Avatar

NAMMA MEDIA 24X7

ಮಂಗಳೂರು: ಮಾರ್ಚ್ 5ರಂದು 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಮಾರ್ಚ್ 5ರಂದು ಬೆಳಿಗ್ಗೆ 11:30ಕ್ಕೆ ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜು ಮಂಗಳೂರಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕದ…

Read More

ಅಜ್ಜಿ ಕಥೆ (ನೈಯಪ್ಪದ ಆಸೆ )

ಒಂದು ಊರಲ್ಲಿ ಒಬ್ಬ ಅಜ್ಜ ಅಜ್ಜಿ ವಾಸವಾಗಿದ್ದರು, ಅಜ್ಜ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಾ ಜೀವನ ಸಾಗಿಸುತ್ತಿದ್ದರು, ಒಂದು ದಿನ ಅಜ್ಜನಿಗೆ ನೈಯ್ಯಪ್ಪ ಮಾಡಿ ತಿನ್ನಬೇಕು ಅಂತ ಆಸೆ ಆಯಿತು, ಅದಕ್ಕೋಸ್ಕರ ಅಂಗಡಿಗೆ ಹೋಗಿ ಬೇಕಾದ ಸಾಮಾನುಗಳನ್ನು ತಂದು ಅಜ್ಜಿಯ ಕಯ್ಯಲ್ಲಿ ಕೊಟ್ಟರು, ನೀನು ನೆಯ್ಯಪ್ಪ ಮಾಡು ಅಷ್ಟರಲ್ಲಿ ನಾನು ಸ್ನಾನ ಮಾಡಿ ಬರುತ್ತೇನೆ ಅಂತ ಕೆರೆ ಕಡೆ ಹೋದರು, ಅಜ್ಜಿ ಅಕ್ಕಿ, ಬೆಲ್ಲವನ್ನು ನ್ನು ಅರೆದು ನೆಯ್ಯಪ್ಪ ಮಾಡಲು ಶುರುಮಾಡಿದಳು, ಮೊದಲಿಗೆ ಮಾಡಿದ ನೆಯ್ಯಪ್ಪ ದ ರುಚಿಯನ್ನು…

Read More

ತುಳು ಅಧಿಕೃತ ಭಾಷೆ ಕುರಿತು ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವಾಗ ಅನುಸರಿಸಿರುವ ಮಾನದಂಡಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಸಮಿತಿಯು ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಅಧ್ಯಯನ ಸಮಿತಿಯನ್ನು ಸರ್ಕಾರ ನೇಮಿಸಿತ್ತು. ಈ ಸಮಿತಿ…

Read More

ಮಲ್ಪೆ: ಮಂಜು ಕೊಳಗೆ ಚೂರಿ ಇರಿತ ಪ್ರಕರಣ – ಐವರು ಆರೋಪಿಗಳ ಬಂಧನ

ಉಡುಪಿ: ಹಿಂದೂ ಯುವ ಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನ್ನೋರ್ವ ಆರೋಪಿಯೆಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜಿ ಪಂಚಾಯತಿ ನಡೆಸಲು ಮಂಜು ಕೊಳ ಅವರನ್ನು ಕರೆಸಲಾಗಿತ್ತು ಎನ್ನಲಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು…

Read More

ಸಹಕಾರಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕುಣಿತದೊಂದಿಗೆ ಹೋಳಿ ಹಬ್ಬದ ಆಚರಣೆ

