Avatar

NAMMA MEDIA 24X7

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆಸಂಸ್ಕಾರ–ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಪ್ರೇರಣೆ: ಪ್ರಕಾಶ್ ಕುಮಾರ್

ಕಡಬ, ಮಾ.6: ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯ ಉಳಿವಿಗೆ ಭಜನಾ ಮಂದಿರಗಳು ಮಹತ್ತರ ಕೊಡುಗೆ ನೀಡುತ್ತಿದ್ದು, ಸಮಾಜದಲ್ಲಿ ಧರ್ಮಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ ₹1 ಲಕ್ಷ ಅನುದಾನದ ಚೆಕ್ ವಿತರಣಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ…

Read More

ಮಲ್ಪೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಮಲ್ಪೆ ಬಂದರಿನ ದಕ್ಕೆಯ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಮಾಹಿತಿ ಪಡೆದ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಮತ್ತು ಮಲ್ಲಿಕಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯದಲ್ಲಿ ಹರೀಶ್ ಪೂಜಾರಿ ಹಾಗೂ ಭುವನೇಶ್…

Read More

ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಪ್ರಮೋದ್ ಮಧ್ವರಾಜ್ ಅವರಿಗೆ “ಬಡವರ ಬಂದು” ಪ್ರಶಸ್ತಿ

ಉಡುಪಿ: ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್‌ನ ಉದ್ಘಾಟನಾ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಅಮ್ಮುಂಜೆ ನಿವಾಸದಲ್ಲಿ ನಡೆಯಿತು. ಟ್ರಸ್ಟ್ ಅನ್ನು ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಮಾಜಿ ಸಚಿವರು, ಕೊಡುಗೈ ದಾನಿ ಹಾಗೂ ಬಡವರ ನೆರವಿಗೆ ಸದಾ ಮುಂದಾಗುವ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಪ್ರಮೋದ್ ಮಧ್ವರಾಜ್ ಅವರಿಗೆ ಸಂಸ್ಥಾಪಕ ಪವನ್ ಕುಮಾರ್ ಶಿರ್ವ ಅವರು “ಬಡವರ ಬಂದು” ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥಾಪಕ ಪವನ್…

Read More

ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ…

Read More

ಕಾಟಿಪಲ್ಲ ಗಣೇಶ್‌ಪುರ ದೇವಸ್ಥಾನದಲ್ಲಿ ಹೊಸ ಕನ್ನಡ ಚಿತ್ರದ ಮುಹೂರ್ತ ಪೂಜೆ

ಮಂಗಳೂರು: ಕಾಟಿಪಲ್ಲ ಗಣೇಶ್‌ಪುರ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಿ.ಎಂ. ಉದಯ್ ಅವರ ಕಥೆ, ಸಂಭಾಷಣೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬರಲಿರುವ ಹೊಸ ಕನ್ನಡ ಚಲನಚಿತ್ರದ ಮುಹೂರ್ತ ಪೂಜೆ ನೆರವೇರಿತು. ಕಾರ್ಯಕ್ರಮದಲ್ಲಿ ತುಳು ಚಿತ್ರನಟ ಹಾಗೂ ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರು, ಕಾಂತರಾ ಖ್ಯಾತಿಯ ನವೀನ್ ಬೋಂದೆಲ್, ಸಿ.ಎಂ. ಉದಯ್ ಹಾಗೂ ಅವರ ಧರ್ಮಪತ್ನಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಚಿತ್ರಕ್ಕೆ ಪ್ರಭು ದಾಸ್ ಪಿ.ಡಿ. ಸಂಗೀತ ನಿರ್ದೇಶನ ನೀಡಲಿದ್ದು, ನಿವಾಸ್ ನಾರಾಯಣ್…

Read More

ತಲಪಾಡಿ ಟೋಲ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಫ್ರೀ ಪಾಸ್ ನೀಡಲು ಬಿಜೆಪಿ ಮನವಿ

ತಲಪಾಡಿ ಟೋಲ್‌ಗೇಟ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಉಚಿತ ಪಾಸಿಂಗ್ (ಫ್ರೀ ಪಾಸ್) ನೀಡುವಂತೆ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ತಲಪಾಡಿ ಟೋಲ್‌ನಲ್ಲಿ ತಲಪಾಡಿ ಗ್ರಾಮದ ವಾಹನಗಳಿಗೆ ನೀಡಿರುವಂತೆ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೂ ಫ್ರೀ ಪಾಸಿಂಗ್ ಸೌಲಭ್ಯ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., “ಈ ವಿಷಯದಲ್ಲಿ ಮಂಜೇಶ್ವರ ಶಾಸಕರಾಗಲಿ ಅಥವಾ ಸಂಸದರಾಗಲಿ…

