ಫೆ.4 ರಿಂದ 10 ರವರೆಗೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ.
ಮಂಗಳೂರು : ಮುಲ್ಕಿ ತಾಲೂಕಿನ ಸಸಿಹಿತ್ತು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಸಮಾರಂಭ ಫೆಬ್ರವರಿ 4 ರಿಂದ 10 ರ ತನಕ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸಿ.ಬಿ ಕರ್ಕೆರ ಹೇಳಿದರು. ಅವರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇತಿಹಾಸ ಪುರುಷರಾದ ಕಾಂತಾಬಾರೆ ಬೂದಾಬಾರೆಯರು ರಾತ್ರಿ ಬೆಳಗಾಗುವುದರೊಳಗೆ ಕೈಯಾರೆ ನಿರ್ಮಿಸಿದ ಈ ಕ್ಷೇತ್ರ, ಸಸಿಹಿತ್ತುವಿನ ಕಡಲತಡಿಯ…
