Avatar

NAMMA MEDIA 24X7

ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ಕ್ಷೇತ್ರದಲ್ಲಿ ವಿಶೇಷ ದೀಪೋತ್ಸವದೊಂದಿಗೆ ಧನುರ್ಮಾಸ ಪೂಜೆ ಸಂಪನ್ನ.

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದಲ್ಲಿ ಕಳೆದ ಡಿಸೆಂಬ‌ರ್ 16 ರಿಂದ ಆರಂಭಗೊಂಡ ಧನುರ್ಮಾಸ ಪೂಜಾ ಮಹೋತ್ಸವ ಇಂದು (14-01-2026) ಮಕರ ಸಂಕ್ರಮಣ ದಿನದಂಗವಾಗಿ ಮುಂಜಾನೆ ವಿಶೇಷ ದೀಪೋತ್ಸವದೊಂದಿಗೆ ಶ್ರೀ ಕಾಳಿಕಾ ಪರಮೇಶ್ವರೀ ದೇವಿಗೆ ಹಾಗೂ ಶ್ರೀ ಮಹಾಗಣಪತಿ, ಶ್ರೀ ವಿಶ್ವಕರ್ಮ ದೇವರಿಗೆ ಪೂಜೆ ನೆರವೇರುವುದರೊಂದಿಗೆ ಸಮಾಪ್ತಿಗೊಂಡಿತು. ಮುಂಜಾನೆ 3 ಗಂಟೆಯಿಂದ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ ನಡೆಯಿತು.ಬಳಿಕ ಕಾಸರಗೋಡು ಉಳಿಯತಡ್ಕ ಶ್ರೀ ಗುರುಕೃಪಾ ವೈದಿಕ ಶಿಕ್ಷಣ ಸಮಿತಿಯ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ…

Read More

“ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 2026–27: ಪ್ರಶಾಂತ್ ಪೂಂಜಾಲಕಟ್ಟೆ ಅಧ್ಯಕ್ಷರಾಗಿ ಪದಗ್ರಹಣ”

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ನೂತನ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲೆಯ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯದಂತಹ ಸಮಾಜಮುಖಿ ಕಾರ್ಯಗಳ ಮೂಲಕ ವಿಶೇಷ ಹೆಸರನ್ನು ಗಳಿಸಿಕೊಂಡಿದ್ದು, ಹಲವು ಸವಾಲುಗಳ ಮಧ್ಯೆ ಎಲ್ಲಾ ಪತ್ರಕರ್ತರ ಸಹಕಾರದೊಂದಿಗೆ ಸಂಘ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಪ್ರಶಾಂತ್ ಪೂಂಜಾಲಕಟ್ಟೆ ನೇತೃತ್ವದ ಬಂಟ್ವಾಳದ ಸಂಘವು…

Read More

ಬೆಳಗಾವಿಯ ಅಧಿವೇಶದಲ್ಲಿ ಚರ್ಚೆಯಾಗಿದ್ದು ಮುಖ್ಯ ಮಂತ್ರಿ ಬದಲಾವಣೆ ಬಗ್ಗೆ ಹೊರತು , ರಾಜ್ಯದ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಅಲ್ಲ , ಅಲ್ಲಿ ನಡೆದದ್ದು ನಾಮಕಾವಸ್ತೆಯ ಅಧಿವೇಶನ : ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್

ಮಂಗಳೂರು:ಉತ್ತರ ಕರ್ನಾಟಕದ ಬೆಳಗಾವಿಯ ಅಧಿವೇಶದಲ್ಲಿ ರಾಜ್ಯದ ಅಭಿವೃದ್ಧಿಯ ಕುರಿತು ಚರ್ಚೆಗಳು ನಡೆಯದೆ ಮುಂದಿನ ಮುಖ್ಯಮಂತ್ರಿಗಳು ಯಾರು ಎನ್ನುವುದರ ಬಗ್ಗೆ ಚರ್ಚೆಗಳು ನಡೆದಿದೆ . ಈ ಮೂಲಕ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿರ್ಲಕ್ಷ್ಯವನ್ನು ತೋರಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಆಸಕ್ತಿ ಇಲ್ಲ. ರಾಜ್ಯದ ರೈತರ , ಮಹಿಳೆಯರ ಕಲ್ಯಾಣ ಯೋಜನೆಗಳ ಬಗ್ಗೆ…

