ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಕಂಕನಾಡಿ ಪೊಲೀಸರ ಬಲೆಗೆ
ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ…