ಉಡುಪಿ ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೋಳಿ ಕುಣಿತದಲ್ಲಿ ವಿಶೇಷ ಆಕರ್ಷಣೆಯಾಗಿ ಹಕ್ಕಿಯ ಬಾಲದ ಗರಿ, ಸುರಗಿ ಸುರ ಸಂಪಿಗೆ ಹೂವು, ಅಬ್ಬಲಿ ಮಾಲೆಯ ಹೂವು, ವೇಷಭೂಷಣ, ಹೂವಿನಿಂದ ಅಲಂಕೃತ ಪೇಟವನ್ನು ತೊಟ್ಟು ಸಾಂಪ್ರದಾಯಿಕ ಕುಣಿತದೊಂದಿಗೆ ಸಂಭ್ರಮಿಸಿದರು. ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಸಿ. ನಾಯ್ಕ್ ಅವರ ನೇತೃತ್ವದಲ್ಲಿ ಸಂಘದ ಪ್ರಧಾನ ಕಚೇರಿ…

Read More

ಮಂಜೇಶ್ವರ #ಶಾಸಕರೇ #ನಿಮ್ಮ #ಅನ್ಯಾಯಕ್ಕೆ #ಕ್ಷಮೆ #ಇಲ್ಲ……….

ಕನ್ನಡದ ಪ್ರಥಮ ರಾಷ್ಟ್ರ ಕವಿ ಮಂಜೇಶ್ವರ #ಗೋವಿಂದ #ಪೈಗಳಿಗೆ,ನಾಡೊಜ ಕವಿ #ಕಯ್ಯಾರ #ಕಿಞ್ಞಣ್ಣ #ರೈ ಗಳಿಗೆ ಜನ್ಮ ನೀಡಿದ ನಾಡಿನಲ್ಲಿ ಮಲಯಾಳಂ ಕಡ್ಡಾಯವಾಗಿ ಮಸೂದೆ ಜಾರಿಗೆ ಬರುವ ದಿನ. ಇಂದು ಕೇರಳ ಸರಕಾರ ಜಾರಿಗೆ ತಂದ ಮಲಯಾಳಂ ಭಾಷಾ ಮಸೂದೆ ಜಾರಿಗೆ ಬರುವ ದಿನ ಇಂದು ಆರಾಮಾಭವಾಗಲಿದೆ. ಕೇರಳದಲ್ಲಿ ಎಡರಂಗ ಸರಕಾರ ಭಾಷಾ ಮಸೂದೆ ಜಾರಿಗೆ ತಂದು ಮಲಯಾಳಂ ಕಡ್ಡಾಯ ಗೊಳಿಸಿರುವುದರಿಂದ ಇನ್ನು ಮುಂದೆ ರಾಜ್ಯದ ಶಾಲೆ ಗಳಲ್ಲಿ ಕಡ್ಡಾಯ ಮಲಯಾಳಂ ಕಲಿಕೆ ಜಾರಿಯಾಗಲಿದೆ ಹಾಗೂ ಪಿ…

Read More

ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಂದ ಭರ್ಜರಿ ಹೋಳಿ ಆಚರಣೆ

ದೇಶದಾದ್ಯಂತ ರಂಗುರಂಗಿನ ಹಬ್ಬ ಹೋಳಿ ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದು, ಕರಾವಳಿಯಲ್ಲಿಯೂ ಬಣ್ಣಗಳ ಸಂಭ್ರಮ ಕಂಗೊಳಿಸಿತು. ಉಡುಪಿಯ ಮಣಿಪಾಲ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹರ್ಷೋದ್ಗಾರಗಳ ನಡುವೆ ಹೋಳಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದರು. ವಿಶ್ವವಿದ್ಯಾನಿಲಯದಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ಮಾಡುತ್ತಿರುವ ಹಿನ್ನೆಲೆ, ಹೋಳಿ ಹಬ್ಬಕ್ಕೆ ಇಲ್ಲಿ ವಿಶೇಷ ಮಹತ್ವ ಇದೆ. ಪ್ರತೀ ವರ್ಷ ಹೋಳಿ ದಿನ ಕಾಲೇಜಿಗೆ ರಜೆ ಇರುವುದರಿಂದ ವಿವಿಧ ರಾಜ್ಯಗಳಿಂದ ಬಂದಿರುವ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಒಂದೇ ವೇದಿಕೆಯಲ್ಲಿ ಸೇರಿ ಹಬ್ಬವನ್ನು ಸಂಭ್ರಮಿಸುತ್ತಾರೆ. ವಿದ್ಯಾರ್ಥಿಗಳು…

