Avatar

NAMMA MEDIA 24X7

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ಆಗಲು ಶಾಸಕ ಸುನಿಲ್ ಕುಮಾರ್ ಕಾರಣ- ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ

ಉಡುಪಿ: ಅಂದು ಪರಶುರಾಮ‌ನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು. ಇದೀಗ ಮೇಲ್ಛಾವಣಿಯ ತ್ರಾಮದ ಹೊದಿಕೆ ಕಳ್ಳತನ ಆಗಲು ಅವರೇ ಕಾರಣರಾಗಿದ್ದಾರೆ. ಅವರು ತನ್ನ ತಪ್ಪನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ಅವರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದರು….

Read More

ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” ಪ್ರಧಾನ ….

ಮಂಗಳೂರು:ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ಧಿಯ ಸದೃಢ ದೃಢತೆಯನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯ ದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕೊಡಿಯಾಲ್‌ಬೈಲ್‌ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗೆ ಇಂದು ಭೇಟಿ ನೀಡಿತು . ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ, ಸಹಕಾರ…

Read More

ದೇವರಾಜ್ ಅರಸ್ ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ನನ್ನ ತಂದೆ ಯು.ಟಿ.ಫರೀದ್ ಶಾಸಕರಾಗಿ ಜೊತೆಗಿದ್ದರು,ಈಗ ಸಿದ್ದರಾಮಯ್ಯರವರು ದೀರ್ಘಕಾಲ ಮುಖ್ಯ ಮಂತ್ರಿಯಾಗಿರುವಾಗ ಅವರ ಜೊತೆ ನಾನು ಉನ್ನತ ಹುದ್ದೆಯಲ್ಲಿರುವುದು ಸಂತೋಷದ ವಿಚಾರ : ಯು.ಟಿ.ಖಾದರ್

ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸುತ್ತಿರುವ ಸಿದ್ದರಾಮಯ್ಯನವರಿಗೆ ತುಂಬು ಹೃದಯದ ಶುಭಾಶಯಗಳು!ರಾಜ್ಯದ ರಾಜಕೀಯದಲ್ಲಿ ಕಾಲಘಟ್ಟವನ್ನ ಸ್ಥಾಪಿಸಿದವರು ನೀವು. ಸಿದ್ದರಾಮಯ್ಯನವರ ಕಾಲ ಎಂದು ಜನ ಗರ್ವದಿಂದ ಹೇಳಿಕೊಳ್ಳುವ ಅವಧಿ ಕೊಟ್ಟಿದ್ದೀರಿ.ನಿಮ್ಮ ಅವಧಿಯಲ್ಲಿ ನಾವು ಜೊತೆಗಿದ್ದೆವು ಎಂಬುದು ನಮಗೂ ಹೆಮ್ಮಯ ವಿಷಯ. ಈ ಹಿಂದೆ ದೇವರಾಜ್ ಅರಸು ಅವರು ದಾಖಲೆ ಮಾಡಿದ್ದ ಸಂದರ್ಭದಲ್ಲಿ ನಮ್ಮ ತಂದೆ ಫರೀದ್ ಅವರ ಜೊತೆ ಶಾಸಕರಾಗಿ ಕೆಲಸ ಮಾಡಿದ್ದರು.ಈಗ ನಿಮ್ಮ ಜೊತೆ ನಾನು ಸಹ ಉನ್ನತ ಜವಾಬ್ದಾರಿ ನಿರ್ವಹಿಸುತ್ತಿರುವುದು ಖುಷಿಯ ವಿಚಾರ.ಒಡೆಯುವ ಈ ಜಗತ್ತಿನಲ್ಲಿ…

