Avatar

NAMMA MEDIA 24X7

ಸಾಹಿತಿ, ಲೇಖಕಿ ಸತ್ಯವತಿ ಭಟ್ ಕೊಳಚಪ್ಪು ರೀಗೆ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18.01.2026.ಪ್ರಯುಕ್ತ ಕನ್ನಡ ಭವನ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿಹಬ್ಬ “ಕಾರ್ಯಕ್ರಮದಲ್ಲಿ ಪ್ರಕಾಂಡ ಪಂಡಿತೆ, ಶ್ರೇಷ್ಠ ಕವಯತ್ರಿ, ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಡಾ. ಆರ್. ಎ. ದಯಾನಂದಮೂರ್ತಿಗೆ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಡಾ. ಆರ್. ಎ. ದಯಾನಂದಮೂರ್ತಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ,ಕರಾವಳಿಯ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ರೂವಾರಿ ಎನ್‌. ವಿನಯ್ ಹೆಗ್ಡೆ ಅಸ್ತಂಗತ . ಹೊಸ ವರ್ಷದಂದೇ ಕನ್ನಡಿಗರಿಗೆ ಬರ ಸಿಡಿಲು .. !

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00…

Read More

ಜನವರಿ 2 ರಂದು : ಯುನಿವೆಫ್ ಕರ್ನಾಟಕ ವತಿಯಿಂದ “ಅರಿಯಿರಿ ಮನುಕುಲದ ಪ್ರವಾದಿಯನ್ನು “ಅಭಿಯಾನದ ಸಮಾರೋಪ ಸಮಾರಂಭ

ಮಂಗಳೂರು : ಯುನಿವೆಫ್ ಕರ್ನಾಟಕ ವತಿಯಿಂದ ಸೆಪ್ಟೆಂಬರ್ 19 ರಿಂದ ಜನವರಿ 2ರ ತನಕ ನಡೆಯಲಿರುವ  “ಅರಿಯಿರಿ ಮನುಕುಲದ ಪ್ರವಾದಿಯನ್ನು”ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು ಜನವರಿ 2ರ ಶುಕ್ರವಾರ ಸಂಜೆ 6.45 ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ‌ ಎಂದು ಪ್ರವಾದಿ ಅಭಿಯಾನ ಕಾರ್ಯಕ್ರಮದ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.“ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ,…

Read More

ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ

ಮಂಗಳೂರು: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ನಗರದ ಅತ್ತಾವರ ವೈದ್ಯನಾಥ ನಗರ ಮೇನಕುಲಂಜಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸಿಇಒ ಶಿವರಾಜ್ ವಹಿಸಿಕೊಂಡರು. ಸೇರಿದ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಮತ್ತು ನಿರ್ದೇಶಕರಾದ ಸದಾಶಿವ ಇವರು ಅತಿಥಿಗಳನ್ನು ಸ್ವಾಗತಿಸಿದರು ಕಾರ್ಯಕ್ರಮಗಳನ್ನು ಡಾ. ಶಿವಪ್ರಕಾಶ್ ಜಿಲ್ಲಾ ಶಾಸ್ತ್ರಕರು ಮತ್ತು ಅಧೀಕ್ಷಕರು ಬೆಲ್ಲ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರು ದೀಪ ಪ್ರಜ್ವಲಿಸುವ…

Read More

ಕೋಟ್ಯಾಂತರ ಖರ್ಚಿನ ಕಾಮಗಾರಿಯಲ್ಲಿ ವನಿತಾ ಹಾಸ್ಟೆಲ್ ಕಟ್ಟಡ ಉದ್ಘಾಟನೆಗೊಂಡರೂ ಕಾರ್ಯಾಚರಣೆಗೆ ಮೀನ ಮೇಷ ಎಣಿಸುತ್ತಿರುವ ಅಧಿಕಾರಿಗಳು

