿಗೈಯಲ್ಲಿ ಮರಳುತ್ತಿದ್ದಾರೆ. ಮೊನ್ನೆ…

Read More

ಬೆಳ್ಳಾರು: ಪ್ರಸಿದ್ಧ ವಾಸ್ತು ಶಿಲ್ಪಿ ಧರ್ಮೇದ್ರ ಆಚಾರ್ಯ ನಿಧನ

ಉಪ್ಪಳ: ಬೇಕೂರು ಬಳಿಯ ಬೆಳ್ಳಾರು ನಿವಾಸಿ ವಾಸ್ತು ಶಿಲ್ಪಿ ಧರ್ಮೇಂದ್ರ ಆಚಾರ್ಯ [78] ಅಲ್ಪ ಕಾಲದ ಅಸೌಖ್ಯದಿಂದ  ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ರೋಹಿಣಿ, ಮಕ್ಕಳಾದ ಕಿರಣ್ ಆಚಾರ್ಯ, ಯತೀಶ್ ಆಚಾರ್ಯ, ಪವಿತ್ರ, ಸೊಸೆಯಂದಿರಾದ ಶ್ವೇತ, ದೀಕ್ಷಿತ, ಅಳಿಯ ಪಾಂಡುರoಗ ಆಚಾರ್ಯ, ಸಹೋದರಿ ಸೀತಾ, ಸಹೋದರ ಲಕ್ಷಣ ಆಚಾರ್ಯ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸoಸ್ಕಾರ  ಸಂಜೆ ಮನೆ ಪರಿಸರದಲ್ಲಿ ನಡೆಯಿತು.

Read More

ಕುಂಬಳೆ ಟೋಲ್ ಪ್ಲಾಸಾ ಹಿಂಸಾಚಾರ ಪ್ರಕರಣ: ಇಬ್ಬರ ಬಂಧನ

ಕಾಸರಗೋಡು:ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಸಾದಲ್ಲಿ ಟೋಲ್ ವಸೂಲಿಗೆ ವಿರೋಧವಾಗಿ ನಡೆದ ಪ್ರತಿಭಟನೆಯ ವೇಳೆ ಅಕ್ರಮಾಚಾರ ನಡೆಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೊಡಿಯಮ್ಮ, ಉಜಾರ್‌ನ ಫೈಸಲ್ ಅಬ್ದುಲ್ ರಹ್ಮಾನ್ (28) ಹಾಗೂ ಮಂಜೇಶ್ವರಂ, ವಾಮಂಜೂರು ಚೆಕ್ ಪೋಸ್ಟ್ ಸಮೀಪದ ನಿವಾಸಿ ಟಿ. ಅಬ್ದುಲ್ ನಾಸರ್ (46) ಅವರನ್ನು ಕುಂಬಳ ಪೊಲೀಸರು ಬಂಧಿಸಿದ್ದಾರೆ. ಆಕ್ಷನ್ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಂದರ್ಭ ಉಂಟಾದ ಸಂಘರ್ಷದ ವೇಳೆ ಟೋಲ್ ಪ್ಲಾಸಾದ ಮೇಲೆ ದಾಳಿ ನಡೆಸಿ ಉಪಕರಣಗಳನ್ನು ಹಾನಿಗೊಳಪಡಿಸಿದ ಆರೋಪದ…

Read More

ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ ಅವರ ಸಾವು ಕೊಲೆ; ಕತ್ತು ಹಿಸುಕಿಸಿ ಉಸಿರುಗಟ್ಟಿಸಿ ಹತ್ಯೆ – ಮರಣೋತ್ತರ ಪರೀಕ್ಷಾ ವರದಿ; ಸ್ಥಳಕ್ಕೆ ಪೊಲೀಸ್ ಸರ್ಜನ್ ಭೇಟಿ

ಬದಿಯಡ್ಕ: ಕುಂಭ್ಡಾಜೆ ಮೌವ್ವಾರ್ ಅಜಿಲಾ ಪ್ರದೇಶದಲ್ಲಿನ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ (70) ಅವರನ್ನು ಮೃತ ಸ್ಥಿತಿಯಲ್ಲಿ ಪತ್ತೆ ಹಚ್ಚಿದ ಪ್ರಕರಣವು ಕೊಲೆಯೇ ಆಗಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ದೃಢಪಡಿಸಿದೆ. ಕೈಗಳಿಂದ ಕತ್ತು ಹಿಸುಕಿಸಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಪೊಲೀಸ್ ಸರ್ಜನ್ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೆರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಮರಣೋತ್ತರ ಪರೀಕ್ಷಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಸಾವು ಅಸಹಜವಾಗಿದೆ ಎಂಬ ಅನುಮಾನ…

Read More

ಕುಂಪಲ–ಬೈಪಾಸ್ ಡಿಮಾರ್ಟ್‌ನಲ್ಲಿ ಉದ್ಯೋಗವಿದೆ ಎಂದು ಸುಳ್ಳು ಜಾಹಿರಾತು: ನೂರಾರು ಮುಗ್ಧರು ಶಾಪಿಂಗ್ ಮಾಲ್ ಎದುರು ಜಮಾವಣೆ

