Avatar

NAMMA MEDIA 24X7

ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ: ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ

ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಬಾವಿಗೆ ಬಿದ್ದ ಕಾಡಾನೆಯನ್ನು ರಕ್ಷಣೆ ಮಾಡಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಾಜು 20 ವರ್ಷ ಪ್ರಾಯದ ಗಂಡಾನೆಯೊಂದು ಪೆರಾಜೆ ಸಮೀಪ ಕಲ್ಚರ್ಪೆಯಲ್ಲಿ ಭಾನುವಾರ ರಾತ್ರಿ 11.30ರ ವೇಳೆಗೆ ತೆರೆದ ಬಾವಿಗೆ ಬಿದ್ದಿದೆ. ಕಾಡಿನಿಂದ ನಾಡಿಗೆ ಬಂದ ಆನೆಯು ಅರಣ್ಯದಂಚಿನ ತೋಟದ ಬದಿಯಲ್ಲಿರುವ ಪಾಳು ಬಿದ್ದ ಬಾವಿಗೆ ಆಯ ತಪ್ಪಿ…

Read More

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು…

Read More

ಇತಿಹಾಸ ಪ್ರಸಿದ್ಧವಾದ ಕೂಡ್ಲು ಶ್ರೀ ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಏಪ್ರಿಲ್ 19ಕ್ಕೆ ಸಿದ್ಧತೆ

ಕಾಸರಗೋಡಿನ ಇತಿಹಾಸ ಪ್ರಸಿದ್ಧವಾದ ಕಾರಣಿಕವುಳ್ಳ ಕೂಡ್ಲು ಮಾರಿಗುಡಿಯೆಂದು ಖ್ಯಾತಿ ಪಡೆದಿರುವ ಕಾಸರಗೋಡು ರಾಮದಾಸನಗರದ ಕೂಡ್ಲು ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಸಂಕೀರ್ತನಾ ಕಾರ್ಯಕ್ರಮಗಳೊಂದಿಗೆ ಇದೇ 2026 ಏಪ್ರಿಲ್ 19 ಆದಿತ್ಯವಾರದಂದು ತಂತ್ರೀವರ್ಯರಾದ ಬ್ರಹ್ಮಶ್ರೀ ವಿಷ್ಣು ಪ್ರಕಾಶ ಪಟ್ಟೇರಿ ಕಾವುಮಠ ಇವರ ಮಾರ್ಗದರ್ಶನದಲ್ಲಿ ನಡೆಯಲಿರುವುದು.ಕಾಸರಗೋಡು ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಯ ಭಗವದ್ಭಕ್ತರು ಹಾಗೂ ಕುಟುಂಬಸ್ಥರು ಆಸ್ತಿಕ ಮಹಾಜನರು,ಊರ ಪರವೂರಿನ ಭಕ್ತಾಧಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಧಾರ್ಮಿಕ,ತಾಂತ್ರಿಕ ಸoಪ್ರದಾಯದ ಪ್ರಕಾರ ನಡೆಯುವ…

Read More

ಪ್ರಯಾಣಿಕರಿದ್ದಾಗಲೇ ಬಸ್‌ಗೆ ಇಂಧನ ತುಂಬಿಕೆ — ಸುರಕ್ಷತೆ ಬಗ್ಗೆ ಆತಂಕ

ಉಪ್ಪಳ :ಪ್ರಯಾಣಿಕರು ತುಂಬಿರುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಲಾಗುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಗಂಭೀರ ಆತಂಕ ಉಂಟುಮಾಡಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳು ಕರ್ನಾಟಕದ ತೊಕ್ಕೊಟ್ಟು ಹಾಗೂ ಕೊಟ್ಟೆಕಾರು ಪ್ರದೇಶದ ಪಂಪ್‌ಗಳಲ್ಲಿ ಇಂಧನ ತುಂಬುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸುಮಾರು 10 ನಿಮಿಷಗಳ ಕಾಲ ಬಸ್ ನಿಲುಗಡೆ ಆಗುತ್ತಿದ್ದು, ಬಳಿಕ ಟೋಲ್ ಪ್ಲಾಜಾಗಳಲ್ಲಿ ಮತ್ತಷ್ಟು ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಿಗೆ ಸಮಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ, ಸಂಬಂಧಿಸಿದ…

