ಮಣೇಲ್ ಗ್ರಾಮದಲ್ಲಿ ಅಬ್ಬಕ್ಕ ರಾಣಿ ಗ್ರಾಮೋತ್ಸವ ನಡೆಯಲಿ : ಡಾ.ಚಿನ್ನಪ್ಪ ಗೌಡ’ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರಗೋಷ್ಠಿ
ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯ ಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ ‘ಅಬ್ಬಕ್ಕ’ ಸಾಂಸ್ಕೃತಿಕ ಗ್ರಾಮವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂದು ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಹೇಳಿದರು. ಅವರು ಕರ್ನಾಟಕ…