Avatar

NAMMA MEDIA 24X7

ಡಿ.20ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ : ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು

ಉಡುಪಿ:ಕೇಂದ್ರ ಸರ್ಕಾರದ ವೋಟ್​ ಚೋರಿ ಹಗರಣದ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್​ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪ ಅಂಗವಾಗಿ ಡಿ.20ರಂದು ಬೆಳಿಗ್ಗೆ 9.30ಕ್ಕೆ ಸಿಟಿ ಬಸ್ಸು ತಂಗುದಾಣದಿಂದ ಮಣಿಪಾಲದ ಸಿಂಡಿಕೇಟ್​ ಸರ್ಕಲ್​ ವರೆಗೆ ಮಾನವ ಸರಪಳಿ ರಚಿಸಲಾಗುವುದು ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ತಿಳಿಸಿದರು. ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತ ಕಳ್ಳತನ ನಡೆದಿರುವ ಬಗ್ಗೆ ಚುನಾವಣಾ…

Read More

ಡಿ.20 ರಂದು ಪೆರುವಾಯಿಯಲ್ಲಿ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಗೋಪೂಜೆ, ಹಿಂದೂ ಹೃದಯ ಸಂಗಮ.. !

ವಿಟ್ಲ:ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಗೋಪೂಜೆ, ಸಾರ್ವಜನಿಕ ಶ್ರೀ ಲಕ್ಷ್ಮೀ ಕಲ್ಪೋಕ್ತ ಪೂಜೆ, ಹಿಂದೂ ಹೃದಯ ಸಂಗಮ ಕಾರ್ಯಕ್ರಮ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಯತೀಶ್ ಪೆರುವಾಯಿ ತಿಳಿಸಿದರು. ಬೆಳಗ್ಗೆ ೮ ಗಂಟೆಗೆ ಗಣಪತಿ ಹವನ, ಸಂಜೆ ೪ ಗಂಟೆಗೆ ಶ್ರೀ ಲಕ್ಷ್ಮೀ ಕಲ್ಪೋಕ್ತ ಪೂಜೆ, ೫ ಗಂಟೆಗೆ ಗೋಮಾತಾ ಶೋಭಾಯಾತ್ರೆ, ಗೋಪೂಜೆ ನಡೆಯಲಿದೆ. ಬಳಿಕ ನಡೆಯುವ…

Read More

ಅಂತ್ಯವಿಶ್ರಾಂತಿ ಹೊಂದಿರುವ ಪವಿತ್ರಾತ್ಮರಾದ ‘ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ (ರ.ಅ)’ ಅವರ ನಾಮದೇಯದಲ್ಲಿ ನಡೆಯುವ ಉದಯಾಸ್ತಮ ನ ಉರೂಸ್‌ಗೆ ದ್ವಜಾರೋಹಣ

ಮಂಜೇಶ್ವರ: ಉತ್ತರ ಕೇರಳದ ಅತ್ಯಂತ ಪ್ರಸಿದ್ಧವಾದ ಉದ್ಯಾವರ ಸಾವಿರ ಜಮಾಅತ್ ಆವರಣದಲ್ಲಿ ಅಂತ್ಯವಿಶ್ರಾಂತಿ ಹೊಂದಿರುವ ಪವಿತ್ರಾತ್ಮರಾದ ‘ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ (ರ.ಅ)’ ಅವರ ನಾಮದೇಯದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಉದಯಾಸ್ತಮ ನ ಉರೂಸ್‌ಗೆ ಡಿಸೆಂಬರ್ 19ರಂದು ದ್ವಜಾರೋಹಣ ನಡೆಯಿತು. ಡಿಸೆಂಬರ್ 19ರಂದು (ಶುಕ್ರವಾರ) ಮಧ್ಯಾಹ್ನ ಜುಮಾ ನಮಾಜಿನ ನಂತರ, ಸಾವಿರಾರು ವಿಶ್ವಾಸಿಗಳ ಸಾನ್ನಿಧ್ಯದಲ್ಲಿ ದರ್ಗಾ ಶರೀಫ್ ಸಮಿತಿ ಅಧ್ಯಕ್ಷ ಹಾಗೂ ಉರೂಸ್ ಸಮಿತಿಯ ಮುಖ್ಯ ಸಲಹೆಗಾರ ಸಯ್ಯಿದ್ ಪೂಕ್ಕುಂನ್ನಿ ತಂಗಳ್ ಉದ್ಯಾವರ ಧ್ವಜಾರೋಹಣ ನೆರವೇರಿಸಿದರು. ಡಿಸೆಂಬರ್ 25ರಂದು…

