ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ
ಮಂಗಳೂರು: ಕನ್ನಡ ನಾಡು–ನುಡಿ ಹಾಗೂ ಕನ್ನಡ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ *‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’*ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಮತ್ತು ಸರ್ಕಾರಿ ಶಾಲೆಗಳ ಹಿತಸಂರಕ್ಷಣೆಯ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಮರ್ಪಕ ಸಹಕಾರ ಹಾಗೂ ಪರಿಣಾಮಕಾರಿ ಸಂವಹನ ಅಗತ್ಯವಿದ್ದು, ಸುದೇಶ್ ಕುಮಾರ್…
