“ಉಡುಪಿ ಕಂಬಳ” ರಾಜಕೀಯ ದೈವಸ್ಥಾನದ ಅಂಗಳಕ್ಕೆ: ಗುರ್ಮೆ–ಸೊರಕೆ ಆರೋಪ–ಪ್ರತ್ಯಾರೋಪ
ಉಡುಪಿ: ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ ನಡೆದಿರುವುದು ರಾಜಕೀಯ ವಾದ–ವಿವಾದಕ್ಕೆ ಕಾರಣವಾಗಿದೆ. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಹಿನ್ನೆಲೆ, ಈ ವಿಚಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ನಡುವೆ ತೀವ್ರ ಆರೋಪ–ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು ದುರುದ್ದೇಶಪೂರಿತವಾಗಿ ರಾಜಕೀಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ…