Avatar

NAMMA MEDIA 24X7

ಹೊಸ ಸರ್ಕಾರದ ಕಾರ್ಯವೈಖರಿ ಮೌಲ್ಯಮಾಪನಕ್ಕೆ ಇನ್ನೂ ಸಮಯ ಬೇಕು: ಸತೀಶ್ ಕುಂಪಲ

ಮಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಮೌಲ್ಯಮಾಪನ ಮಾಡಲು ಇನ್ನೂ ಸಮಯವಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳು ಹಾಗೂ ಭಿನ್ನಾಭಿಪ್ರಾಯಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ . ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು , ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಹಲವು ಯೋಜನೆಗಳ ಅನುಷ್ಠಾನ ಸಮರ್ಪಕವಾಗಿರಲಿಲ್ಲ ಎಂಬುದನ್ನು ಮುಖ್ಯಮಂತ್ರಿ ಅವರ ಹೇಳಿಕೆಗಳೇ ಸೂಚಿಸುತ್ತವೆ ಎಂದು ಟೀಕಿಸಿದರು. ವಿದ್ಯಾರ್ಥಿಗಳು ಮತ್ತು ಯುವಕರಿಗಾಗಿ…

Read More

ವಿಟ್ಲ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಟ್ಲ, ಜೂನ್ 5: ಶಾಲಾ ಶಿಕ್ಷಣ ಇಲಾಖೆ, ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ – ಪ್ರಾಥಮಿಕ ವಿಭಾಗ ಬಂಟ್ವಾಳ ತಾಲೂಕು ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರವಿಶಂಕರ್ ಸಿ. ವಹಿಸಿದ್ದರು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ…

Read More

ಮಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಹೆಸರಿನಲ್ಲಿ ಅಕ್ರಮ ಹಣ ವಸೂಲಿ-ಆರೋಪ

ಮಂಗಳೂರು ನಗರದ ಹೃದಯಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಹಣ ವಸೂಲಿ ನಡೆಯುತ್ತಿದ್ದು, ರಾತ್ರಿ ವೇಳೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಆಗ್ರಹಿಸಿದ್ದಾರೆ.ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಿಂದ ರಾವ್ ಆಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆ ತನಕ ಶನಿವಾರ ಮತ್ತು ಭಾನುವಾರ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ…

Read More

ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು….

Read More

ಮಳೆಗಾಲದ ಕೃತಕ ನೆರೆಗೆ ಕಡಿವಾಣ: ಪಂಪ್‌ವೆಲ್, ಪಡೀಲ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ

ಮಂಗಳೂರು, ಜೂನ್ 5: ಮಳೆಗಾಲ ಆರಂಭವಾದಾಗ ಮಂಗಳೂರು ನಗರವನ್ನು ವರ್ಷಂಪ್ರತಿ ಕಾಡುವ ಕೃತಕ ನೆರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಪಂಪ್‌ವೆಲ್ ಜಂಕ್ಷನ್ ಹಾಗೂ ಪಡೀಲ್ ರೈಲ್ವೆ ಅಂಡರ್‌ಪಾಸ್ ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಉಂಟಾಗುವ ತೊಂದರೆ ನಿವಾರಣೆಗೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಪಂಪ್‌ವೆಲ್‌ನಲ್ಲಿ ಭಾರೀ ಮಳೆಯ ಸಂದರ್ಭ ಫ್ಲೈಓವರ್ ಕೆಳಭಾಗದ ರಸ್ತೆ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವುದು ಸಾಮಾನ್ಯವಾಗಿದೆ. ಹಲವು ಗಂಟೆಗಳ…