ಮಂಗಳೂರು :ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ಸಂಸ್ಥೆಯ ಶಾಖೆಯೊಂದು ಉಳ್ಳಾಲ ತಾಲೂಕಿನ ಕುಂಪಲ- ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದೆ. ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ ವಿಘ್ನ ಸಂತೋಷಿಗಳು ಜಾಲತಾಣಗಳಲ್ಲಿ ಜಾಹಿರಾತು ಹರಿಯಬಿಟ್ಟಿದ್ದು, ಉದ್ಯೋಗ ಅರಸಿ ಮಾಲ್ ಕಡೆಗೆ ಧಾವಿಸಿ ಬಂದ ನೂರಾರು ಮುಗ್ಧ ಜನರಿಗೆ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿಯ ಮಾತು ಕೇಳಿ ಶಾಕ್ ಆಗಿದೆ.ಸಾಮಾಜಿಕ ಜಾಲತಾಣವನ್ನ ಎಷ್ಟರ ಮಟ್ಟಿಗೆ ದುರುಪಯೋಗ ಪಡಿಸಬಹುದೆಂಬುದಕ್ಕೆ ಕುಂಪಲ -ಬೈಪಾಸಿನ ನೂತನ ಡಿಮಾರ್ಟ್ ನಲ್ಲಿ ಉದ್ಯೋಗಾವಕಾಶದ ಜಾಹಿರಾತು ಹರಿಯಬಿಟ್ಟ ಬೆಳವಣಿಗೆಯೇ…

Read More

ಮೂಡುಬಿದಿರೆ ಪುತ್ತಿಗೆಯಲ್ಲಿ 30 ಅಡಿ ಬಾವಿಗೆ ಬಿದ್ದು ಸುರಂಗದಲ್ಲಿ ಸಿಲುಕಿದ್ದ ವ್ಯಕ್ತಿ: ಅಗ್ನಿಶಾಮಕ ದಳದ ಸಾಹಸಮಯ ರಕ್ಷಣೆ

ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬುಧವಾ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ.ಪುತ್ತಿಗೆಯ ಜಾಣಪ್ಪ ಗೌಡರ ಪುತ್ರ ರಾಧಾಕೃಷ್ಣ (38 ವರ್ಷ) ಎಂಬವರು ಬುಧವಾರ ರಾತ್ರಿ ಅಕಸ್ಮಿಕವಾಗಿ ಸುಮಾರು 30 ಅಡಿ ಆಳದ ಬಾವಿಗೆ ಬಿದ್ದಿದ್ದರು. ಬಿದ್ದ ರಭಸಕ್ಕೆ ಅವರು ಬಾವಿಯ ಒಳಗಿದ್ದ ಸುಮಾರು 20 ಅಡಿ ಆಳದ ಸುರಂಗದೊಳಗೆ ಸಿಲುಕಿಕೊಂಡಿದ್ದರು. ಇದು ರಕ್ಷಣಾ ಕಾರ್ಯಕ್ಕೆ ದೊಡ್ಡ ಸವಾಲಾಗಿತ್ತು. ರಕ್ಷಣೆ ಕಾರ್ಯಾಚರಣೆಗೆ ಕಾರ್ಕಳ…

Read More

ಜನವರಿ 18 ರಂದು ಮಂಗಳೂರಿನಲ್ಲಿ ‘ಲಯ ಲಾವಣ್ಯ’ ಸಂಗೀತೋತ್ಸವ… !

ಮಂಗಳೂರು:ಕರಾವಳಿ ಭಾಗದ ಸಂಗೀತಾಸಕ್ತರಿಗೆ ನಾವಿನ್ಯ ರೀತಿಯ ಸಂಗೀತ ಕಾರ್ಯಕ್ರಮವನ್ನು ನೀಡುತ್ತಿರುವ ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಜನವರಿ 18ರಂದು ಭಾನುವಾರ ಸಂಜೆ 6.00ರಿಂದ ‘ಲಯ ಲಾವಣ್ಯ’ ಎಂಬ ಭಾರತೀಯ ತಾಳವಾದ್ಯಗಳ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಟ್ರಸ್ಟಿಅಂಕುಶ್ ಎನ್ ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ‘ಕರ್ಣಾಟಕ ಬ್ಯಾಂಕ್‌ನ’ ಪ್ರಾಯೋಜಕತ್ವದಲ್ಲಿ ನಡೆಯುವ ಈ ಕಾರ್ಯಕ್ರಮದ ಪರಿಕಲ್ಪನೆ ಹಾಗೂ ನಿರ್ದೇಶನವನ್ನು ಖ್ಯಾತ ಮೃದಂಗ ವಿದ್ವಾಂಸರಾದ ಆನೂರು…

Read More
error: Content is protected !!