Read More

ತ್ರಿಸ್ತರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಸಜ್ಜಾಗಲು ಬ್ಲಾಕ್ ಕಾಂಗ್ರೇಸ್ ಜೊತೆ ಪಂಚಾಯತ್ ರಾಜ್ ಸಂಘಟನೆ ಕೈಜೋಡಿಸಲಿದೆ- ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಬೆಳ್ತಂಗಡಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ಅವರ ನೇತೃತ್ವದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಯ ಚುನಾವಣೆಗಳ ತಯಾರಿಯ ಕುರಿತು ಗಂಭೀರ ಚರ್ಚೆ ನಡೆಯಿತು.ಸಭೆಯಲ್ಲಿ ಗ್ರಾ.ಪಂಚಾಯತ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು…

Read More

ಬ್ಯಾಂಕ್ ಅಕ್ರಮ ದರೋಡೆಕೋರರಿಗೆ ಜೀವಾವಧಿ ಶಿಕ್ಷೆಗೂ ಅವಕಾಶ ಇದೆ: ನಗರ ಡಿಸಿಪಿ ರವಿಶಂಕರ್

ಮಂಗಳೂರು:ಇತ್ತೀಚಿನ ದಿನಗಳಲ್ಲಿ ಕೆಲವು ಬ್ಯಾಂಕ್ ಹಾಗೂ ಸಹಕಾರಿ ಸಂಸ್ಥೆಯ ಸಿಬ್ಬಂದಿಗಳೇ ಅಕ್ರಮ ಚಟುವಟಿಕೆಗಳಲ್ಲಿ ಶಾಮೀಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಗಂಭೀರ ಪ್ರಕರಣಗಳಿಗೆ ಕಠಿಣ ಶಿಕ್ಷೆಯ ಅಗತ್ಯ ಇದೆ ಎಂದು ಮಂಗಳೂರು ನಗರ ಡಿಸಿಪಿ ರವಿಶಂಕರ್ ಎಚ್ಚರಿಕೆ ನೀಡಿದ್ದಾರೆ. ಅವರು ಎಸ್‌ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಬ್ಯಾಂಕುಗಳು, ಕೃಷಿಯೇತರ ಬ್ಯಾಂಕುಗಳು ಹಾಗೂ ಪಟ್ಟಣ ಸಹಕಾರಿ ಬ್ಯಾಂಕುಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೈಬರ್ ಅಪರಾಧಗಳು ಮತ್ತು ಸಹಕಾರಿ ಸಂಸ್ಥೆಗಳ ಭದ್ರತೆ ಕುರಿತ ಮಾರ್ಗಸೂಚಿಗಳ ಪಾಲನೆ ವಿಷಯದ ಮಾಹಿತಿ ಕಾರ್ಯಾಗಾರವನ್ನು…

Read More

ಕನ್ನಡ ಭವನದ “ರಜತ ಸಂಭ್ರಮ”ಸಿದ್ದತಾ ಸಭೆ ಸಂಪನ್ನ

ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಇದರ 25 ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಸುವರೇ ತೀರ್ಮಾನಿಸಿದ ಪ್ರಯುಕ್ತ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ಜನವರಿ 18.2026.ಭಾನುವಾರ ಬೆಳಿಗ್ಗೆ 7.30 ರಿಂದ ತಡ ರಾತ್ರಿವರೆ ವಿವಿಧ ಕನ್ನಡ ಕಾರ್ಯಕ್ರಮಗಳೊಂದಿಗೆ ನಡೆಸುವರೇ ತೀರ್ಮಾನಿಸಲಾಯಿತು. ಈ ಪ್ರಯುಕ್ತ ನಡೆದ ಸಿದ್ದತಾ ಸಭೆಯು 5.01.2026 ಸಂಜೆ ಕನ್ನಡ ಭವನ ಪದಾಧಿಕಾರಿಗಳ ಸಭೆ ಕನ್ನಡ ಭವನದಲ್ಲಿ ನಿರ್ದೇಶಕರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳರ…

