ನಗ್ರಿ–ಮಿತ್ತಮಜಲು ₹1.3 ಕೋಟಿ ವೆಚ್ಚದ ಹೊಸ ಕಾಂಕ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ
ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸ್ಥಳೀಯರೊಂದಿಗೆ ವೀಕ್ಷಣೆ ನಡೆಸಿದ ಬಳಿಕ ಸಾರ್ವಜನಿಕರಿಗೆ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು,ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ರಸ್ತೆ ಸಂಪರ್ಕವೂ ಒಂದಾಗಿದ್ದು, ಗ್ರಾಮದ ಮೂಲೆಮೂಲೆಗಳಿಗೆ ಸುಸಜ್ಜಿತವಾದ ರಸ್ತೆಯ ನಿರ್ಮಾಣ ಮಾಡಿ ಸಂಪರ್ಕ ಕಲ್ಪಿಸಿದರೆ ಗ್ರಾಮದ ಅಭಿವೃದ್ಧಿ…
