Avatar

NAMMA MEDIA 24X7

ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ

ಮೈಸೂರು, ಎಪ್ರಿಲ್ 17, 2026: ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (Discalced Carmelites) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ….

Read More

ಸ್ಕೂಟರ್‌ನಲ್ಲಿ ಮಾದಕ ವಸ್ತು ಸಾಗಾಟ:19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಯುವಕನ ಬಂಧನ

ಕಾಸರಗೋಡು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕರ್ನಾಟಕದ ಪೆರುಮಣ್ಣೂರು, ಕಲ್ಲಾಪು ನಿವಾಸಿಯಾದ ಸಯ್ಯಿದ್ ಆಫ್ರೀದಿ (28) ಬಂಧಿತನಾಗಿದ್ದಾನೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಶಿರಿಯ ಮುಟ್ಟಮ್ ಪ್ರದೇಶದಲ್ಲಿ ಪೇಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಸರ್ವೀಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಕರ್ನಾಟಕ ನೋಂದಣಿ ಸಂಖ್ಯೆಯ ಸ್ಕೂಟರ್ ಅನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಯ ಬಳಿ ಇದ್ದ ಮಾದಕ ವಸ್ತು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಸೀಮಾಧಿಪತಿ ಮಹಾಲಿಂಗೇಶ್ವರ ಮತ್ತು ಬಲ್ನಾಡು ಉಳ್ಳಾಲ್ತಿಯ ದೈವಿಕ ಅನುಬಂಧ: ಒಂದು ಪಾರಂಪರಿಕ ಅವಲೋಕನ

​ತುಳುನಾಡಿನ ಸಾಂಸ್ಕೃತಿಕ ಪರಂಪರೆಯಲ್ಲಿ ದೈವಿಕ ನಂಬಿಕೆಗಳು ಕೇವಲ ವಿಧಿವಿಧಾನಗಳಲ್ಲ; ಅವು ಈ ಮಣ್ಣಿನ ಜೀವನಾಡಿಗಳು. ಇಲ್ಲಿನ ಆರಾಧನಾ ಪದ್ಧತಿಯಲ್ಲಿ ದೇವಸ್ಥಾನ ಮತ್ತು ದೈವಸ್ಥಾನಗಳ ನಡುವೆ ಇರುವ ಅವಿನಾಭಾವ ಸಂಬಂಧವು ಲೋಕದೃಷ್ಟಿಗೆ ವಿಸ್ಮಯಕಾರಿಯಾದರೂ, ಭಕ್ತನ ಪಾಲಿಗೆ ಅದು ಬದುಕಿನ ಪರಮ ಸತ್ಯ. ಇದಕ್ಕೆ ಅತ್ಯಂತ ಜ್ವಲಂತ ಉದಾಹರಣೆಯೆಂದರೆ ಪುತ್ತೂರಿನ ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ಮತ್ತು ಬಲ್ನಾಡಿನ ಶಕ್ತಿರೂಪಿ ಉಳ್ಳಾಲ್ತಿ ಅಮ್ಮನ ನಡುವಿನ ದೈವಿಕ ಅನುಬಂಧ. ಇದು ಕೇವಲ ಪುರಾಣದ ಕಥೆಯಲ್ಲ, ಭಕ್ತಿ ಮತ್ತು ತ್ಯಾಗದ ಸಂಗಮವಾಗಿ ತಲೆಮಾರುಗಳಿಂದ ಹರಿದುಬರುತ್ತಿರುವ…

Read More

ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಅಭಿವೃದ್ಧಿಯ ಸ್ಪರ್ಶ: ಮೂಲಸೌಕರ್ಯ ವೃದ್ಧಿಗೆ ಡಿಆರ್‌ಎಂ ಮಧುಕರ್ ರಾವ್ ಭರವಸೆ

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮಧುಕರ್ ರಾವ್ ತಿಳಿಸಿದ್ದಾರೆ. ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಜನಪ್ರತಿನಿಧಿಗಳು, ಪ್ರಯಾಣಿಕರು ಹಾಗೂ ನಿಲ್ದಾಣ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಅವರು, ಹಲವು ಪ್ರಮುಖ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮಳೆಗಾಲದಲ್ಲಿ ನಿಲ್ದಾಣ ಆವರಣದಲ್ಲಿ ನೀರು ನಿಲ್ಲದಂತೆ ತಡೆಯಲು ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ಲಾಟ್‌ಫಾರ್ಮ್‌ನ ಎರಡೂ ಬದಿಗಳಲ್ಲಿ ಮೇಲ್ಛಾವಣಿ ನಿರ್ಮಾಣಕ್ಕೂ ಕ್ರಮ…

Read More

ಬೇಕೂರಿನಲ್ಲಿ ಪೈಪ್‌ಲೈನ್ ಸ್ಫೋಟ – ಮಿನಿ ಪ್ರವಾಹ, ಮನೆಗೆ ಹಾನಿ, ನೀರು ಸರಬರಾಜು ಸ್ಥಗಿತದ ಭೀತಿ

ಬೇಕೂರು: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡುವ ಬೇಕೂರಿನ ಜಲಸಂಪನ್ಮೂಲ ಘಟಕದಲ್ಲಿ ಇಂದು ಬೆಳಗ್ಗೆ ಭಾರೀ ಅವಘಡ ಸಂಭವಿಸಿದೆ. ಬೇಕೂರು ಮಿಲ್ ಸಮೀಪದಲ್ಲಿರುವ ಚೆಂಬರ್‌ನಲ್ಲಿ ಪೈಪ್‌ಲೈನ್ ತುಂಡಾಗಿ, ದೊಡ್ಡ ಪ್ರಮಾಣದ ನೀರು ಹೊರಹರಿದು ಮಿನಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಸಂಭವಿಸಿದ್ದು, ಸ್ಥಳೀಯ ಸ್ಕ್ರಾಪ್ ಅಂಗಡಿ ಮಾಲೀಕ ಗಫೂರ್ ಅವರ ಮನೆಗೆ ನೀರು ನುಗ್ಗಿ, ಹಿತ್ತಲಿನಲ್ಲಿದ್ದ ಮರಗಿಡಗಳು ಹಾಗೂ ಅನೇಕ ವಸ್ತುಗಳು ಸಂಪೂರ್ಣ…