Read More

ಸೌರಚೇತನದ ಸಂಕ್ರಾಂತಿ ಮತ್ತು ಪ್ರಕೃತಿ ವಿಜ್ಞಾನದ ಮಹಾಪರ್ವ: ವಿಷು

ಬೆಳ್ಳಂಬೆಳಗಿನ ಜಾವ, ಇಬ್ಬನಿಯ ಹನಿಗಳು ಇನ್ನೂ ಎಲೆಗಳ ಮೇಲೆ ನಳನಳಿಸುತ್ತಿರುವಾಗ, ಹಣತೆಯೊಂದು ಕತ್ತಲ ಗರ್ಭವನ್ನು ಸೀಳಿ ಬೆಳಗುತ್ತದೆ. ದೂರದ ಕಾಡಂಚಿನಿಂದ ಕೋಗಿಲೆಯ ಸ್ವರವೊಂದು ಹೊಸ ಕಾಲದ ಆಗಮನವನ್ನು ಸಾರುತ್ತಿದ್ದರೆ, ಅಂಗಳದ ಕಣಿಕೊನ್ನೆ ಮರಗಳು ಚಿನ್ನದ ಜರಿ ತೊಟ್ಟಂತೆ ಹಳದಿ ಹೂವುಗಳನ್ನು ಹೊತ್ತು ಸಂಭ್ರಮಿಸುತ್ತಿವೆ. ಇದು ಕೇವಲ ಒಂದು ಹಬ್ಬದ ಉದಯವಲ್ಲ; ಇದು ಸೂರ್ಯ-ಸೃಷ್ಟಿ ಮತ್ತು ಸಂಸ್ಕೃತಿಗಳ ಅಪೂರ್ವ ಮಿಲನ. ಆಕಾಶದ ಅನಂತತೆಯಲ್ಲಿ ಸೂರ್ಯನು ಮೀನ ರಾಶಿಯ ಮೌನದಿಂದ ಹೊರಬಂದು, ಮೇಷ ರಾಶಿಯ ಉತ್ತುಂಗಕ್ಕೆ ಏರುವ ಈ ಗಳಿಗೆಯೇ…

Read More

ಪರಂಬಳ ಕಯ್ಯಾರಿನಲ್ಲಿ ಭಕ್ತಿಭಾವದ ದೀಪ ಪೂಜೆ

ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇವರ ವತಿಯಿಂದ ದೀಪ ಪೂಜನ ಕಾರ್ಯಕ್ರಮವು ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಭಕ್ತಿಭಾವದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಚೆನ್ನಪ್ಪ ಏರುಗಲ್ಲು, ಶ್ರೀ ಗಿರೀಶ್ ಕುಮಾರ್ ಕಯ್ಯಾರು, ಮಹೇಶ್ ಪುಣಿಯೂರು, ಶ್ರೀಮತಿ ರಮ್ಯಾ ಯನ್ ಸೀತಾಂಗೋಳಿ ಹಾಗೂ ಶೇಸಪ್ಪ ಮುಂಡಿತಡ್ಕ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಪುಂಡರೀಕಾಕ್ಷ ಬೆಳ್ಳೂರು (ಯೋಗಾಚಾರ್ಯರು, ಸಾಂದೀಪನಿ ಯೋಗಾಶ್ರಮ) ದೀಪ ಪೂಜನ ವಿಧಿಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಂಡದ…

Read More

ಯುವ ಪ್ರತಿಭೆಗಳಿಗೆ ವೇದಿಕೆ: ಸ್ವರ್ಗದಲ್ಲಿ ಏಕದಿನ ರಂಗ ಕಾರ್ಯಾಗಾರ

ಭೂಮಿಕಾ ಸಂಡೇ ಥಿಯೇಟರ್ಸ್ ಸ್ವರ್ಗ ಹಾಗೂ ಸಹೋದರ ಸಂಸ್ಥೆಗಳಾದ ಎಂ.ಕೆ. ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಾತೃಭೂಮಿ ಸ್ವರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಶಾಲೆ ಸ್ವರ್ಗದಲ್ಲಿ ‘ರಂಗದೀಪಿಕಾ 2026’ ಏಕದಿನ ರಂಗ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಅಧ್ಯಾಪಕ, ಸಂಶೋಧಕ ಹಾಗೂ ಯಕ್ಷಗಾನ ಭಾಗವತ ಡಾ. ಸತೀಶ್ ಪುಣಿಚಿತ್ತಾರಾಯರು ಮಾತನಾಡಿ, “ನಾಟಕದ ಪರಂಪರೆ ಮತ್ತೆ ಸ್ವರ್ಗದಲ್ಲಿ ಆರಂಭವಾಗಿರುವುದು ಸಂತಸದ ಸಂಗತಿ, ಇದು ನಿರಂತರವಾಗಿ ಮುಂದುವರಿಯಲಿ” ಎಂದು ಆಶಿಸಿದರು. ಬಾಲಕೃಷ್ಣ…

