ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಧಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ . ಇದನ್ನು ಬಿಜೆಪಿ ಸಹಿಸಲ್ಲ : ಸಂಸದ ಕ್ಯಾ ಬ್ರಿಜೇಶ್ಚೌಟ
ಮಂಗಳೂರು: ಪೊಲೀಸ್ ಅಧಿಕಾರಿಗಳು ಕೋಳಿ ಅಂಕದಲ್ಲಿ ಅಕ್ರಮ ಚಟುವಟಿಗಳು ಆಗುತ್ತಿದೆ ಎಂದು ನೆಪವನ್ನು ಒಡ್ಡಿ ನಮ್ಮ ಧಾರ್ಮಿಕ ನಂಬಿಕೆಯನ್ನು ಹಾಳುಮಾಡುವ ಪ್ರಯತ್ನ ಮಾಡ್ತಾ ಇದ್ದಾರೆ. ರಾಜಕೀಯ ಬೆಂಬಲ ಇಲ್ಲದೆ ಈ ರೀತಿಯ ಬೆಳವಣಿಗೆ ಸಾಧ್ಯವಿಲ್ಲ. ನಮ್ಮ ನಂಬಿಕೆಯ ಆಚರಣೆಯಾದ ಕೋಳಿ ಅಂಕ, ಕಂಬಳ, ಯಕ್ಷಗಾನ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಸಂಸದ ಕ್ಯಾ ಬ್ರಿಜೇಶ್ಚೌಟ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು,…