Read More

CPIM ಹಿರಿಯ ಸದಸ್ಯ, ಕಮ್ಯುನಿಸ್ಟ್ ಚಳುವಳಿಯ ಸಕ್ರಿಯ ಕಾರ್ಯಕರ್ತ ತಿಮ್ಮಯ್ಯ ಕೊಂಚಾಡಿ ನಿಧನ

CPIM ಪಕ್ಷದ ಹಿರಿಯ ಸದಸ್ಯರೂ,ಕಮ್ಯುನಿಸ್ಟ್ ಚಳುವಳಿಯ ಸಕ್ರಿಯ ಕಾರ್ಯಕರ್ತರಾದ ತಿಮ್ಮಯ್ಯ ಕೊಂಚಾಡಿ(70ವರ್ಷ)ಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿರುವ ತಮ್ಮ‌ ಸ್ವಗೃಹದಲ್ಲಿ ನಿಧನ ಹೊಂದಿದರು. 80ರ ದಶಕದ ಮೊದಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ತಿಮ್ಮಯ್ಯ ಕೊಂಚಾಡಿಯವರು ಬಳಿಕ ಎಡಪಂಥೀಯ ಚಳುವಳಿಗೆ ಆಕರ್ಷಿತರಾಗಿ ಕಮ್ಯುನಿಸ್ಟ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ತನ್ನ ಜೀವಿತದ ಕೊನೆಯ ಗಳಿಗೆಯವರೆಗೂ ದುಡಿಯುವ ವರ್ಗದ ಏಳಿಗೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದಾರೆ. ಬಸ್ ದರ ಏರಿಕೆ, ನೀರಿನ ದರಯೇರಿಕೆ, ಬಡ ನಿವೇಶನರಹಿತರಿಗಾಗಿ ನಡೆದ ಹೋರಾಟಗಳು ಸೇರಿದಂತೆ ಜಿಲ್ಲೆಯ ಅಸಂಖ್ಯಾತ ಹೋರಾಟಗಳಲ್ಲಿ…

Read More

‘ಹರಿತ ಕೇರಳ’ ಗುರಿಯತ್ತ ಮಂಜೇಶ್ವರ ಪಂಚಾಯತ್ ಹೆಜ್ಜೆ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ಕೃಷಿ ಭವನದ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ಜಿ.ಎಲ್.ಪಿ.ಎಸ್ ಹೊಸಬೆಟ್ಟು ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಶೀರ್ ಕನಿಲ ಅವರು ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ​ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಫಾತಿಮತ್ ಸುಹರಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಶ್ರೀ ಮುಕ್ತಾರ್, ಶ್ರೀ ಇಲ್ಯಾಸ್ ಸೇರಿದಂತೆ ಗ್ರಾಮ ಪಂಚಾಯತ್‌ನ ಎಲ್ಲಾ ಎ.ಡಿ.ಸಿ ಸದಸ್ಯರು, ವಾರ್ಡ್…

Read More

ಬೀದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸರಿಯಲ್ಲ : ಪ್ರಸನ್ನ ರವಿ ಆಗ್ರಹ

ಮಂಗಳೂರು: ಮಂಗಳೂರು ನಗರದ ಪುರಭವನದ ಫುಟ್‌ಪಾತ್‌ನಿಂದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆವರೆಗೆ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಬೀದಿ ವ್ಯಾಪಾರ ಚಟುವಟಿಕೆಗಳ ಕುರಿತು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು , ಬೀದಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ತಾವು ವಿರೋಧಿಯಲ್ಲ, ಆದರೆ ಅವರಿಗೆ ಮಹಾನಗರ ಪಾಲಿಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು . ಬೀದಿ ಬದಿ ವ್ಯಾಪಾರಸ್ಥರ ಪರ ಹೋರಾಟ…

Read More

ಪ್ರಧಾನಿ ಮೋದಿ ಆಡಳಿತದ 12 ವರ್ಷಗಳ ಸಂಭ್ರಮ: ಜೂನ್ 21ರವರೆಗೆ ವಿವಿಧ ಕಾರ್ಯಕ್ರಮಗಳು – ಸತೀಶ್ ಕುಂಪಲ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತಾವಧಿಯ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಸಹ ವಿಶೇಷ ಕಾರ್ಯಕ್ರಮಗಳ ಇಂದಿನಿಂದ ಜೂನ್ 21 ರ ತನಕ ಆಚರಿಸಲಾಗುವುದೆಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದರು . ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , , 2014ರ ಮೇ 26ರಂದು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ: ಬೆಂಬಲಿಗರ ಆಕ್ರೋಶ, ಕಚೇರಿ ಎದುರು ಭಾರಿ ಪ್ರತಿಭಟನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರು ಬೆಂಗಳೂರಿನ ಕೋರಮಂಗಲದಲ್ಲಿರುವ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ನಿರೀಕ್ಷಿಸಿದ್ದ ಅವರಿಗೆ ಖಾತೆ ಹಂಚಿಕೆಯಿಂದ ಅಸಮಾಧಾನ ಉಂಟಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ…

Read More
error: Content is protected !!