Read More

ಇಫ್ತಾರ್ ಕೂಟದಿಂದ ಮನೆಗೆ ವಾಪಸ್ಸಾಗುವಾಗ ದುರ್ಘಟನೆ – ಸೈಕಲ್‌ನಿಂದ ಬಿದ್ದು ಬಾಲಕ ಸಾವು

ಕಾಸರಗೋಡು: ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮಗಳು ಅಸ್ಮ ಅವರ ಪುತ್ರ ಆಸೀಪ್ (12) ಮೃತಪಟ್ಟ ಬಾಲಕನಾಗಿದ್ದಾನೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಆಸೀಪ್‌ಗೆ ದೇಹದ ಒಳಭಾಗದಲ್ಲಿ ತೀವ್ರ ಪೆಟ್ಟು ತಗುಲಿದೆಯೆಂದು…

Read More

ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿ

ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಇರುವ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ 22.02.2026 ರಂದು ನಡೆದ “ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026” ಕಾರ್ಯಕ್ರಮದಲ್ಲಿ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಾಡೋಜ ಡಾ. ಕೃಷ್ಣ ಪ್ರಸಾದ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಡಾ. ಕೊಲಚಪ್ಪೆ ಗೋವಿಂದ ಭಟ್ ಅವರ ಅಧ್ಯಕ್ಷತೆಯಲ್ಲಿರುವ ದಕ್ಷಿಣ ಕನ್ನಡ…

Read More

ಅವನಲ್ಲ ಅವಳು

ಹುಟ್ಟಿದೆ ನಾನು ಸಾಮಾನ್ಯನಂತೆ ಬೆಳೆಯುತ್ತಾ ಕಾಡಿತು ನನಗೊಂದು ಚಿಂತೆ ನನಗೂ ಆಡುವಾಸೆ ಎಲ್ಲರಂತೆ ದೂರವಿಟ್ಟರು ಯಾರೂ ನನ್ನ ಜೊತೆಯಾಗದಂತೆ. ಹುಟ್ಟಿದ್ದು ತಾಯಿಯ ಪ್ರೀತಿಯ ವೀರನಾಗಿ ಬೆಳೆಯುತ್ತಾ ಕಾಯುತ್ತಿತ್ತು ಕೈ ಬಳೆಯ ಸದ್ಧಿಗಾಗಿ ಅಕ್ಕನ ಅಕ್ಕರೆಯ ತಮ್ಮನಾಗಿ ಬಯಸುತ್ತಿತ್ತು ಆಕೆ ಬಳೇ ಸರ ತಿಲಕ್ಕಾಗಿ. ಗಂಡಾಗಿ ಹುಟ್ಟಿ ಹೆಣ್ಣಾಗಿ ಬೆಳೆದು ಸಮಾಜದ ಹೀಗಳಿಕೆಗೆ ಮನದಲ್ಲೇ ಬೆಂದು ಹೆತ್ತವರು ದೂರ ತಳ್ಳಿ,ಒಡನಾಡಿಗಳಿಂದ ದೂರ ಸರಿದು ಸಮಾಜದಲ್ಲಿ ಅನಾಥಳಂತೆ ನನ್ನ ಜೀವನ. ಜೀವನ ಉದ್ಧರಿಸಲು ಜ್ಞಾನ ಬೇಕಿದೆ ಅದನ್ನು ತಿಳಿಯಲು ಶಿಕ್ಷಣದ…

Read More

ಕಾಸರಗೋಡು ಗೋ-ಕುಟೀರಕ್ಕೆ ದೇಶೀಯ ತಳಿ ಗೋವುಗಳ ದಾನಕ್ಕೆ ಆಹ್ವಾನ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕಾಸರಗೋಡು ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಹಾಗೂ ಗಿಡ್ಡ ತಳಿಯ ಗೋವುಗಳನ್ನು ದಾನ ರೂಪದಲ್ಲಿ ನೀಡಲು ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದೆ. ಕಾಸರಗೋಡು ಜಿಲ್ಲೆ ಸೇರಿದಂತೆ ಕೇರಳ ಮತ್ತು ಕರ್ನಾಟಕ ರಾಜ್ಯಗಳ ಗೋ-ಭಕ್ತರು, ಗೋ-ಪೋಷಕರು ಹಾಗೂ ಭಗವದ್ಭಕ್ತರ ಸಹಕಾರದೊಂದಿಗೆ ಈ ಯೋಜನೆಯನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.) ವತಿಯಿಂದ ಸ್ಥಾಪಿಸಲಾಗುತ್ತಿರುವ ಈ ಗೋ-ಕುಟೀರದಲ್ಲಿ ಕಾಸರಗೋಡು ಗಿಡ್ಡ ತಳಿ, ಮಲೆನಾಡು ಗಿಡ್ಡ ತಳಿ ಸೇರಿದಂತೆ ಶುದ್ಧ ದೇಶೀಯ…

Read More
error: Content is protected !!