ರಿಷಬ್ ತೊಡೆ ಮೇಲೆ ದೈವ ನರ್ತಕ -ದೈವಾರಾಧಕರ ಆಕ್ರೋಶ, ದೈವಸ್ಥಾನದ ಅಡಳಿತ ಮಂಡಳಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ
ಮಂಗಳೂರು : ಮಂಗಳೂರಿನ ಬಾರೆಬೈಲ್ ನಲ್ಲಿರುವ ದೈವಸ್ಥಾನದಲ್ಲಿ ಮಗನ ಹುಟ್ಟು ಹಬ್ಬದ ಹಿನ್ನಲೆ ಕಳೆದ ವರ್ಷವೂ ರಿಷಬ್ ಶೆಟ್ಟಿ ಕುಟುಂಬ ನೇಮೋತ್ಸವ ಸೇವೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಿಯೂ ನಡೆಯದ ಚಮತ್ಕಾರ ಈ ಕ್ಷೇತ್ರದಲ್ಲಿ ಆಗಿದೆ ಎಂದು ರಿಷಬ್ ಹೇಳಿಕೊಂಡಿದ್ದರು. ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ದೈವದ ಅನುಮತಿ ಕೇಳಿ ಹರಕೆ ನೇಮಕ್ಕೆ ಒಪ್ಪಿಗೆ ಪಡೆಯಲಾಗಿದ್ದು, ಪಂಜುರ್ಲಿ ನೇಮ,ಜಾರಾಂದಾಯಗೆ ತುಡರ ಬಲಿ ನೀಡಲು ದೈವ ಒಪ್ಪಿಗೆ ನೀಡಿತ್ತು. ಈ ಸೇವೆ ನೆರವೇರಿದ್ದು, ದೈವಗಳು ಒಳ್ಳೆಯ ರೀತಿ ಸ್ವೀಕಾರ…