ಕೃಷ್ಣ ನಗರಿಯಲ್ಲಿ “ಅಕ್ಕ ಪಡೆ ವಾಹನ”ಕ್ಕೆ ಚಾಲನೆ… !
ಉಡುಪಿ:ದೌರ್ಜನ್ಯ, ತೊಂದರೆಗೊಳಗಾಗುವ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಮೂಲಕ ಜಾರಿಗೊಳಿಸಿರುವ ಅಕ್ಕ ಪಡೆ ವಾಹನಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಚಾಲನೆ ನೀಡಲಾಯಿತು. ಅಕ್ಕ ಪಡೆ ವಾಹನಕ್ಕೆ ಚಾಲನೆ ನೀಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಈ ಅಕ್ಕ ಪಡೆ ಕಾರ್ಯನಿರ್ವಹಿಸಲಿದೆ. ನಗರ ಪ್ರದೇಶದಲ್ಲಿ ದೌರ್ಜನ್ಯಕ್ಕೊಳಗಾಗುವ ಹೆಣ್ಣುಮಕ್ಕಳಿಗೆ ತ್ವರಿತಗತಿಯಲ್ಲಿ…