ನಂತೂರು ಅಪಘಾತ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಶವವಿಟ್ಟು ರಸ್ತೆ ತಡೆ, ಸ್ಥಳೀಯರ ಆಕ್ರೋಶ
ನಂತೂರು:ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತ ಯುವತಿಯ ಶವವನ್ನು ಸ್ಥಳಕ್ಕೆ ತಂದು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಗರದ ನಂತೂರು ವೃತ್ತದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ…
