ಬೇಕಲ್: ವಸಂತ್ ಕೆರೆಮನೆಗೆ ‘ಹತ್ತನೇ ಸವಿ ಸಂಭ್ರಮ’ದಲ್ಲಿ ಗೌರವಾರ್ಪಣೆ
ಕನ್ನಡ ಭವನ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ವಸಂತ್ ಕೆರೆಮನೆ ಅವರಿಗೆ ವಿಶೇಷ ಗೌರವ ಸಲ್ಲಿಸುವ “ಹತ್ತನೇ ಸವಿ ಸಂಭ್ರಮ” ಕಾರ್ಯಕ್ರಮ ಇಂದು ಸಂಜೆ ಬೇಕಲ್ ಬೀಚ್ನಲ್ಲಿ ನಡೆಯಲಿದೆ. ವಸಂತ್ ಕೆರೆಮನೆ ಅವರು ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಸರಗೋಡು ವೆಸ್ಟ್ ಯೂನಿಟ್ ಅಧ್ಯಕ್ಷರಾಗಿ, ಕೇರಳ–ಕರ್ನಾಟಕ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಹಲವು ಧಾರ್ಮಿಕ ಕೇಂದ್ರಗಳಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಉತ್ತಮ ಸೇವಾ…