ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಜಾತ್ರೆಯ ಯಶಸ್ಸಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ವರ್ಷದ ವಾರ್ಷಿಕ ಜಾತ್ರೆ ಏಪ್ರಿಲ್ 10ರಿಂದ ಆರಂಭವಾಗಿ ಏಪ್ರಿಲ್ 17ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶಾಸಕ ಅಶೋಕ್ ರೈ ಮಾತನಾಡಿ, ಮಹಾಲಿಂಗೇಶ್ವರ ದೇವರ ಜಾತ್ರೆಯನ್ನು ಈ ಬಾರಿಯೂ ಅತ್ಯಂತ ಅದ್ದೂರಿಯಾಗಿ…