ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.10: ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಜಿದಾರರು ತಾವು ನಿರ್ವಹಿಸುತ್ತಿರುವ ಒಂದೇ ಒಂದು ಚಟುವಟಿಕೆಯಡಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಗಾಗಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಕೃಷಿ…