ಮಾರ್ಚ್ 5 ಕ್ಕೆ ಗೋ ನಂದಿ ಪರಿವಾರ ರಥಯಾತ್ರೆಗೆ ಚಾಲನೆ … !
ಮಂಗಳೂರು:ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿರುವ ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ವತಿಯಿಂದ ಗೋ ನಂದಿ ಪರಿವಾರ ರಥಯಾತ್ರೆಯು ಅಡ್ಯಾರು ಕಟ್ಟೆಯಿಂದ ಮಾರ್ಚ್ 5 ಕ್ಕೆ ಉದ್ಘಾಟನೆಗೊಂಡು ಅಡ್ಯಾರಿನ ವೀರಾಂಜನೇಯ ದೇವಸ್ಥಾನದಲ್ಲಿ ಸಪ್ತಾಹದ ಆಚರಣೆಗೆ ಅಣಿಯಾಗಲಿದೆ ಎಂದು ಗೋಸೇವಾ ಗತಿವಿಧಿಯ ದಕ್ಷಿಣ ಪ್ರಾಂತ ಗೋ-ಸೇವಾ ಸಂಯೋಜಕ ಪ್ರವೀಣ್ ಸರಳಾಯ ತಿಳಿಸಿದರು ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಗೋ ನಂದಿ ಪರಿವಾರ ರಥಯಾತ್ರೆಯ ಪ್ರಮುಖ ಉದ್ದೇಶ ಗೋ ರಕ್ಷಣೆಯಾಗಿದೆ . ಗೋ…