Read More

ಮಂಜೇಶ್ವರ ಬೀಚ್‌ನಲ್ಲಿ ಕಸದ ಪರ್ವತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೀನುಗಾರರು–ಪ್ರವಾಸಿಗರ ಆಕ್ರೋಶ

ಮಂಜೇಶ್ವರ: ಪ್ರವಾಸಿ ಆಕರ್ಷಣೆಯಾಗಿ ಹೆಸರು ಮಾಡಿರುವ ಮಂಜೇಶ್ವರ ಬೀಚ್ ಇದೀಗ ಕಸದ ಗುಡ್ಡಗಳ ಕೇಂದ್ರವಾಗುತ್ತಿದೆ. ಬೀಚ್ ಸಮೀಪದ ಎಲ್ಲ ಪ್ರದೇಶಗಳು ಈಗ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳಿಂದ ತುಂಬಿ ಹರಿಯುತ್ತಿವೆ. ಪ್ರತಿದಿನ ನೂರಾರು ಜನರು ಭೇಟಿ ನೀಡುವ ಈ ಪ್ರದೇಶದಲ್ಲಿ ಮಲಿನತೆ ಹೆಚ್ಚುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮತ್ತು ಹತ್ತಿರದ ವಾಟರ್ ಥೀಮ್ ಪಾರ್ಕ್‌ಗೆ ಆಗಮಿಸುವವರು ಆಹಾರದ ಅವಶೇಷಗಳು ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಕಸದ ರಾಶಿ ಹೆಚ್ಚಾಗುತ್ತಿದ್ದಂತೆ ಬೀದಿ ನಾಯಿಗಳ…

Read More

ಕುಂಬಳೆ: ವಾಹನ ಕಳ್ಳತನ ಪ್ರಕರಣ—ಆರೋಪಿ ಬಂಧನ

ಕುಂಬಳೆಯಲ್ಲಿ ಹೋಟೆಲ್ ಎದುರು ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ನಿವಾಸಿ ರವಿ ಅಲಿಯಾಸ್ ‘ಡಬ್ಬ ರವಿ’ ಬಂಧಿತ ಆರೋಪಿ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದರು. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡ ರವಿಯನ್ನು ಕುಂಬಳೆ ಸರಕಾರಿ ಆಸ್ಪತ್ರೆಗೆ ತರಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿತು. ತಕ್ಷಣ ಆಸ್ಪತ್ರೆಯಲ್ಲಿ ಕಾದಿದ್ದ ಪೊಲೀಸರು, ಅಲ್ಲಿಗೆ ಬಂದ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪೊಲೀಸ್…

Read More

ಕಾಸರಗೋಡು: ವಸಂತ್ ಕೆರೆಮನೆ–ದಿವ್ಯಶ್ರೀ ದಂಪತಿಗೆ “ಕನ್ನಡ ಸೇವಾ ನಿರತರು” ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಪ್ರದಾನ ಕಾರ್ಯದರ್ಶಿ ವಸಂತ್ ಕೆರೆಮನೆ ಹಾಗೂ ದಿವ್ಯಶ್ರೀ ದಂಪತಿಗಳಿಗೆ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ “ಕನ್ನಡ ಸೇವಾ ನಿರತರು” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಂಪತಿಗಳ ವಿವಾಹ ದಶಮಾನೋತ್ಸವದ ಪ್ರಯುಕ್ತ ಕನ್ನಡ ಭವನದ ಅಭಿಮಾನಿಗಳಿಂದ ಬೇಕಲ್ ಇಂಟರ್ನ್ಯಾಷನಲ್ ಬೀಚ್‌ನಲ್ಲಿ ಸವಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕನ್ನಡ ಭವನದ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಕಾಸರಗೋಡು ಅಧ್ಯಕ್ಷ ಹಾಗೂ ಕನ್ನಡ…

Read More

ಹುಣಸೂರು: ಯುವಕನ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು

ಹುಣಸೂರು: ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ (27) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಏಪ್ರಿಲ್ 15ರಂದು ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಹಾಗೂ ಆಕೆಯ ಸಹೋದರ ಸಲ್ಮಾನ್ ಅವರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ನಂತರ ಫರ್ಮಾನ್ ಪಾಷಾ ಅವರು ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ…

Read More

ಉಡುಪಿ ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉಡುಪಿ: ಬಿಜೆಪಿ ಮುಖಂಡ ಹಾಗೂ ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇನ್ನಾ ಉದಯ ಶೆಟ್ಟಿ ಅವರು ಲಯನ್ಸ್ ಕ್ಲಬ್ ಬೆಲ್ಮಣ್‌ನ ಮಾಜಿ ಅಧ್ಯಕ್ಷರಾಗಿದ್ದು, ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

Read More
error: Content is protected !!