ಮಂಜೇಶ್ವರದಲ್ಲಿ ಬಿಜೆಪಿ ಪರ ಚುನಾವಣಾ ಅಖಾಡಕ್ಕಿಳಿದ ಶಾಸಕ ಕಾಮತ್
ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಗಡಿಭಾಗದ ಪ್ರತಿಷ್ಠಿತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ರವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ ಪರಿಸರ, ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಪಂಗಡ ಕಾಲೋನಿ, ಗುಡ್ಡೆಕೇರಿ, ಬಡಾಜೆ ಪ್ರದೇಶಗಳು ಸೇರಿದಂತೆ ಹಲವು ಮನೆಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದರು. ನರೇಂದ್ರ ಮೋದಿ…