ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ? ಕಾಂಗ್ರೆಸ್ ವಲಯದಲ್ಲಿ ಚರ್ಚೆ ತೀವ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಇಂದು ಬೆಳಗ್ಗೆ ನಡೆದ ಬ್ರೇಕ್ಫಾಸ್ಟ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸೂಚನೆಗಳು ಲಭಿಸಿವೆ. ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಚಿವ ಸಂತೋಷ್ ಲಾಡ್ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಗಮನ ಸೆಳೆಯಿತು. ಸಭೆ ಬಳಿಕ ಕಾರಿನಲ್ಲಿ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಅವರನ್ನು ಮಾಧ್ಯಮ ಪ್ರತಿನಿಧಿಗಳು “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ದುಃಖ ತಡೆಯಲಾರದೆ ಕಾರಿನಲ್ಲೇ ಕಣ್ಣೀರು…