Avatar

NAMMA MEDIA 24X7

ಕುಡಿಯುವ ನೀರಿಗಾಗಿ ಬಂಟ್ವಾಳದಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ, ಏಪ್ರಿಲ್:ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಖಂಡಿಸಿ ಕೌಡೇಲು ಮತ್ತು ರಂಗೇಲ್ ನಾಗರಿಕ ಸಮಿತಿ ವತಿಯಿಂದ ಬಂಟ್ವಾಳ ಪುರಸಭೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಪುರಸಭೆ ಕಚೇರಿಯ ಮುಂದೆ ಬಟ್ಟೆಗಳನ್ನು ನೇತಾಡಿಸಿ, ಕೊಡ ಹಾಗೂ ಬಕೆಟ್‌ಗಳನ್ನು ಇಟ್ಟು ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಕಬೀರ್ ಆಹಮ್ಮದ್ ಅವರು, ಕೌಡೇಲು ಮತ್ತು ರಂಗೇಲ್ ಭಾಗದ ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆ ಬಗ್ಗೆ ಹಲವಾರು…

Read More

ಬಂಟ್ವಾಳದಲ್ಲಿ ದಲಿತ ಮಹಿಳಾ ಉದ್ಯೋಗಿಗೆ ಜಾತಿ ನಿಂದನೆ — ಮೂವರ ವಿರುದ್ಧ ಪ್ರಕರಣ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ ನೆಟ್ಲಮುಡ್ನೂರು ಗ್ರಾಮದ ನೆಕ್ಕರೆ ಮಠ ನಿವಾಸಿ ದೂರುದಾರರಾದ ಶೇಷಮ್ಮ (47 ವರ್ಷ) ಅವರು ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಕಳೆದ…

Read More

ಶಿಕ್ಷಕರೊಂದಿಗೆ ಈಜಲು ತೆರಳಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ವಿಟ್ಲ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿಟ್ಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ವಿಟ್ಲದ ಬಾಲಕನಾಗಿದ್ದಾನೆ. ಘಟನೆಯ ವಿವರ: ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿಕೇತ್ (14) ಮೃತಪಟ್ಟ ದುರ್ದೈವಿ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಅನಿಕೇತ್ ನೀರಿನಲ್ಲಿ ಮುಳುಗಿ…

Read More

ಮಂಜೇಶ್ವರ: ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡ ಸರ್ಕಾರಿ ಸೇವೆಗಳು: ಸಾರ್ವಜನಿಕರ ಪರದಾಟ

ಮಂಜೇಶ್ವರ ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ವಿಲೇಜ್ ಆಫೀಸ್‌ಗಳು ಹಾಗೂ ಅಕ್ಷಯ ಕೇಂದ್ರಗಳು ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳು ಸ್ಥಗಿತಗೊಂಡು ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾದರು. ಆನ್‌ಲೈನ್ ಪೋರ್ಟಲ್‌ಗಳು ತೆರೆಯದ ಕಾರಣ ದೂರದ ಪ್ರದೇಶಗಳಿಂದ ವಿವಿಧ ಅಗತ್ಯಗಳಿಗಾಗಿ ಬಂದ ನೂರಾರು ಜನರು ನಿರಾಶರಾಗಿ ಹಿಂತಿರುಗಬೇಕಾಯಿತು. ರೆವಿನ್ಯೂ ಇಲಾಖೆಯ ವೆಬ್‌ಸೈಟ್‌ಗಳು ಹಾಗೂ ಅಕ್ಷಯ ಕೇಂದ್ರಗಳ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು, ಆರ್‌ಟಿಸಿ (ಪಹಣಿ) ಸೇರಿದಂತೆ ಪ್ರಮುಖ ದಾಖಲೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಪ್ರತಿಗಳನ್ನು ಪಡೆಯಲು…

Read More

ಮಂಗಳೂರು ಫಿಸಿಯೋಕಾನ್-2026 ಸಮಾರೋಪ — ಜಾಗತಿಕ ಬೇಡಿಕೆ ಹೆಚ್ಚುತ್ತಿರುವ ಕ್ಷೇತ್ರ

ಮಂಗಳೂರು, ಫಿಸಿಯೋಥೆರಪಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ನವೀನತೆಯ ಮೂಲಕ ಮಹತ್ವದ ಸಾಧನೆ ಸಾಧ್ಯವೆಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಸೌತ್ ಕೆನರಾ ಫಿಸಿಯೋಥೆರಪಿ ಟೀಚರ್ಸ್ ಎಸೋಸಿಯೇಶನ್ ಆಯೋಜಿಸಿದ್ದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2026’ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಫಿಸಿಯೋಥೆರಪಿಗೆ ಭಾರತದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲಿಯೂ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು. ಮೂರು ದಶಕಗಳ ಹಿಂದೆ ಈ ಕ್ಷೇತ್ರಕ್ಕೆ…

Read More

ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉಡುಪಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಮಾ.17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ರೈ ಮಾ.30ರಂದು ಮೃತಪಟ್ಟಿದ್ದರು….

Read More

ಎನ್‌ಐಟಿಕೆ ಸುರತ್ಕಲ್ NOMAD, ಏಐ ವೇದಿಕೆಯನ್ನು ತನ್ನ ಕಡಲತೀರ ಕ್ಯಾಂಪಸ್‌ನಲ್ಲಿ ಪ್ರಾರಂಭಿಸಿದೆ

ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್ NOMAD (Node for Open-source Mobile AI Deployment) ಎಂಬ ಕಾರ್ಯನಿರ್ವಹಣೆಯ, ಕ್ಷೇತ್ರದಲ್ಲಿ ಬಳಸಬಹುದಾದ ಏಐ ಸಂಶೋಧನಾ ವೇದಿಕೆಯನ್ನು ಪ್ರಾರಂಭಿಸಿದೆ. ಇದು ದೂರದ, ಸಂಪನ್ಮೂಲ-ಕಡಿತ ಪ್ರದೇಶಗಳು ಹಾಗೂ ವಿಪತ್ತು-ಪೀಡಿತ ಪರಿಸರಗಳಲ್ಲಿ, ಸಾಮಾನ್ಯ ಕ್ಲೌಡ್ ಮೂಲಸೌಕರ್ಯ ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಏಐ ವ್ಯವಸ್ಥೆಗಳು ಹೆಚ್ಚಾಗಿ ಕೇಂದ್ರಿತ ಡೇಟಾ ಕೇಂದ್ರಗಳ ಮೇಲೆ ಅವಲಂಬಿತವಾಗುತ್ತಿರುವುದರಿಂದ, ವಿಪತ್ತು ಪ್ರದೇಶಗಳು, ಕಡಲತೀರ ಪ್ರದೇಶಗಳು ಮತ್ತು ಕ್ಷೇತ್ರ ಸಂಶೋಧನಾ ಕೇಂದ್ರಗಳು ಸಂಪರ್ಕ, ವಿದ್ಯುತ್ ಮತ್ತು ಮೂಲಸೌಕರ್ಯಗಳ…

Read More

ಎಸ್.ಎನ್.ಇ.ಸಿ. ಪ್ರವೇಶ ಪರೀಕ್ಷೆ, ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಅನಿವಾರ್ಯ : ಕೆ.ಪಿ. ಅಹ್ಮದ್ ಹಾಜಿ

ಪುತ್ತೂರು : ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅನಿವಾರ್ಯ ಆದ್ದರಿಂದ ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರು ಹೇಳಿದರು.ಅವರು ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯ ಕರ್ನಾಟಕ ಸೆಂಟರ್ ವತಿಯಿಂದ ‘ಸಮಸ್ತ’ ಸಂಸ್ಥೆಯ ಎಸ್.ಎನ್.ಇ.ಸಿ. ಶರೀಅ ಪ್ಲಸ್ ಸಮನ್ವಯ ಶಿಕ್ಷಣದ 2026-27ನೇ ಸಾಲಿನ ವಿದ್ಯಾರ್ಥಿಗಳ…

Read More

ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಾದಚಾರಿಗಳ ಮೇಲೆ ಪಲ್ಟಿ – ಮಹಿಳೆ ಗಂಭೀರ ಗಾಯ

ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಆದಿತ್ಯವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು…

Read More

ಬೆಂಗರೆಯಲ್ಲಿ ಬ್ರಹ್ಮಕಲಶೋತ್ಸವ: ಏ.17ರಿಂದ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳ ಆರಂಭ

ಮಂಗಳೂರು: ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ…

Read More
error: Content is protected !!