Read More

ಭಾರತೀಯ ಜನತಾ ಪಾರ್ಟಿ ಬಡಾಜೆ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಕೇರಳ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಬಡಾಜೆ ವಾರ್ಡಿನಲ್ಲಿ ಗೆದ್ದ ನೂತನ ಸದ್ಯಸ್ಯರನ್ನು ಅಭಿನಂದಿಸುವ ಕಾರ್ಯಕ್ರಕಾಮ ವೈ.ಎಸ್.ಬಿ ಮೈದಾನ ಬಡಾಜೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಹಿತ್ ಕುಮಾರ್ ಬಡಾಜೆ ಅವರು ವಹಿಸಿದರು , ಕಾಸರಗೋಡು ಬಿಜೆಪಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು .ವೇದಿಕೆಯಲ್ಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ಕೀರ್ತೇಶ್ವರ ವಾರ್ಡ್ ಸದಸ್ಯರಾದ ಶ್ರೀ ಪ್ರಕಾಶ್ , ಬಡಾಜೆ ವಾರ್ಡ್ ಸದಸ್ಯೆ ಬೇಬಿ ಲತಾ, ಯಾದವ ಬಡಾಜೆ , ಮಂಜೇಶ್ವರ ಗ್ರಾಮ ಪಂಚಾಯತ್…

Read More

ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ವಿನಃಕಾರಣ ಆಕ್ರಮಣ -ಕೆ ಆರ್ ಜಯಾನಂದ

ಮಂಜೇಶ್ವರ ತ್ರಿಸ್ತರ ಚುನಾವಣೆಯ ನಂತರ ಮಂಜೇಶ್ವರ ಮಂಡಲದ ವಿವಿಧ ಪ್ರದೇಶಗಳಲ್ಲಿ ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ಏನೇ ಕಾರಣ ಇಲ್ಲದೆ ಆಕ್ರಮಣ ನಡೆಸುತ್ತಿರುವುದು ಖಂಡನೀಯವಾಗಿದೆ.ಈ ಅಕ್ರಮಕಾರಿಗಳಿಗೆ ಮಂಜೇಶ್ವರ ಶಾಸಕರ ಬೆಂಬಲವು ಗೂಂಡಾ ತಂಡಗಳಿಗೆ ಅಕ್ರಮಕ್ಕೆ ಪ್ರೋತ್ಸಾಹ ನೀಡುವುದಾಗಿದೆ.ಚುನಾವಣೆಯ ನಂತರ ಜನಪ್ರತಿನಿಧಿಗಳು ಈ ರೀತಿಯ ಆಕ್ರಮಣಗಳಿಗೆ ನೇತೃತ್ವ ನೀಡುವುದು ಈ ಪರಿಸರದ ಜನರ ನೆಮ್ಮದಿಯನ್ನು ಕೆಡಿಸುವುದಾಗಿದೆ. ಸಮಾಧಾನ ಪರವಾಗಿ ಚುನಾವಣೆಯ ನಂತರ ಈ ಆಕ್ರಮಣ ನಡೆಸುವುದು ಗೂಂಡಾ ರಾಜ್ಯವನ್ನಾಗಿಸುವ ಮುಸ್ಲಿಂ ಲೀಗಿನ ತಂತ್ರವಾಗಿದೆ.ಗರ್ಭಿಣಿ ಮಹಿಳೆ…

Read More

ಡಿ.26 ರಂದು ರಾಷ್ಟ್ರೀಯ ಓಪನ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಗೆ ಮಂಗಳೂರಿನಲ್ಲಿ ಚಾಲನೆ.

ಮಂಗಳೂರು:ರಾಷ್ಟ್ರೀಯ ಓಪನ್/ಕ್ಲಾಸಿಕಲ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಯು ಡಿಸೆಂಬರ್ 26 ರಿಂದ 30 ರವರೆಗೆ ಮಂಗಳೂರಿನ ಉರ್ವಾಸ್ಟೋರ್ ಬಳಿಯಿರುವ ತುಳು ಭವನದ “ಅಮ್ರತ ಸೋಮೇಶ್ವರ” ಸಭಾಂಗಣದಲ್ಲಿ ನಿರಂತರ 5 ದಿನ 9 ಸುತ್ತುಗಳಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಸಹಯೋಗದೊಂದಿಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಚೆಸ್ ಅಸೋಷಿಯೇಶನ್ ನ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿಯ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನಮ್ಮ ದೇಶದಲ್ಲಿ ಚೆಸ್ ದಿನೇ ದಿನೇ…