ಮಂಜೇಶ್ವರ: ಸೀಮಾವರ್ತಿ ಪ್ರದೇಶವಾದ ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಸರ್ಕಾರಿ, ಅರ್ಧಸರ್ಕಾರಿ ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳ ವಸತಿಗಾಗಿ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡವು ಉದ್ಘಾಟನೆಯಾದರೂ ಇನ್ನೂ ಬಳಕೆಗೆ ತೆರೆಯಲಾಗಿಲ್ಲ. ಇದರಿಂದಾಗಿ ದೂರದ ಪ್ರದೇಶಗಳಿಂದ ಆಗಮಿಸುವ ಮಹಿಳಾ ನೌಕರರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ನೇತೃತ್ವದಲ್ಲಿ ಈ ಹಾಸ್ಟೆಲ್ ಅನ್ನು ನಿರ್ಮಿಸಲಾಗಿದ್ದು, ವೊರ್ಕಾಡಿ ಗ್ರಾಮದ ಮಜೀರ್ಪಳ್ಳ ಧರ್ಮನಗರದಲ್ಲಿ, ಮಲಯೋರ ಹೆದ್ದಾರಿಗೆ ಸಮೀಪ ಬ್ಲಾಕ್ ಪಂಚಾಯತ್‌ಗೆ ಸೇರಿದ ಒಂದು ಏಕರೆ ಭೂಮಿಯಲ್ಲಿ…

Read More

ದ್ವಿಚಕ್ರ ವಾಹನ ಕಳವು ಪ್ರಕರಣ: ಮಾಸ್ಟರ್ ಮೈಂಡ್ ಕಳ್ಳನ ಬಂಧನ

ಉಡುಪಿ: ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ. ಡಿ.5ರಂದು ಬಂಟಕಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದರು.ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದೆ. ಬಂಧಿತ ಆರೋಪಿಯಿಂದ ಶಿರ್ವ…

Read More

ಮನೆಗೆ ನುಗ್ಗಿದ ಗೂಡ್ಸ್ ಟೆಂಪೋ; ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೋವೊಂದು ಮನೆಗೆ ಡಿಕ್ಕಿ ಹೊಡೆದ ಘಟನೆ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ರಾ.ಹೆ. 66ರಲ್ಲಿ ಸಂಭವಿಸಿದೆ. ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ, ಹೆಜಮಾಡಿಯಲ್ಲಿ ನಿಯಂತ್ರಣ ತಪ್ಪಿ ಇಸ್ಮಾಯಿಲ್ ಮಂಜತೋಟ ಎಂಬವರ ಮನೆಗೆ ಗುದ್ದಿದೆ. ಈ ಸಂದರ್ಭ ಮನೆಯವರು ಮತ್ತು ಗೂಡ್ಸ್ ಚಾಲಕ, ಸಣ್ಣ ಪುಟ್ಟ ಗಾಯಗೊಂದಿಗೆ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲೀಸರು ಸ್ಥಳೀಯರ ಸಹಕಾರದಲ್ಲಿ ಗೂಡ್ಸ್ ವಾಹನವನ್ನು…

Read More

ಉಡುಪಿ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್, ಪೆಟ್ರೋಲಿಂಗ್, ಡ್ರೋನ್ ನಿಗಾ ಹೊಸ ವರ್ಷಾಚರಣೆ ಪೋಲಿಸ್ ಬಂದೋಬಸ್ತ್ ಕುರಿತು ಎಸ್ಪಿ ಹರಿರಾಮ್ ಶಂಕರ್ ಮಾಹಿತಿ

ಉಡುಪಿ: : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಬಲ, ಪೆಟ್ರೋಲಿಂಗ್ ಹಾಗೂ ನಿಗಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೊಸವರ್ಷವನ್ನು ಆಚರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಹೊಸ ವರ್ಷ ಆಚರಣೆಯ ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದ ಅವರು ಹೊಸ ವರ್ಷದ…

Read More

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಡಿಕ್ಕಿ – ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರಿಂದ ಕರುವಿನ ರಕ್ಷಣೆ

ಪುತ್ತೂರು: ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ನ ಬಳಿ ಅಪರಿಚಿತ ವಾಹನವೊಂದು ಹೋರಿ ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಹೋರಿ ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರು ತಕ್ಷಣ ಧಾವಿಸಿ ತುರ್ತು ಚಿಕಿತ್ಸೆಗೆ ಸರಕಾರಿ ಪಶು ಆಸ್ಪತ್ರೆಗೆ ಕರೆದೊಯ್ಯಲಾಯಿತು.ಪಶು ಆಸ್ಪತ್ರೆಯಲ್ಲಿ ಕರುವಿಗೆ ಚಿಕಿತ್ಸೆಯ ನಂತರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋಶಾಲೆಗೆ ಸೇರಿಸಲಾಯಿತು.ಪಿಕಪ್ ವ್ಯವಸ್ಥೆಯನ್ನು ಧರಿತ್ರಿ ಅಸೋಸಿಯೇಟ್ಸ್ ನ…

Read More
error: Content is protected !!