Read More

ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ “ಜಲಜೀವನ್ ಮಿಷನ್: ಕೋಡಿ ಗ್ರಾಮಕ್ಕೆ ದಿನದ 24 ಗಂಟೆಯೂ ಕುಡಿಯುವ ನೀರು.!

ಉಡುಪಿ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ “ಜಲಜೀವನ್ ಮಿಷನ್” ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಜನರ ಬಹುದಿನಗಳ ಕನಸೊಂದು ಈಡೇರಿದಂತಾಗಿದೆ. ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಯೂ ನೀರು ಸರಬರಾಜು ಮಾಡುವ ಪೈಲೆಟ್ ಪ್ರಾಜೆಕ್ಟ್ ಇದಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆಯ್ಕೆಯಾದ ಏಕೈಕ ಗ್ರಾಮ ಪಂಚಾಯತ್ ಇದಾಗಿದೆ. ಈ ಮೂಲಕ ಕೋಡಿ…

Read More

ಮಗಳಿಗೆ ಹುಟ್ಟುಹಬ್ಬದ ಸಂಭ್ರಮದ ಹಿನ್ನಲೆ : ರಂಗೇ ಕಾಣದ ಬಸ್ ನಿಲ್ದಾಣಕ್ಕೆ ರಂಗು ತುಂಬಿದ ಕಲಾವಿದ ಮಹೇಶ್ ಮರ್ಣೆ … !

ಉಡುಪಿ:ಉಡುಪಿಯ ಮರ್ಣೆ ಕಲಾವಿದರ ಊರು ಅಂತಲೇ ಪ್ರಸಿದ್ಧಿ. ಇಲ್ಲಿನ ಪ್ರಸಿದ್ಧ ಕಲಾವಿದ ಮಹೇಶ್ ಮರ್ಣೆ ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ಊರಿನಲ್ಲಿದ್ದ ಪಾಳು ಬಿದ್ದ ಬಸ್ ನಿಲ್ದಾಣಕ್ಕೆ ಹೊಸ ಮೆರುಗು ನೀಡಿದರು. ತನ್ನ ಅಪೂರ್ವ ಪ್ರತಿಭೆಯಿಂದ ಬಸ್ ನಿಲ್ದಾಣವನ್ನು ಅಲಂಕರಿಸಿದರು. ಬಣ್ಣ ಬಣ್ಣದ ಚಿತ್ತಾರ ಬಿಡಿಸಿ ಆಕರ್ಷಕವಾಗಿಸಿದರು. ಈಗ ಬಸ್ ನಿಲ್ದಾಣದಲ್ಲಿ ನಿಂತರೆ ವಿಶಿಷ್ಟ ಅನುಭವ ಆಗುತ್ತೆ. ಈ ಕಲರ್ ಫುಲ್ ಬಸ್ ನಿಲ್ದಾಣ ಈಗ ಎಲ್ಲರನ್ನೂ ಆಕರ್ಷಿಸುತ್ತಿದೆ.

