Avatar

NAMMA MEDIA 24X7

ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಶಾಸಕರಾದ Vedavyas Kamath ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ತಾವು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ರಸ್ತೆ ಅಭಿವೃದ್ಧಿಯ ಅಗತ್ಯತೆಯನ್ನು ಗಮನಕ್ಕೆ ತಂದಿದ್ದರು. ಅದರಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ…

Read More

ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಈಜುಗಾರ್ತಿ ಶ್ರೀಲಕ್ಷ್ಮಿ

ವಿಟ್ಲ: ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿರುವ ವಿಟ್ಲದ ಪ್ರತಿಭಾವಂತ ಈಜುಗಾರ್ತಿ ಶ್ರೀಲಕ್ಷ್ಮಿ ಅವರು ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ವಿಟ್ಲದ ಹಿತ್ಲು ಕೋಟಿಕೆರೆ ನಿವಾಸಿಗಳಾದ ದಿವಂಗತ ಗೋಪಿಕಾ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ತೃತೀಯ ಪುತ್ರಿಯಾದ ಶ್ರೀಲಕ್ಷ್ಮಿ ಬಾಲ್ಯದಲ್ಲಿಯೇ ಈಜು ಕ್ರೀಡೆಗೆ ಆಸಕ್ತಿ ಬೆಳೆಸಿಕೊಂಡರು. ಈಜಿನಲ್ಲಿ ಸಾಧನೆಗೈಯುವ ದಿಟ್ಟ ಸಂಕಲ್ಪ ಹೊಂದಿದ್ದ ಅವರಿಗೆ ತಂದೆಯೇ ಮೊದಲ ಗುರು ಆಗಿದ್ದು, ಬಳಿಕ ಉಮೇಶ್ ಗಾಣಿಗ ವಿಟ್ಲ ಹಾಗೂ ತುಳಸಿದಾಸ್ ಶೆಣೈ ಅವರಿಂದ ತರಬೇತಿ ಪಡೆದು ಕ್ರೀಡೆಯಲ್ಲಿ…

Read More

ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಶ್ರೀಕುಮಾರಿ ಟೀಚರ್

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಇದರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಉದ್ಘಾಟಿಸಿ ಮಾತನಾಡಿ, ಸಶಕ್ತ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗ್ರಂಥಾಲಯದ ಸದಸ್ಯೆ ಶ್ರೀಮತಿ ಸರಸ್ವತಿ ಕೊಣಿಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದ್ರಿಕಾ…

Read More

ಮಧ್ಯರಾತ್ರಿ ರಸ್ತೆಯಲ್ಲಿ ಕಾಡುಕೋಣ – ವಾಹನ ಸವಾರರಲ್ಲಿ ಆತಂಕ

​ಮಂಜೇಶ್ವರ: ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ನೀರ್ಚಾಲು ಸಮೀಪದ ಕನ್ಯಪ್ಪಾಡಿಯಲ್ಲಿ ಸೋಮವಾರ ತಡರಾತ್ರಿ ಬೃಹತ್ ಗಾತ್ರದ ಕಾಡುಕೋಣವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ. ​ಸೋಮವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕನ್ಯಪ್ಪಾಡಿಯ ಬಸ್ ತಂಗುದಾಣದ ಮುಂಭಾಗದಲ್ಲಿ ಈ ಕಾಡುಕೋಣ ದೀರ್ಘಕಾಲ ಬೀಡುಬಿಟ್ಟಿತ್ತು. ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಅದರ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಕೆಲ ದಿನಗಳ ಹಿಂದೆಯೂ ಇದೇ ಪ್ರದೇಶದಲ್ಲಿ ಕಾಡುಕೋಣ ಕಂಡಿರುವ ಬಗ್ಗೆ ಸುದ್ದಿಯಾಗಿತ್ತಾದರೂ, ಯಾವುದೇ ಆಧಾರವಿಲ್ಲದ ಕಾರಣ ಜನರು ಅದನ್ನು…

Read More

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಕೇರಳಕ್ಕೆ ಭೇಟಿ

ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 11ರಂದು Kerala ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸುಮಾರು ₹16,450 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಹಾಗೂ ಶಿಲಾನ್ಯಾಸ ಮಾಡುವ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನಮಂತ್ರಿ ಅವರು ಕೊಚ್ಚಿಯಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವು ಗಣ್ಯರು ಮತ್ತು ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಭೇಟಿಯ ವೇಳೆ ಬಂದರು, ರಸ್ತೆ…

Read More

ಬದುಕಿನಲ್ಲಿ ಬದುಕಿ ನೋಡು….!

