ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ :ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಎಸ್ಡಿಪಿಐ ಅಧ್ಯಕ್ಷ ಅನ್ವರ್ ಸಾದತ್
ಪುತ್ತೂರು:ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ. ಪುತ್ತೂರು ಪ್ರಕರಣದಲ್ಲಿ ಸಂಘ ಪರಿವಾರ ಸಂಪೂರ್ಣ ಬೆತ್ತಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ ತನ್ನ ಹಿಂದುತ್ವ ಸಿದ್ಧಾಂತದ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು. ಒಂದೋ ನಾವು ಇನ್ನು ಮುಂದೆ ಹಿಂದುತ್ವ ಸಿದ್ಧಾಂತ ಪ್ರತಿಪಾದನೆ ಮಾಡುವುದಿಲ್ಲ ಎಂದು ಹೇಳಬೇಕು. ಅಥವಾ ಯಾವುದೇ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಆಗಿದ್ದಲ್ಲಿ ಮಾತ್ರ ನಾವು ಹಿಂದುತ್ವದ ಬಗ್ಗೆ…