ಪರಶುರಾಮ ಥೀಮ್ ಪಾರ್ಕ್ನಲ್ಲಿ ಕಳ್ಳತನ ಆಗಲು ಶಾಸಕ ಸುನಿಲ್ ಕುಮಾರ್ ಕಾರಣ- ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ
ಉಡುಪಿ: ಅಂದು ಪರಶುರಾಮನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು. ಇದೀಗ ಮೇಲ್ಛಾವಣಿಯ ತ್ರಾಮದ ಹೊದಿಕೆ ಕಳ್ಳತನ ಆಗಲು ಅವರೇ ಕಾರಣರಾಗಿದ್ದಾರೆ. ಅವರು ತನ್ನ ತಪ್ಪನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ಅವರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದರು….