ಶಿಸ್ತು, ಪಾಂಡಿತ್ಯದ ಮೂಲಕ ಯಕ್ಷಗಾನಕ್ಕೆ ಹೊಸ ಆಯಾಮ ನೀಡಿದವರು ಡಾ. ರಮಾನಂದ ಬನಾರಿ: ಡಾ. ಪುರುಷೋತ್ತಮ ಬಿಳಿಮಲೆ
ನೀರ್ಚಾಲು: ಯಕ್ಷಗಾನ, ತಾಳಮದ್ದಳೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಕವಿ ಮತ್ತು ಅರ್ಥಧಾರಿ ಡಾ. ರಮಾನಂದ ಬನಾರಿ ಅವರ 85ನೇ ಜನ್ಮವರ್ಷದ ಅಭಿನಂದನಾ ಸಮಾರಂಭ, ಸಾಕ್ಷ್ಯಚಿತ್ರ ಬಿಡುಗಡೆ ಹಾಗೂ ಕನ್ನಡ ಸಾಹಿತ್ಯ–ಸಂಸ್ಕೃತಿ ಸಮ್ಮೇಳನವು ರವಿವಾರ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು, ವೈದ್ಯಕೀಯ ವೃತ್ತಿಯಲ್ಲಿ ಅಗತ್ಯವಾದ ಶಿಸ್ತು ಮತ್ತು ನಿಷ್ಠೆಯನ್ನು ಯಕ್ಷಗಾನ, ತಾಳಮದ್ದಳೆ ಹಾಗೂ ಸಾಹಿತ್ಯ…