Read More

ನಿಕೋ ನ ಚಾಕೊಲೇಟ್ ಸ್ಟ್ರೀಟ್ 7ನೇ ಆವೃತ್ತಿ ಮಂಗಳೂರಿನಲ್ಲಿ ಯಶಸ್ವಿ

ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಡಿಯಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್, ಏಪ್ರಿಲ್ 11 ಮತ್ತು 12, 2026 ರಂದು ಮಂಗಳೂರಿನ ಪಾಂಡೇಶ್ವರದ ಫಿಜಾ ಬೈ ನೆಕ್ಸಸ್‌ನಲ್ಲಿ ನಿಕೋ ನ ಚಾಕೊಲೇಟ್ ಸ್ಟ್ರೀಟ್‌ನ 7 ನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಕ್ಯಾಂಪ್ಕೋ ಸಹಕಾರಾಗಿ, ಫಿಜಾ ಬೈ ನೆಕ್ಸಸ್‌ ಪಾಲುದಾರ ಮತ್ತು ಡೈಜಿವರ್ಲ್ಡ್ ಅಧಿಕೃತ ಮಾಧ್ಯಮ ಪಾಲುದಾರರಾಗಿ ಪಾಲ್ಗೊಂಡರು. ಸಹ ಪ್ರಾಧ್ಯಾಪಕ ಸಂಯೋಜಕ ಶ್ರೀ ಪ್ರಕಾಶ್ ಕೆ ಅವರ ಮಾರ್ಗದರ್ಶನದಲ್ಲಿ 3 ನೇ ವರ್ಷದ ಬಿಎ ವಿದ್ಯಾರ್ಥಿಗಳು…

Read More

ನಿಕೋ ಚಾಕೊಲೇಟ್ ಸ್ಟ್ರೀಟ್‌ನ 7 ನೇ ಆವೃತ್ತಿ ಫಿಜಾದಲ್ಲಿ ನೆಕ್ಸಸ್‌ನಲ್ಲಿ.

ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಡಿಯಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್, ಏಪ್ರಿಲ್ 11 ಮತ್ತು 12, 2026 ರಂದು ಮಂಗಳೂರಿನ ಪಾಂಡೇಶ್ವರದ ಫಿಜಾ ಬೈ ನೆಕ್ಸಸ್‌ನಲ್ಲಿ ನಿಕೋ ನ ಚಾಕೊಲೇಟ್ ಸ್ಟ್ರೀಟ್‌ನ 7 ನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಕ್ಯಾಂಪ್ಕೋ ಸಹಕಾರಾಗಿ, ಫಿಜಾ ಬೈ ನೆಕ್ಸಸ್‌ ಪಾಲುದಾರ ಮತ್ತು ಡೈಜಿವರ್ಲ್ಡ್ ಅಧಿಕೃತ ಮಾಧ್ಯಮ ಪಾಲುದಾರರಾಗಿ ಪಾಲ್ಗೊಂಡರು. ಸಹ ಪ್ರಾಧ್ಯಾಪಕ ಸಂಯೋಜಕ ಶ್ರೀ ಪ್ರಕಾಶ್ ಕೆ ಅವರ ಮಾರ್ಗದರ್ಶನದಲ್ಲಿ 3 ನೇ ವರ್ಷದ ಬಿಎ ವಿದ್ಯಾರ್ಥಿಗಳು…

Read More

ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೋಲಿಸ್ ದಾಳಿ – ನಾಲ್ವರ ಬಂಧನ, ಇಬ್ಬರಿಂದ ಕರ್ತವ್ಯಕ್ಕೆ ಅಡ್ಡಿ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ. ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಿನಾಂಕ 12-04-2026ರ ಸಂಜೆ ಸ್ಥಳಕ್ಕೆ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ…

Read More
error: Content is protected !!