Read More

ಅಯ್ಯಪ್ಪ ಮಾಲಾಧಾರಿ ಯಾತ್ರೆ ವೇಳೆ ಹೃದಯಾಘಾತಕ್ಕೆ ಬಲಿ

ಉಳ್ಳಾಲ : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸೋಮೇಶ್ವರದ ಪಿಲಾರು ದೇಲಂತಬೆಟ್ಟು ನಿವಾಸಿ ಚಂದ್ರಹಾಸ್ ಶೆಟ್ಟಿ (55) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಂದ್ರಹಾಸ್ ಅವರು ಸಹಪಾಠಿ ಅಯ್ಯಪ್ಪ ಮಾಲಾ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಚಂದ್ರಹಾಸ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್…

Read More

ಕುಬಣೂರು ಶ್ರೀ ಪಿಲಿಚಾಮುಂಡಿ,ರಕ್ತೇಶ್ವರೀ ಹಾಗೂ ಗುಳಿಗ ದೈವಸ್ಥಾನದಲ್ಲಿ ವರ್ಷಾವಧಿ ನೇಮ ಜನವರಿ 26ಕ್ಕೆ

ಉಪ್ಪಳ : ಕುಬಣೂರು ಶ್ರೀ ಪಿಲಿಚಾಮುಂಡಿ,ರಕ್ತೇಶ್ವರೀ ಹಾಗೂ ಗುಳಿಗ ದೈವಸ್ಥಾನದಲ್ಲಿ ತಾರೀಕು 26-01-2026ನೇ ಸೋಮವಾರ ಶ್ರೀ ಪಿಲಿಚಾಮುಂಡಿ ದೈವದ ನೇಮ ಮತ್ತು ರಕ್ತೇಶ್ವರಿ,ಗುಳಿಗ ದೈವಗಳ ತಂಬಿಲ ಸೇವೆಯು ಕುಬಣೂರಾಯ ಕುಟುಂಬ ಮತ್ತು ಗ್ರಾಮಸ್ಥರ ಕೊಡುವಿಕೆಯೊಂದಿಗೆ ಬಹು ವಿಜ್ರಂಭಣೆಯಿಂದ ಜರಗಲಿರುವುದು. ಬೆಳಿಗ್ಗೆ ಗಂಟೆ 9ಕ್ಕೆ ಗಣಪತಿ ಹೋಮ ಮಧ್ಯಾಹ್ನ 2.00 ಗಂಟೆಗೆ ಕುಬಣೂರಾಯರ ಮನೆಯಿಂದ ಭಂಡಾರ ಹೊರಟು ಸಾಯಂಕಾಲ ಗಂಟೆ 4.00ರಿಂದ 5.00ರ ತನಕ ಭಜನೆ ,ಸಾಯಂಕಾಲ ಗಂಟೆ 5.00ರಿಂದ ದೈವದ ನೇಮ ನಡೆಯುವುದು

Read More

3.39 ಗ್ರಾಂ ಎಂಡಿಎಮ್‌ಎ ವಶ: ಮೂವರು ಯುವಕರ ಬಂಧನ; ಆಟೋ ಹಾಗೂ ಬುಲೆಟ್ ಜಪ್ತಿ

ಮಂಜೇಶ್ವರ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3.39 ಗ್ರಾಂ ಎಂಡಿಎಮ್‌ಎ (MDMA) ಸಾಗಾಟಕ್ಕೆ ಯತ್ನಿಸುತ್ತಿದ್ದ ಮೂವರು ಯುವಕರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಸಂಜೆ 6.15ರ ಸುಮಾರಿಗೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಸ್ಸೋಟ್–ಸತ್ಯದುಕ್ಕ–ಬಡಾಜೆ ಹಿಂದೂಸ್ತಾನ್ ಗ್ರೌಂಡ್ ಸಮೀಪ ನಡೆಸಿದ ತಪಾಸಣೆಯ ವೇಳೆ ಆರೋಪಿಗಳನ್ನು ಬಂಧಿಸಲಾಗಿದೆ. KL-14 AD 9865 ಸಂಖ್ಯೆಯ ಆಟೋ ರಿಕ್ಷಾದ ಹಿಂಬದಿ ಸೀಟಿನಲ್ಲಿ ಮಾರಾಟ ಹಾಗೂ ವೈಯಕ್ತಿಕ ಬಳಕೆಗೆಂದು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದ…

