Avatar

NAMMA MEDIA 24X7

ಬೀದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸರಿಯಲ್ಲ : ಪ್ರಸನ್ನ ರವಿ ಆಗ್ರಹ

ಮಂಗಳೂರು: ಮಂಗಳೂರು ನಗರದ ಪುರಭವನದ ಫುಟ್‌ಪಾತ್‌ನಿಂದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆವರೆಗೆ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಬೀದಿ ವ್ಯಾಪಾರ ಚಟುವಟಿಕೆಗಳ ಕುರಿತು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು , ಬೀದಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ತಾವು ವಿರೋಧಿಯಲ್ಲ, ಆದರೆ ಅವರಿಗೆ ಮಹಾನಗರ ಪಾಲಿಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು . ಬೀದಿ ಬದಿ ವ್ಯಾಪಾರಸ್ಥರ ಪರ ಹೋರಾಟ…

Read More

ಪ್ರಧಾನಿ ಮೋದಿ ಆಡಳಿತದ 12 ವರ್ಷಗಳ ಸಂಭ್ರಮ: ಜೂನ್ 21ರವರೆಗೆ ವಿವಿಧ ಕಾರ್ಯಕ್ರಮಗಳು – ಸತೀಶ್ ಕುಂಪಲ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತಾವಧಿಯ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಸಹ ವಿಶೇಷ ಕಾರ್ಯಕ್ರಮಗಳ ಇಂದಿನಿಂದ ಜೂನ್ 21 ರ ತನಕ ಆಚರಿಸಲಾಗುವುದೆಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದರು . ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , , 2014ರ ಮೇ 26ರಂದು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ: ಬೆಂಬಲಿಗರ ಆಕ್ರೋಶ, ಕಚೇರಿ ಎದುರು ಭಾರಿ ಪ್ರತಿಭಟನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರು ಬೆಂಗಳೂರಿನ ಕೋರಮಂಗಲದಲ್ಲಿರುವ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ನಿರೀಕ್ಷಿಸಿದ್ದ ಅವರಿಗೆ ಖಾತೆ ಹಂಚಿಕೆಯಿಂದ ಅಸಮಾಧಾನ ಉಂಟಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ…

Read More

ಪೊಳಲಿಯಲ್ಲಿ ಅನಾಥ ಸ್ಥಿತಿಯಲ್ಲಿ ಮೃತಪಟ್ಟ ವ್ಯಕ್ತಿ; ವಾರಸುದಾರರಿಗಾಗಿ ಪೊಲೀಸರ ಮನವಿ

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರೀಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ (೬೪) ಮೃತಪಟ್ಟವರು. ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7 – 8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು.ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್‌…

Read More

ಅಮೆರಿಕ ಯೋಧರ ಹತ್ಯೆಯಾದರೆ ಮತ್ತೆ ಯುದ್ಧ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕದ ಸೈನಿಕರನ್ನು ಇರಾನ್ ಹತ್ಯೆಗೈದರೆ ಮತ್ತೆ ಸೇನಾ ಕಾರ್ಯಾಚರಣೆ ಆರಂಭಿಸಲು ಅದು ಸಾಕಷ್ಟು ಕಾರಣವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್‌ನ ಸೇನಾ ಸಾಮರ್ಥ್ಯ, ನೌಕಾಪಡೆ, ವಾಯುಪಡೆ ಹಾಗೂ ನಾಯಕತ್ವವನ್ನು ಅಮೆರಿಕ ಈಗಾಗಲೇ ತೀವ್ರವಾಗಿ ದುರ್ಬಲಗೊಳಿಸಿದೆ ಎಂದು ಹೇಳಿದರು. ಇರಾನ್‌ನ 159 ಹಡಗುಗಳು ಮುಳುಗಿದ್ದು, ಅದಕ್ಕೆ ಸಂಬಂಧಿಸಿದ ಚಿತ್ರಗಳು ತಮ್ಮ ಬಳಿ ಇವೆ ಎಂದರು. ಇದರ ನಡುವೆ, ಇರಾನ್ ವಿರುದ್ಧ ಮುಂದಿನ ಸೇನಾ ಕ್ರಮಕ್ಕೆ ಕಾಂಗ್ರೆಸ್ ಅನುಮತಿ…

