Avatar

NAMMA MEDIA 24X7

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಡಗರ

ಮಂಗಳೂರು (ಅತ್ತಾವರ):ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಭಕ್ತಿಭಾವದಿಂದ ನಡೆಯಲಿದ್ದು, ಅದರ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಉತ್ಸವದ ಅವಧಿಯಲ್ಲಿ ಪ್ರತಿದಿನ ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆಗಳು ನಡೆಯಲಿವೆ. ಏಪ್ರಿಲ್ 20ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಅಂಬುರುಹ ಯಕ್ಷಗಾನ ಕೇಂದ್ರ ಮಲೆಮಾರು ಅವರಿಂದ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ. ಏಪ್ರಿಲ್ 21ರಂದು ಗೋಲ್ಡನ್ ಸ್ಟಾಕಲ್ಸ್ ಅತ್ತಾವರ ತಂಡದಿಂದ ನೃತ್ಯ ಕಾರ್ಯಕ್ರಮ…

Read More

ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌, ಬಂಧಿತ ಯುವಕ. ದಿನಾಂಕ 30.03.2026 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಪ್ರಕರಣದ ಆರೋಪಿತನಾದ…

Read More

ಅಶೋಕನಗರದಲ್ಲಿ ಮಹಿಳಾ ಮಂಡಲ–ಅಂಗನವಾಡಿಗೆ ಇಂಟರ್‌ಲಾಕ್ ಅಳವಡಿಕೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ವಾರ್ಡಿನ ಅಶೋಕನಗರದಲ್ಲಿರುವ ಮಹಿಳಾ ಮಂಡಲ ಹಾಗೂ ಅಂಗನವಾಡಿ ಶಾಲೆಗೆ ಇಂಟರ್‌ಲಾಕ್ ಅಳವಡಿಸಲಾಗಿದ್ದು, ಶಾಸಕ Vedavyas Kamath ಅವರು ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು, ಸ್ಥಳೀಯರ ಮನವಿಯಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ಅಗತ್ಯ ಬಿದ್ದರೆ ಇನ್ನಷ್ಟು ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮನಪಾ ಸದಸ್ಯೆ ಜಯಲಕ್ಷ್ಮೀ ವಿ. ಶೆಟ್ಟಿ, ಬಿಜೆಪಿ ಪ್ರಮುಖರಾದ ದೀಕ್ಷಿತ್, ವರದರಾಜ್,…

Read More

ರನ್ ಔಟ್ ತೀರ್ಪಿಗೆ ಗಲಾಟೆ: ಅಂಪೈರ್ ಆಗಿದ್ದ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಆಂಧ್ರಪ್ರದೇಶ : ವಿಶಾಖಪಟ್ಟಣದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ರನ್ ಔಟ್ ನಿರ್ಧಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತನನ್ನು 21 ವರ್ಷದ ಡೋಲಾ ಅಜಿತ್ ಬಾಬು ಎಂದು ಗುರುತಿಸಲಾಗಿದೆ. ಪೊಲೀಸರು ಹೇಳುವಂತೆ ಪಂದ್ಯವನ್ನು ಡೋಲಾ ಅಜಿತ್ ಬಾಬು ಮತ್ತು ಅವರ ಸ್ನೇಹಿತ ಬುಡುಮುರಿ ಚಿರಂಜೀವಿ ನಿರ್ವಹಿಸುತ್ತಿದ್ದರು, ಪಂದ್ಯದ ಸಮಯದಲ್ಲಿ, ಆಟಗಾರರ ನಡುವೆ ರನ್-ಔಟ್ ತೀರ್ಪಿನ ಬಗ್ಗೆ ವಾಗ್ವಾದ ನಡೆಯಿತು. ಅಜಿತ್ ಬಾಬು ಮತ್ತು ಚಿರಂಜೀವಿ ಮಧ್ಯಪ್ರವೇಶಿಸಿ ಸಮಸ್ಯೆಯನ್ನು…

Read More

ಯುದ್ಧ ಭೀತಿ ಮಧ್ಯೆ ಇರಾನ್ ಘೋಷಣೆ: ಮೂಲಸೌಕರ್ಯ ನಾಶವಾದರೂ ಹೋರಾಟ ನಿಲ್ಲದು

ಟೆಹ್ರಾನ್: ಅಮೆರಿಕಾ ಹಾಗೂ ಇಸ್ರೇಲ್‌ನ ಹೆಚ್ಚುತ್ತಿರುವ ಸೈನಿಕ ಮತ್ತು ರಾಜಕೀಯ ಒತ್ತಡದ ನಡುವೆಯೇ ಇರಾನ್ ಜಗತ್ತಿಗೆ ಕಠಿಣ ಮತ್ತು ಭಾವನಾತ್ಮಕ ಸಂದೇಶ ರವಾನಿಸಿದೆ. ದೇಶದ ಮೂಲಸೌಕರ್ಯಗಳನ್ನು ಧ್ವಂಸ ಮಾಡಿದರೂ ಜನರ ಹೋರಾಟ ಮನೋಭಾವವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪಜೆಶ್ಚಿಯಾನ್ ಹೇಳಿದ್ದಾರೆ. ಟೆಹ್ರಾನ್‌ನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, “ನಮ್ಮ ಸೇತುವೆಗಳು, ವಿದ್ಯುತ್ ಸ್ಥಾವರಗಳನ್ನು ನಾಶ ಮಾಡಬಹುದು. ಆದರೆ, ಇರಾನಿನ ಜನರ ಕೆಚ್ಚೆದೆಯನ್ನು ಯಾರೂ ನಂದಿಸಲು ಸಾಧ್ಯವಿಲ್ಲ” ಎಂದು ಹೇಳಿದರು. ದೇಶದ ಅಸ್ತಿತ್ವಕ್ಕಾಗಿ ಕೋಟ್ಯಂತರ ಜನರು…