Read More

ಪೈವಳಿಕೆ ಪಂಚಾಯತ್ ಸ್ಟ್ಯಾಂಡಿಂಗ್ ಸಮಿತಿ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಮುಸ್ಲಿಂ ಲೀಗ್ ಸದಸ್ಯೆಯ ಬೆಂಬಲ

ಪೈವಳಿಕೆ: ಇಂದು ನಡೆದ ಆರೋಗ್ಯ–ಶಿಕ್ಷಣ ಸ್ಟ್ಯಾಂಡಿಂಗ್ ಸಮಿತಿ ಚುನಾವಣೆಯಲ್ಲಿ ಮುಸ್ಲಿಂ ಲೀಗ್ ಸದಸ್ಯೆ ಮೈಮೂನತುಲ್ ಮಿಸ್ರಿಯಾ ಅವರು ಬಿಜೆಪಿ ಸದಸ್ಯೆ ಸುಮನ ಜಿ ಭಟ್ ಅವರಿಗೆ ಮತ ಚಲಾಯಿಸಿದರು. ಇದರೊಂದಿಗೆ ಬಿಜೆಪಿ ಸದಸ್ಯೆ ಸುಮನ ಜಿ ಭಟ್ ಅವರು ಆರೋಗ್ಯ–ಶಿಕ್ಷಣ ಸ್ಟ್ಯಾಂಡಿಂಗ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಡಂಕೋಡಿ ವಾರ್ಡ್‌ನಿಂದ ಗೆದ್ದಿರುವ ಮುಸ್ಲಿಂ ಲೀಗ್ ಸದಸ್ಯೆ ಮೈಮೂನತುಲ್ ಮಿಸ್ರಿಯಾ ಅವರು, ಕುರುಡಪದವು ವಾರ್ಡ್‌ನಿಂದ ಆಯ್ಕೆಯಾದ ಬಿಜೆಪಿ ಸದಸ್ಯೆ ಸುಮನ ಜಿ ಭಟ್ ಅವರಿಗೆ ಮತ ನೀಡಿದರು. ಈ ಮೂಲಕ…

Read More

ಜನವರಿ 15 ರಂದು ಅನುಪಮ ಮಹಿಳಾ ಮಾಸಿಕದ ಬೆಳ್ಳಿ ಹಬ್ಬ ಸಂಭ್ರಮ

ಮಂಗಳೂರು: ಅನುಪಮ ಮಹಿಳಾ ಮಾಸಿಕವು ತನ್ನ 25ನೇ ವರ್ಷಾಚರಣೆ ಆಚರಿಸುವ ಹೊಸ್ತಿನಲ್ಲಿದ್ದು ಈ ಪ್ರಯುಕ್ತ ಬೆಳ್ಳಿ ಹಬ್ಬವನ್ನು ಮಂಗಳೂರಿನ ಪುರಭವನದಲ್ಲಿ ಜನವರಿ 15 ರಂದು ಬೆಳಿಗ್ಗೆ 10 ರಿಂದ ಮಹಿಳೆಯರ ಬೃಹತ್ ಓದುಗರ ಸಮಾವೇಶವನ್ನಾಗಿ ಸಂಭ್ರಮಿಸಲಾಗುವುದೆಂದು ಅನುಪಮ ಪ್ರಧಾನ ಸಂಪಾದಕಿ ಶಹನಾಝ್ ಎಂ. ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 25ನೇ ವರ್ಷ ಪೂರ್ಣಗೊಳಿಸಿದ ಈ ಸುಸಂದರ್ಭದಲ್ಲಿ ಅನುಪಮ ಬಳಗವು ವಿಶೇಷಾಂಕವೊಂದನ್ನು ಹೊರ ತಂದಿದ್ದು . ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಮ್ಮ…

Read More
error: Content is protected !!