Avatar

NAMMA MEDIA 24X7

ಉಡಾವಣಾ ವೈಫಲ್ಯ ಅನುಭವಿಸಿದ್ದ 16 ಉಪಗ್ರಹಗಳ ಪೈಕಿ ಹಾರಾಟ ನಡೆಸುತ್ತಿದೆ ಸ್ಪ್ಯಾನಿಶ್ ಉಪಗ್ರಹ!

ಶ್ರೀಹರಿಕೋಟ :ಇಸ್ರೋದ ಪಿಎಸ್‌ಎಲ್‌ವಿ-ಸಿ62 ರಾಕೆಟ್, 3ನೇ ಹಂತದಲ್ಲಿ ಉಡಾವಣಾ ವೈಫಲ್ಯ ಅನುಭವಿಸಿ ಅದರಲ್ಲಿದ್ದ ಎಲ್ಲ 16 ಉಪಗ್ರಹಗಳು ನಾಪತ್ತೆ ಆಗಿದ್ದವು. ಅವುಗಳು ಆಗಸದಲ್ಲೇ ದಹನ ಆಗಿರಬಹುದು ಎಂಬ ಶಂಕೆ ಇತ್ತು. ಆದರೆ ಇದರ ನಡುವೆ ಸ್ಪಾನಿಷ್ ಉಪಗ್ರಹವೊಂದು ಜೀವಂತವಾಗಿದೆ ಹಾಗೂ ನಿರ್ಣಾಯಕ ಡೇಟಾವನ್ನು ಭೂಮಿಗೆ ರವಾನಿಸಿದೆ. ಈ ಬಗ್ಗೆ ಉಪಗ್ರಹ ಸಿದ್ಧಪಡಿಸಿ ಅದನ್ನು ಪಿಎಸ್‌ಎಲ್‌ವಿಯಲ್ಲಿ ಕಳಿಸಿದ್ದ, ಸ್ಪ್ಯಾನಿಷ್ ಸ್ಮಾರ್ಟ್‌ ಅಪ್ ‘ಆರ್ಬಿಟಲ್ ಪ್ಯಾರಡೈಮ್’ ಟೀಟ್ ಮಾಡಿದೆ. ‘ನಮ್ಮ ಕೆಸ್ಟೈಲ್ ಇನಿಶಿಯಲ್ ಡೆಮಾನ್ಸ್ಟರ್ (ಕಿಡ್)’ ಕ್ಯಾಪ್ಯೂಲ್ ಗಮನಾರ್ಹವಾಗಿ ಬದುಕುಳಿದಿದೆ’…

Read More

ಪ್ರತಿಷ್ಠಿತ ಶ್ರೀ ಕುಂದೇಶ್ವರ ಪ್ರಶಸ್ತಿ ಪ್ರಕಟ … !

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ರಂಗದ ಅಗ್ರಮಾನ್ಯ ಮಹಿಳಾ ಭಾಗವತೆಯಾದ ಕಾವ್ಯಶ್ರೀ ಅಜೇರನ್ನು ಮತ್ತು ರಂಗಭೂಮಿ ಕ್ಷೇತ್ರಕ್ಕೆ ನೀಡಲಾಗುವ ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಹಿರಿಯ ಕಲಾವಿದ ಉಮೇಶ್ ಮಿಜಾರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು , ಶ್ರೀ ಕುಂದೇಶ್ವರ ದೇಗುಲದ ಧರ್ಮದರ್ಶಿ, ಯಕ್ಷಗಾನ ಮೇಳ…

Read More

ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಸನ್ಮಾನ

ಉಡುಪಿ:ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ ನಡೆಯಿತು.ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಸನ್ಮಾನ ನಡೆಯಿತು. ಅಲೆವೂರಿಗೆ ಆಗಮಿಸಿದ ಶ್ರೀಗಳಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಅಲೆವೂರು ಕಟ್ಟೆ ಗಣಪತಿ‌ ಸನ್ನಿಧಿ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀವರ ತೀರ್ಥರಿಗೆ ಬಹಳ ಪ್ರಿಯವಾದ ತಾಣ. ಈ ನಿಟ್ಟಿನಲ್ಲಿ ಅಲೆವೂರಿನ‌ ಭಕ್ತರಿಗೆ ಶೀರೂರು ಪರ್ಯಾಯ ವಿಶೇಷ ಸಂಭ್ರಮವನ್ನು ತಂದಿದೆ. ಬಳಿಕ ಕಟ್ಟೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ…