ಬದುಕೇ ಭಾರವಾಯಿತು, ಹುಮ್ಮಸೆ ಬರಿದಾಯಿತ್ತು, ಕನಸೇ ಕಗ್ಗತ್ತಲಾಯಿತ್ತು, ಹಗಲಿರುಳೇ ಬೇಡವಾಯಿತೆಂದು ಅದೆಷ್ಟೋ ಮಂದಿ ಬದುಕಿನಲ್ಲಿ ಎಲ್ಲವೂ ಮುಗಿದೇ ಹೋಯಿತು ಎಂದು ವ್ಯಥೆ ಪಡುತ್ತಾ ಇರುತ್ತಾರೆ. ವ್ಯಥೆ ಪಡುವ ಮನಸಿನ ಜೊತೆ ಆಳವಾದ ಮಾತು ಬೇರೆಯವರ ಜೊತೆ ಮಾತನಾಡದೆ ಮೌನದಿಂದ ಇರಲು ಬಯಸುತ್ತಾರೆ. ಏಕಾಂತ ಜೀವನವನ್ನು ತುಸು ಹೆಚ್ಚೇ ಇಷ್ಟ ಪಡುತ್ತಾ ಇರುತ್ತಾರೆ. ಶರವೇಗದಲ್ಲಿ ಆಲೋಚನೆ ತನ್ನತ್ತ ಸುಳಿದು ಬಾಳಿನ ಪಥದ ಹಾದಿಯನ್ನೇ ಬದಲಾಯಿಸುತ್ತಾ ಇರುತ್ತದೆ. ಋಣಾತ್ಮಕ ಚಿಂತೆಗಳು ಸಂತೆಗಳಂತೆ ಕಂತೆಗಳಂತೆ ಆಗಾಗೇ ಬರುತ್ತಾ ಬಂದು ಆಳವಾಗಿ ಗಾಯಮಾಡುತ್ತಾ…

Read More

ಕೆನರಾ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ – ಮಹಿಳಾ ಉದ್ಯಮಿಗಳ ಎಕ್ಸ್ಪೋಗೆ ಭರ್ಜರಿ ಪ್ರತಿಕ್ರಿಯೆ

ಮಂಗಳೂರು, ಮಾರ್ಚ್ 9: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು ಇಲ್ಲಿ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಉದ್ಯಮಿಗಳ ಎಕ್ಸ್ಪೋ ಕಾರ್ಯಕ್ರಮವನ್ನು ರೋಟರಿ ಮಂಗಳೂರು ಮೆಟ್ರೋ ಸಹಯೋಗದಲ್ಲಿ ಮಾರ್ಚ್ 9, 2026ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಸುಮಾರು 35 ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ವಿವಿಧ ಸ್ಟಾಲ್‌ಗಳ ಮೂಲಕ ಪ್ರದರ್ಶಿಸಿ, ಮಹಿಳಾ ಉದ್ಯಮಶೀಲತೆ ಮತ್ತು ಹೊಸತನವನ್ನು ಪ್ರೋತ್ಸಾಹಿಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಅಶ್ವಿನಿ ಕಾಮತ್‌ (ಕೆನರಾ ಹೈ-ಸ್ಕೂಲ್‌ ಅಸೋಸೀಯೇಶನ್‌…

Read More

ಕಾರು–ಆಟೋ ಡಿಕ್ಕಿ: ಐದು ವಿದ್ಯಾರ್ಥಿಗಳು ಸೇರಿ ಆರು ಮಂದಿ ಗಾಯ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್ (13), ಮಹಮ್ಮದ್ ಇರ್ಷಾದ್ (11), ನೂರ್ ಮಹಮದ್ (10), ಮಹಮದ್ ರಾಝೀಲ್ (7), ಸಜ್ಮಾ (4) ಹಾಗೂ ಆಟೋ ಚಾಲಕ ಕಲಂದರ್ ಶಾಫಿ (46) ಎಂದು ಗುರುತಿಸಲಾಗಿದೆ. ನೆಕ್ಕಿಲಾಡಿ…

Read More

ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರಿನಲ್ಲೇ 300 ಹಾಸಿಗೆ ಸಾಮರ್ಥ್ಯದ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ

ಪುತ್ತೂರು: ಪುತ್ತೂರು ನಗರದ ಹೃದಯಭಾಗದಲ್ಲಿ ಇರುವ ಹಾಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ೫.೧೬ ಎಕರೆ ಜಾಗದಲ್ಲೇ ಸುಸಜ್ಜಿತವಾಗಿ ೩೦೦ ಹಾಸಿಗೆ ಸಾಮರ್ಥ್ಯದ ಸರಕಾರಿ ಮೆಡಿಕಲ್ ಆಸ್ಪತ್ರೆ ಆಗಲಿ ಎಂದು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರು ಆಗ್ರಹ ವ್ಯಕ್ತಪಡಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರಾದ ರಫೀಕ್ ದರ್ಬೆ, ರಾಜೇಶ್ ಬನ್ನೂರು ಹಾಗೂ ವಿದ್ಯಾ ಆರ್. ಗೌರಿ, ಕಳೆದ ಬಾರಿಯ ಬಿಜೆಪಿ ಸರಕಾರದ ಅವಧಿಯಲ್ಲಿ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆಗಬೇಕೆಂಬುದು ಜನರ…

Read More
error: Content is protected !!