ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
ಮಂಗಳೂರು:- ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಅಧಿಕ ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ. ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರ, ಅಂಕ ಪಟ್ಟಿಯ ಪ್ರತಿಯ ದಾಖಲೆ, ಬ್ಯಾಂಕ್ ಪಾಸ್ ಪುಸ್ತಕದ ವಿವರ ಸಹಿತ ಪ್ರಧಾನ…