Read More

ರಸ್ತೆ ವಿಚಾರದ ಗಲಾಟೆ ಹೊಡೆದಾಟಕ್ಕೆ ತಿರುಗು; ಬಿಸಿರೋಡಿನಲ್ಲಿ ಕುಟುಂಬದವರು ಪತ್ರಿಕಾಗೋಷ್ಠಿ ಮೂಲಕ ರಕ್ಷಣೆ ಮನವಿ

ಬಂಟ್ವಾಳ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಇದೀಗ ಹೊಡೆದಾಟದವರೆಗೆ ತಲುಪಿದ್ದು ನಮಗೆ ರಕ್ಷಣೆ ಕೊಡಿ ಎಂದು ಕುಟುಂಬವೊಂದು ಪತ್ರಿಕಾಗೋಷ್ಠಿಯ ಮೂಲಕ ಮನವಿ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಕುಟುಂಬದ ಪರವಾಗಿ ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಣ್ಣಂಗಳ ನಾಗರಾಜ ಮತ್ತು ಸುರೇಶ್ ನಾಯ್ಕ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಕೇಳಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಸುಣ್ಣಂಗಳ ನಾಗರಾಜ…

Read More

ಅನಿಲ ಸಾಗಾಟದ ಟ್ಯಾಂಕರ್‌ಗೆ ಟೆಂಪೋ ಡಿಕ್ಕಿ; ಚಾಲಕ ಗಾಯ, ಅನಿಲ ಸೋರಿಕೆ ಭೀತಿಯಲ್ಲಿ ರಕ್ಷಣೆ ಕಾರ್ಯಾಚರಣೆ

ಬಂಟ್ವಾಳ : ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ‌ ಸಾಗಾಟದ ಟ್ಯಾಂಕರ್ ವಾಹನಕ್ಕೆ‌ ಹಿಂಬದಿಯಿಂದ‌ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಲ್ಲಡ್ಕ ಫ್ಲೈ ಓವರ್ ನಲ್ಲಿ‌ ಅತಿವೇಗದಿಂದ ಬಂದ‌ ಟೆಂಪೋ ವಾಹನ‌ ಸಮುದ್ರ ಹೋಟೆಲ್ ಬಳಿ ಚಾಲಕನ‌ ನಿಯಂತ್ರಣ ತಪ್ಪಿ‌ ಟ್ಯಾಂಕರ್ ಗೆ‌‌ ಹಿಂದಿನಿಂದ‌ ಡಿಕ್ಕಿಯಾಗಿದೆ. ಪರಿಣಾಮ ಚಾಲಕನ ಕೈ ವಾಹನಗಳ‌ನಡುವೆ ಸಿಲುಕಿಕೊಂಡಿತ್ತು. ಗ್ಯಾಸ್ ಟ್ಯಾಂಕರ್ ಗೆ ವಾಹನ‌‌ ಡಿಕ್ಕಿಯಾಗಿದ್ದರಿಂದ, ಅನಿಲ‌ ಸೋರಿಕೆಯ ಭಯದಿಂದ‌ ಯಾರೂ ವಾಹನಗಳ‌…

Read More

ತಾಳಮದ್ದಲೆ ಮತ್ತು ಕಲಾವಿದರಿಗೆ ವಿಶ್ವೇಶ್ವರ ಭಟ್ಟರಿಂದ ಅವಹೇಳನ: ವ್ಯಾಪಕ ಖಂಡನೆ- ಕ್ಷಮಾಪಣೆಗೆ ಆಗ್ರಹ