Read More

‘ರೂಪಾಯಿಯ ಸಮಸ್ಯೆ’ ಕುರಿತು ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಉಪನ್ಯಾಸ

ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾನಿಲಯ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ `ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಚಾಲನೆ ನೀಡಿದರು.ಬಳಿಕ‌ ಮಾತನಾಡಿದ ಅವರು ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಡಾಲರ್…

Read More

ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ಎಚ್.ವಿ. ದರ್ಶನ್

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ತಿಳಿಸಿದ್ದಾರೆ. 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ನಡೆಯಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ…

Read More

ಗಡಿನಾಡಿನಲ್ಲಿ ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ

ಕಾಸರಗೋಡು, ಜೂನ್ 5: ಕರ್ನಾಟಕದೊಳಗೆ ಎಲ್ಲಿಯೂ ಕಾಣಸಿಗದ ವಿಶಿಷ್ಟ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿ ನಿರ್ಮಾಣಗೊಂಡಿದ್ದು, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಆಶ್ರಯಧಾಮವಾಗಿ ಬೆಳೆದಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಜಾಹೀರಾತು ಹಾಗೂ ವೈದ್ಯಕೀಯ ಸಂವಹನ ತಜ್ಞ ಎಲ್.ಜಿ. ಜ್ಯೋತಿಶ್ವರ ಅಭಿಪ್ರಾಯಪಟ್ಟರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿ ಮಾಡಲು ಕನ್ನಡ ಗ್ರಾಮಕ್ಕೆ ಆಗಮಿಸಿದ್ದ ಜ್ಯೋತಿಶ್ವರ ದಂಪತಿಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು,…

Read More

ಜೋಕಟ್ಟೆ: 21 ವರ್ಷದ ಯುವತಿ ಕಾಣೆ, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಅವರು ಮೇ 29ರಂದು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಅವರು ಜೋಕಟ್ಟೆ ಹಳೇ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಹಸೀನಾ ಖತೂನ್ ಅವರ ಎತ್ತರ ಸುಮಾರು 5 ಅಡಿ 2 ಇಂಚು ಇದ್ದು, ಸಾಧಾರಣ ಶರೀರ, ಬಿಳಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಅವರ ಎಡ ತುಟಿಯ ಕೆಳಭಾಗದಲ್ಲಿ ಕಪ್ಪು…

Read More

ಪುತ್ತಿಗೆಯಲ್ಲಿ ಪಂಚಾಯತ್ ಆಸ್ತಿ ಲೂಟಿ: ಮರಗಳ್ಳತನಕ್ಕೆ ಡಿವೈಎಫ್‌ಐ ಆಕ್ರೋಶ

​ಕಾಸರಗೋಡು: ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಎಡನಾಡು ಕೋರ್ನಕಂಡದಲ್ಲಿ, ಪಂಚಾಯತ್ ಆಡಳಿತಕ್ಕೆ ಸೇರಿದ ಸುಮಾರು 50 ವರ್ಷಗಳ ಹಳೆಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿದೆ. ಸುಮಾರು 1 ಲಕ್ಷ ರೂ. ಮೌಲ್ಯದ ಮಾವು, ಹಾಲೆ ಮತ್ತು ಅಕೇಶಿಯಾ ಮರಗಳನ್ನು ಮೇ 26ರಂದು ಸದ್ದಿಲ್ಲದೆ ಕಳ್ಳತನ ಮಾಡಲಾಗಿದೆ.ಖಾಸಗಿ ಜಮೀನಿನ ಮರಗಳನ್ನು ಕಡಿಯುವ ನೆಪದಲ್ಲಿ ಪಂಚಾಯತ್ ಒಡೆತನದ ತೋಡಿನ ಬದಿಯಲ್ಲಿದ್ದ ಮರಗಳನ್ನೂ ಕಡಿದು ಸಾಗಿಸಲಾಗಿದೆ ಎಂದು ಪಂಚಾಯತ್ ಕಾರ್ಯದರ್ಶಿ ಸುದೀಶ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ….

Read More
error: Content is protected !!