ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ…