ಕುಡಿಯುವ ನೀರಿಗಾಗಿ ಬಂಟ್ವಾಳದಲ್ಲಿ ಬೃಹತ್ ಪ್ರತಿಭಟನೆ
ಬಂಟ್ವಾಳ, ಏಪ್ರಿಲ್:ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಖಂಡಿಸಿ ಕೌಡೇಲು ಮತ್ತು ರಂಗೇಲ್ ನಾಗರಿಕ ಸಮಿತಿ ವತಿಯಿಂದ ಬಂಟ್ವಾಳ ಪುರಸಭೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಪುರಸಭೆ ಕಚೇರಿಯ ಮುಂದೆ ಬಟ್ಟೆಗಳನ್ನು ನೇತಾಡಿಸಿ, ಕೊಡ ಹಾಗೂ ಬಕೆಟ್ಗಳನ್ನು ಇಟ್ಟು ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಕಬೀರ್ ಆಹಮ್ಮದ್ ಅವರು, ಕೌಡೇಲು ಮತ್ತು ರಂಗೇಲ್ ಭಾಗದ ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆ ಬಗ್ಗೆ ಹಲವಾರು…