Read More

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ :ಮಾಜಿ ಸಚಿವ ಬಿ ಎಂ ರಾಮನಾಥ ರೈ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ ಇದನ್ನು ಕಾಂಗ್ರೆಸ್ ಸರಕಾರ ವಿರೋಧಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ.ಎಂದು ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ ಎಂ ರಾಮನಾಥ ರೈ ಕಿಡಿಕಾರಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು…

Read More

ಧರ್ಮತ್ತಡ್ಕ ಶಾಲಾ ಎನ್.ಎಸ್.ಎಸ್( ರಾಷ್ಟ್ರೀಯ ಸೇವಾ ಯೋಜನೆ) ಶಿಬಿರ ಸಜಂಕಿಲ ವಿದ್ಯಾಲಯದಲ್ಲಿ

ಸಜಂಕಿಲ: ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಪ್ತದಿನ ಸಹವಾಸ ಶಿಬಿರವು ಡಿಸೆಂಬರ್ 26ರಿಂದ ಜನವರಿ 1ರವರೆಗೆ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,ಸಜಂಕಿಲ”ಇಲ್ಲಿ ನಡೆಯಲಿದೆ.ಇಂದು ಸಜಂಕಿಲ ಶಾಲೆಯಲ್ಲಿ ನಡೆದ “ಸಂಘಟಕ ಸಮಿತಿ”ಯ ಸಭೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆನಂದ.ಕೆ ಇವರು ವಹಿಸಿದರು. ಧರ್ಮತ್ತಡ್ಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ ಭಂಡಾರಿ ಕುಡಾಲು,ಸಜಂಕಿಲ ಶಾಲೆಯ ಮಾತೃ ಮಂಡಳಿ ಅಧ್ಯಕ್ಷೆ…

Read More

ಎಳ್ಳಮಾವಾಸ್ಯೆ ಹಿನ್ನಲೆ ಕಡಲತೀರದಲ್ಲಿ ಸಮುದ್ರಸ್ನಾನದಲ್ಲಿ ಪಾಲ್ಗೊಂಡ ತೌಳವವರು … !

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು ಎಳ್ಳಮಾವಾಸ್ಯೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಮಲ್ಪೆ ಕಡಲತೀರದಲ್ಲಿ ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಸಮುದ್ರಕ್ಕೆ ಇಳಿದು ಸ್ನಾನ ಮಾಡಿದರು. ಮುಂಜಾನೆ 3 ಗಂಟೆಯಿಂದಲೇ ಸಮುದ್ರಸ್ನಾನಕ್ಕೆ ಕಡಲತೀರ ಬಳಿ ಜನ ಸೇರಿದ್ದರು. ಉಡುಪಿ ನಗರ ಮಾತ್ರವಲ್ಲದೆ, ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಜನರು ಬಂದಿದ್ದರು. ಜನರ ಅನುಕೂಲಕ್ಕಾಗಿ ನೂರಾರು ವೈದಿಕರು ಹಾಜರಿದ್ದು, ಪಿಂಡಪ್ರದಾನದ ಸಂಪ್ರದಾಯಗಳನ್ನು ನಡೆಸಿಕೊಟ್ಟರು. ಪಿಂಡಪ್ರದಾನ ಮಾಡಿದ ಬಳಿಕ ಸಮುದ್ರದಲ್ಲಿ ಅರ್ಗ್ಯ ಬಿಟ್ಟು ಸ್ನಾನ ಮಾಡಿದರು. ಬಳಿಕ ಕಡಲ ತೀರದ…

Read More

ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುವವರಿಗೆ ಬಿಸಿ ಮುಟ್ಟಿಸಿದ ಮ.ನ.ಪಾ ಅಧಿಕಾರಿಗಳು

ಮಂಗಳೂರು : ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುತ್ತಿದ್ದವರನ್ನು ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ತೆರವು ಮಾಡಿದರು. ಈ ಸಂದರ್ಭ ಕೆಲವರು ಅಧಿಕಾರಿಗಳ ಜೊತೆ ವಾಗ್ಯುದ್ದ ನಡೆಸಿದರು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರಿನ ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಇಟ್ಟಿದ್ದ ಅಕ್ರಮ ಗೂಡಂಗಡಿಗಳನ್ನು ಮತ್ತು ಇತರ ಸ್ಟಾಲ್ ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಮಾಡಲಾಯಿತು. ಮಂಗಳೂರು ನಗರದಲ್ಲಿ ಸಾರ್ವಜನಿಕರಿಗಾಗಿ ಸ್ಮಾರ್ಟ್ ಸಿಟಿಯಡಿ…

Read More
error: Content is protected !!