Avatar

NAMMA MEDIA 24X7

ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಮಾನ್ಯ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಹಿರಿಯ ಮುತ್ಸದ್ದಿ ಮಾನ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಮಾನ್ಯ ಡಿ.ಕೆ. ಶಿವಕುಮಾರ್ ಅವರ ಅದ್ವಿತೀಯ ರಾಜಕೀಯ ಮುತ್ಸದ್ದಿತನ, ಸಂಘಟನಾ ಶಕ್ತಿ ಹಾಗೂ ಅಪಾರ…

Read More

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಹಿಳೆ ಸೇರಿ ಮೂವರು ಹತ್ಯೆ, ಏಳು ಮನೆಗಳಿಗೆ ಬೆಂಕಿ

ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಕುಕಿ ಸಮುದಾಯದ ಗ್ರಾಮಸ್ಥರು ಹತ್ಯೆಯಾಗಿದ್ದು, ಏಳು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಕಾಂಗ್ಪೋಕ್ಪಿ ಜಿಲ್ಲೆಯ ಸೈತು-ಗಂಫಜೋಲ್ ಉಪವಿಭಾಗದ ಲೋಯಿಬೋಲ್ ಖುಲ್ಲೆನ್ ಗ್ರಾಮದಲ್ಲಿ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಹತ್ಯೆಯಾದವರನ್ನು ಲೆತ್ಖೊಂಗಮ್ ಹಾವೊಕಿಪ್, ಅವರ ಪತ್ನಿ ತಿನ್ಮರಿ ಹಾವೊಕಿಪ್ ಹಾಗೂ ಜಂಗ್ಮಿನ್ಲಾಲ್ ಹಾವೊಕಿಪ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ…

Read More

ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ

ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಎದುರಿಸುತ್ತಿದ್ದ ಪ್ರಯಾಣ ವೆಚ್ಚದ ಸಮಸ್ಯೆಗೆ ಈ ಯೋಜನೆ ಪರಿಣಾಮಕಾರಿ ಪರಿಹಾರವಾಗಿದೆ…

Read More

ಕೇರಳದಲ್ಲಿ ಭಾರೀ ಮಳೆ ಎಚ್ಚರಿಕೆ: ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್, ಜೂನ್ 8ರವರೆಗೆ ಮೀನುಗಾರಿಕೆ ನಿಷೇಧ

ತಿರುವನಂತಪುರ: ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಶನಿವಾರ ರೆಡ್ ಅಲರ್ಟ್ ಜಾರಿಯಲ್ಲಿರಲಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಇತರ ಆರು ಜಿಲ್ಲೆಗಳಲ್ಲಿ…

Read More

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಮಹಿಳೆ – ಆಸ್ಪತ್ರೆಗೆ ದಾಖಲು

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ನಲ್ಲಿ ನಡೆದಿದೆ.ಟ್ರೈನ್ ನಂಬರ್ 16511ರಲ್ಲಿ ಬೆಂಗಳೂರಿಂದ ಹೊರಟು ತಲಚೇರಿಗೆ ಹೋಗುವ ಮಹಿಳೆಗೆ ರೈಲಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್ ಮೂಲಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.

Read More

ಭಾರತೀಯ ಮಜ್ದೂರ್ ಸಂಘದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜೂನ್ 7ರಂದು ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಅವರನ್ನು ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ…

Read More

ಸಂಭ್ರಮದಿಂದ ನಡೆದ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಪ್ರಾರಂಭೋತ್ಸವ

ಮೀಯಪದವು, ಜೂನ್ 1: ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಸೋಮವಾರ ಬೆಳಿಗ್ಗೆ 9.15ಕ್ಕೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ನಡೆಯಿತು. ಶಾಲಾ ವಾದ್ಯಗೋಷ್ಠಿಯ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮದ ಅತಿಥಿಗಳು ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಶಾಲಾ ಸಭಾಂಗಣಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ಧಾರ್ಮಿಕ ಗ್ರಂಥಗಳ ವಾಚನ, ಪ್ರಾರ್ಥನಾ ವಿಧಿ ಹಾಗೂ ಆಕರ್ಷಕ ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಜೊತೆ ಕಾರ್ಯದರ್ಶಿ ವಂ….

Read More

ವಿಶ್ವ ಪರಿಸರ ದಿನಾಚರಣೆ: ‘ತಾಯಿಯ ಹೆಸರಲ್ಲಿ ಒಂದು ಗಿಡ’ ಕಾರ್ಯಕ್ಕೆ ಚಾಲನೆ…. !

ಮಂಗಳೂರು:ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮವನ್ನು ಗುರುವಾರ ಶಕ್ತಿನಗರದ ನಲ್ಯಪದವಿನ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ…

Read More

SDPI ಮುಖಂಡ, ಹಿರಿಯ ಸಾಮಾಜಿಕ ಧಾರ್ಮಿಕ ಧುರೀಣ ಹಾಜಿ ಇಬ್ರಾಹಿಂ ಸಾಗರ್ ಪುತ್ತೂರು ನಿಧನ: ಗಣ್ಯರಿಂದ ತೀವ್ರ ಸಂತಾಪ

ಪುತ್ತೂರು: ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಹಿರಿಯ ಉದ್ಯಮಿ ಹಾಗೂ ಪ್ರಮುಖ ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದ ಪುತ್ತೂರಿನ ಹಾಜಿ ಇಬ್ರಾಹಿಂ ಸಾಗರ್ (62) ರವರು ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು. ಇದರೊಂದಿಗೆ ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಯೂ ಉಲ್ಬಣಿಸಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ…

Read More

ಡಿ.ಕೆ. ಶಿವಕುಮಾರ್ ಮುಳ್ಳಿನ ಹಾಸಿಗೆಯಲ್ಲಿ ಮಲಗಿದ್ದಾರೆ: ಸದಾನಂದ ಗೌಡ ವ್ಯಂಗ್ಯ

ಪುತ್ತೂರು, ಜೂನ್ 5: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡಿರುವ ಸಮಯ ಸೂಕ್ತವಾಗಿದೆ ಎಂದು ತಮಗೆ ಅನಿಸುತ್ತಿಲ್ಲ. ಕಳೆದ ಮೂರು ವರ್ಷಗಳ ಆಡಳಿತದ ಹಾದಿಯನ್ನು ಮೀರಿ ಹೊಸ ದಿಕ್ಕಿನಲ್ಲಿ ಸಾಗಿದರೆ ಮಾತ್ರ ಅವರು ಯಶಸ್ವಿಯಾಗಬಹುದು. ಪ್ರಸ್ತುತ ಅವರು ಮುಳ್ಳಿನ ಹಾಸಿಗೆಯಲ್ಲಿ ಮಲಗಿರುವಂತಹ ಪರಿಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು. ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ…

Read More
error: Content is protected !!