Read More

ಮೂಡುಬಿದ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಕಾಣೆಯಾದ ಪ್ರಕರಣ ದಾಖಲು

ಮೂಡುಬಿದ್ರೆ:ಮೂಡುಬಿದ್ರೆ ತಾಲೂಕಿನ ಮಾರ್ಪಾಡಿ ಗ್ರಾಮದ ವಿಜಯ (62) ಎಂಬವರು ಕಾಣೆಯಾಗಿರುವ ಕುರಿತು ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿಯ ಪ್ರಕಾರ, ಕಳೆದ ಸುಮಾರು 12 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿಜಯ ಅವರು ಮಾರ್ಚ್ 28ರಂದು ರಾತ್ರಿ ಮನೆಯಿಂದ ಹೊರಗೆ ತೆರಳಿದ ನಂತರ ವಾಪಾಸು ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ ವಿವರ:ವಿಜಯ ಅವರು ಗೋದಿ ಮೈಬಣ್ಣ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ನೈಟಿ…

Read More

ಶಬರಿಮಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ವಿಚಾರಣೆ ಆರಂಭ

ಹೊಸದಿಲ್ಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠವು ಈ ಮಹತ್ವದ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಧಾರ್ಮಿಕ ನಂಬಿಕೆಗಳು ಮತ್ತು ಸಂಪ್ರದಾಯಗಳ ಪರವಾಗಿ ವಾದ ಮಂಡಿಸಿದರು. “ಭಾರತದಂತಹ…

Read More

ಹನುಮಗಿರಿಯಲ್ಲಿ ಏಪ್ರಿಲ್ 9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ: ನಳೀನ್ ಕುಮಾರ್ ಕಟೀಲ್ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹನುಮಗಿರಿಯ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಎಪ್ರಿಲ್ 9 ರಿಂದ 12 ರವರೆಗೆ ‘ಹನುಮಗಿರಿ‌ ಬ್ರಹ್ಮಕಲಶೋತ್ಸವ’ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳವಾರ ಹನುಮಗಿರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದರು. ನನ್ನದೆಲ್ಲವನ್ನು ಅರ್ಪಿಸುತ್ತೇನೆ ಎನ್ನುವುದು ಭಕ್ತಿ. ರಾಮನಿಗೆ ಜಪದ ಅರ್ಪಣೆ, ರಾಮ ಹನುಮನಿಗೆ ನಾರಿಕೇಳ ಅರ್ಪಣೆಗೆ ಅವಕಾಶ ಮಾಡಿಕೊಡಲಿದೆ. ರಾಮಜ್ಯೋತಿ ನಂತರ ಬ್ರಹ್ಮಕಲಶ ನಡೆಯಲಿದೆ ಎಂದರು….

Read More

ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ ಏಪ್ರಿಲ್ 6: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಇಂದು ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು. ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ದೇವಳದ ಮುಖ್ಯ ಅರ್ಚಕರು ತೀರ್ಥ ಪ್ರಸಾದ…

Read More

ಸಾವಿರ ಸೀಮೆಯ ಒಡತಿ ಪೊಳಲಿ ಜಾತ್ರೆ: ಕೊಡಿ ಚೆಂಡಿನ ಉತ್ಸವಕ್ಕೆ ಭಕ್ತರ ಸಾಕ್ಷಿ

ಬಂಟ್ವಾಳ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವಸ್ಥಾನದ ಒಂದು ತಿಂಗಳ ಕಾಲದ ವಾರ್ಷಿಕ ಜಾತ್ರೆಯಲ್ಲಿ ಪುರಲ್ಲ ಚೆಂಡ್ ಎಂದೇ ಪ್ರಸಿದ್ದಿ ಪಡೆದಿರುವ 5 ದಿನಗಳ ಚೆಂಡಿನ ಉತ್ಸವ ವಿಶೇಷವಾಗಿದ್ದು, ಸಂಪ್ರದಾಯದಂತೆ ಎ.6 ರಂದು ಸೋಮವಾರ ಸಂಜೆ ಕೊಡಿ ಚೆಂಡಿನ (ಮೊದಲ ಚೆಂಡು) ಉತ್ಸವ ನಡೆಯಿತು. ಮೊದಲ ದಿನದ ಚೆಂಡಿನ ಉತ್ಸವದಲ್ಲಿ ದೇಗುಲದ ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿಯ ಮೊಕ್ತೇಸರರು ಹಾಗೂ ದೇವಳದ ಪ್ರಮುಖರು ಪಾಲ್ಗೊಂಡಿದ್ದು, ದೇವಿಯಲ್ಲಿ ಪ್ರಾರ್ಥಿಸಿ ಬಳಿಕ ಕೊಂಬು, ವಾದ್ಯ ಬಿರುದಾವಳಿಯೊಂದಿಗೆ…

Read More
error: Content is protected !!