Read More

ವೆನೆಜುವೆಲಾ ದೇಶದ ಮೇಲಿನ ಅಮೇರಿಕಾ ಧಾಳಿ ಖಂಡಿಸಿ ಮಂಗಳೂರಿನಲ್ಲಿ ಸಮಾನ ಮನಸ್ಕರಿಂದ ಪ್ರತಿಭಟನೆ

ಮಂಗಳೂರು : ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ಧಾಳಿ ನಡೆಸಿ ವೆನೆಜುವೆಲಾ ಅಧ್ಯಕ್ಷರಾದ ನಿಕೋಲಾಸ್ ಮಡೊರೊ ಮತ್ತು ಅವರ ಪತ್ನಿಯನ್ನು ಅಪಹರಿಸಿ ದಕ್ಷಿಣ ಅಮೇರಿಕಾದ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಅಘೋಷಿತ ಯುದ್ಧ ಸಾರಿದ ಅಮೇರಿಕ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಸಿಪಿಐಮ್ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಅಮೇರಿಕಾ ಜಗತ್ತಿನ ತೈಲ ಮಾರುಕಟ್ಟೆಯ ಮೇಲೆ ಅಧಿಪತ್ಯ…

Read More

ಮಂಗಳೂರು ಕೊಡಿಯಾಲ್ ಗುತ್ತು ವೆಟ್ ವೆಲ್–ರಾಜಕಾಲುವೆ ಅವ್ಯವಸ್ಥೆ: ಸ್ಥಳೀಯರ ದೂರು ಆಲಿಸಿದ ಐವನ್ ಡಿಸೋಜಾ, ತಕ್ಷಣ ಕ್ರಮಕ್ಕೆ ಸೂಚನೆ

ಮಂಗಳೂರಿನ ಕೊಡಿಯಾಲ್ ಗುತ್ತು ಮಹಾನಗರ ಪಾಲಿಕೆಯ ವೆಟ್ ವೆಲ್ ಸ್ಥಾವರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಸ್ಥಳೀಯರ ಮನವಿಯಂತೆ ಭೇಟಿ ನೀಡಿ ವೆಟ್ ವೆಲ್ ಹಾಗೂ ರಾಜಕಾಲುವೆ ಯಿಂದ ಉಂಟಾದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಜೀವ ನದಿ ರಾಜಕಾಲುವೆಗೆ ಡ್ರೈನೇಜ್ ಮಲಿನ ನೀರು ಹರಿದು ನರಕ ದರ್ಶದ ಮಾರಕ ಅವ್ಯವಸ್ಥೆಯ ದರ್ಶನವನ್ನು ಇದು ಮಾಡುತ್ತಾ ಇದ್ದು ಇದರಿಂದ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ದುರ್ವಾಸನೆ ,…

Read More

ಅಮೇರಿಕಾದ ಸರ್ವಾದಿಕಾರಿ ನಡೆ ಖಂಡನೀಯ — ಸಿಪಿಐಎಂ

ವೆನೆಜುವೆಲ‌ ದೇಶದ ಮೇಲೆ ಅಮೇರಿಕಾದ ಅತಿಕ್ರಮಣ, ದಾಳಿಯನ್ನು ಸಿಪಿಐಎಂ ಖಂಡಿಸುತ್ತದೆ ಮತ್ತು ಅಕ್ರಮವಾಗಿ ಬಂಧಿಸಿದ ವೆನೆಜುವೆಲ ಅದ್ಯಕ್ಷರಾದ ನಿಕೋಲಸ್‌ ಮಾಡೂರ ಅವರನ್ನು ಮತ್ತು ಅವರ ಪತ್ನಿಯನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮತಿ ಸದಸ್ಯೆ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಹೇಳಿದರು. ಅವರು ಇಂದು ಬೆಳ್ತಂಗಡಿಯ ತಾಲೂಕು‌ ಕಚೇರಿ ಎದುರು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಅಮೇರಿಕ ವೆನೆಜುವೆಲ ಮೇಲೆ‌ ಅತಿಕ್ರಮಣ ಮಾಡಿದ್ದರ ವಿರುದ್ದ ನಡೆದ ಪ್ರತಿಭಟನೆಯನ್ನುದ್ದೇಶಿಸಿ…

Read More

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ ) ರೀಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026ಕ್ಕೆ ಆಯ್ಕೆ.

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ )ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More
error: Content is protected !!