ಉಡುಪಿ: ಕರಾವಳಿ, ಮಲೆನಾಡು ಭಾಗದ ಪ್ರಮುಖ ಕಲೆಗಳಲ್ಲಿ ಒಂದಾದ ಯಕ್ಷಗಾನ ತಾಳಮದ್ದಲೆ ಹಾಗೂ ತಾಳಮದ್ದಲೆ ಅರ್ಥಧಾರಿಗಳ ಕುರಿತಂತೆ ಅವಹೇಳನ, ಲೇವಡಿ, ಅಪಮಾನದ ಮಾತುಗಳನ್ನು ಸತತವಾಗಿ ತಮ್ಮ ಮಾಧ್ಯಮಗಳಲ್ಲಿ ಬರೆಯುತ್ತಿರುವ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್ಟದ ನಡೆಗೆ ತಾಳಮದ್ದಲೆ ಕಲಾವಿದರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಭಟ್ಟರು ತಕ್ಷಣ ಈ ಬಗ್ಗೆ ಕ್ಷಮಾಪಣೆ ಕೇಳಿ, ವಿವಾದಕ್ಕೆ ಇತಿಶ್ರೀ ಹಾಡಬೇಕೆಂದು ಒಕ್ಕೊರನಿಂದ ಆಗ್ರಹಿಸಿದ್ದಾರೆ. ವಿಶ್ವೇಶ್ವರ ಭಟ್ಟರು ಕಳೆದ ಕೆಲ ಸಮಯದಿಂದ ತಮ್ಮ ಮಾಧ್ಯಮಗಳಲ್ಲಿ ತಾಳಮದ್ದಲೆ ಕಲಾವಿದರ ಕುರಿತಂತೆ ನಡೆಸುತ್ತಿರುವ ಅವಹೇಳನದ…

Read More

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು. ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಆಗಿದ್ದು, ತನ್ನ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮಂಗಳೂರಿನ ಶಕ್ತಿ ಕಾಲೇಜ್ ನಲ್ಲಿ , ಹೈಸ್ಕೂಲ್ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿಯೂ ಮತ್ತು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿದ ವಿದ್ಯಾರ್ಥಿಯಾಗಿರುವರು….

Read More

ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿ ಪೂರ್ಣ; ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಉದ್ಘಾಟನೆ

ಮ.ನ.ಪಾ ವ್ಯಾಪ್ತಿಯ ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ನಂತರ ಮಾತನಾಡಿದ ಶಾಸಕರು, ಚಿಕಿತ್ಸೆಗಾಗಿ ಇಲ್ಲಿ ಬರುವ ಎಲ್ಲಾ ರೋಗಿಗಳಿಗೆ ಉತ್ತಮ ಸೌಲಭ್ಯ ನೀಡುವಂತಾಗಲು ನೂತನ ಕೊಠಡಿ ಹಾಗೂ ಸುಸಜ್ಜಿತ ಮೇಲ್ಚಾವಣಿಯನ್ನು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಸಹಾಯದಿಂದ ನಿರ್ಮಿಸಲಾಗಿದ್ದು ಸ್ಥಳೀಯ ನಿವಾಸಿ ಹಾಗೂ ನನ್ನ ಶಾಲಾ ದಿನಗಳ ಶಿಕ್ಷಕಿ ಲತಾ ಟೀಚರ್ ರವರು ಉದ್ಘಾಟನೆಗೊಳಿಸಿರುವುದು ಅತ್ಯಂತ ಸಂತೋಷ ತಂದಿದೆ. ಅಳಪೆ, ಕಣ್ಣೂರು, ಮರೋಳಿ, ಬಜಾಲ್, ಶಕ್ತಿನಗರ,…

Read More

‘ನೀ ಬಾಂಗ್ಲಾದೇಶದವನಾ’ ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ

ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ…

Read More

ಅತ್ತಾವರ–ಪಾಂಡೇಶ್ವರ ಪ್ರದೇಶಗಳಲ್ಲಿ ಕೃತಕ ನೆರೆಯ ಶಾಶ್ವತ ಪರಿಹಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ, ತುರ್ತು ಕ್ರಮಕ್ಕೆ ಸೂಚನೆ

ಮ.ನ.ಪಾ ವ್ಯಾಪ್ತಿಯ ಅತ್ತಾವರ 5ನೇ ಅಡ್ಡ ರಸ್ತೆ, ಪಾಂಡೇಶ್ವರ, ಶಿವನಗರ, ಸುಭಾಷ ನಗರ ಮೊದಲಾದೆಡೆ ಕಳೆದ ಮಳೆಗಾಲದಲ್ಲಿ ಕೃತಕ ನೆರೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು ಅದಕ್ಕೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಎಚ್ಚರವಹಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮದ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ನಡೆಸಿದರು. ರಾಜಕಾಲುವೆಯ ನೀರು ಹಾದು ಹೋಗಿ ಹೊಯ್ಗೆ ಬಜಾರ್ ಬಳಿ ನದಿ ಸೇರುವ ಭಾಗದಲ್ಲಿ ನೀರು ಸರಾಗವಾಗಿ ಹರಿಯಲು ಅಡಚಣೆಯಾಗದಂತೆ ತಕ್ಷಣ ಹೂಳೆತ್ತುವ…

Read More
error: Content is protected !!