Read More

ಉಡುಪಿ: ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಉಡುಪಿ ಜಿಲ್ಲೆಯಲ್ಲಿ ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಈ ಪ್ರತಿಭಟನೆ ನಡೆಸಲಾಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಇತರೆ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ನೇತೃತ್ವ ನೀಡಿದರು.. ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ಟರ್, ಮಲ್ಪೆ ಬಂದರಿನಲ್ಲಿ ಎಲ್ಲರಿಗೂ ಸಮಾನವಾಗಿ ದುಡಿಯುವ…

Read More

ಮಾರ್ಚ್ 12ರಿಂದ ಕುಂಬಳೆಯಲ್ಲಿ ಶ್ರೀಮದ್ ಭಗವದ್ಗೀತಾ ಜ್ಞಾನ ಸದಸ್

ಕುಂಬಳೆ : ಶ್ರೀ ಶ್ರೀ ರವಿಶಂಕರ್ ಗುರು ನೇತೃತ್ವದ ಆರ್ಟ್ ಆಫ್ ಲಿವಿಂಗ್ ಜಿಲ್ಲಾ ನಾಯಕತ್ವದ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಮದ್ ಭಗವದ್ಗೀತಾ ಜ್ಞಾನ ಸದಸ್ ಮಾರ್ಚ್ 12, 13, 14 ಹಾಗೂ 15 ರಂದು ಕುಂಬಳೆ ನಾರಾಯಣ ಮಂಗಲಂ ಶ್ರೀ ಚಿರುಂಬ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ‘ಭಗವದ್ಗೀತೆಯ ಮೂಲಕ ಜೀವನದಲ್ಲಿ ಯಶಸ್ಸು’ ಎಂಬ ವಿಷಯದ ಕುರಿತು ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ತರಬೇತುದಾರ ಸಾಜಿ ನಿಸಾನ್ ತರಬೇತಿ ನೀಡಲಿದ್ದಾರೆ. ವಿನೀತ್…

Read More

ತಲಪಾಡಿಯಲ್ಲಿ 150 ಎಲೆಕ್ಟ್ರಾನಿಕ್ ಸಿಗರೇಟ್ ಪ್ಯಾಕೆಟ್‌ಗಳ ವಶ

ಅಕ್ರಮ ಮಾರಾಟಕ್ಕಾಗಿ ಇರಿಸಲಾಗಿದ್ದ 150 ಎಲೆಕ್ಟ್ರಾನಿಕ್ ಸಿಗರೇಟ್‌ ಪ್ಯಾಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜತ್ತೂರು ಪ್ರದೇಶದ ತಲಪ್ಪಾಡಿಯಲ್ಲಿ ಈ ಘಟನೆ ಸಂಭವಿಸಿದೆ. ಮಾರ್ಚ್ 3 ರಂದು ರಾತ್ರಿ 10.50 ರ ಸುಮಾರಿಗೆ ತಲಪಾಡಿ ಪ್ರದೇಶದ ‘ರಾಯಲ್ ಡಿನ್ನರ್’ ಎಂಬ ಸ್ಥಾಪನೆಯ ಬಳಿ ನಡೆಸಿದ ಶೋಧದ ವೇಳೆ, ಆರೋಪಿಗಳು ಇ-ಸಿಗರೇಟ್ ಪ್ಯಾಕೆಟ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಸರ್ಕಾರಿ ಕಾನೂನಿನಡಿಯಲ್ಲಿ ನಿಷೇಧಿಸಲಾದ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು ಮಾರಾಟಕ್ಕೆ ಇಡಲಾಗಿತ್ತು ಎಂದು ಪೊಲೀಸರು…

Read More
error: Content is protected !!