ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಮಾನ್ಯತೆ ಐತಿಹಾಸಿಕ ಹೆಜ್ಜೆ: ತಾರಾನಾಥ ಗಟ್ಟಿ ಕಾಪಿಕಾಡ್
ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಆಡಳಿತ ಭಾಷೆಯಾಗಿ ಮಾನ್ಯತೆ ನೀಡಿರುವುದು ತುಳುನಾಡಿನ ಇತಿಹಾಸದಲ್ಲಿ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯಾಗಿದೆ. ಈ ನಿರ್ಧಾರಕ್ಕಾಗಿ ಸಮಸ್ತ ತುಳುವರ ಪರವಾಗಿ ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು. ತುಳು ಸುಮಾರು ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ದ್ರಾವಿಡ ಭಾಷಾ ವಲಯದಿಂದ ಸ್ವತಂತ್ರವಾಗಿ ಬೆಳವಣಿಗೆ ಹೊಂದಿದ ಸಮೃದ್ಧ ಭಾಷೆಯಾಗಿದೆ. 1856ರಲ್ಲಿ ಭಾಷಾ ವಿಜ್ಞಾನಿ…
