“ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ ” -ಡಾ.ಎಂ.ಎನ್.ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ವತಿಯಿಂದ ಕ್ರೀಡಾಕೂಟವು ಇಂದು ಬೆಳಗ್ಗೆ, ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ತಮ್ಮ ಒತ್ತಡವನ್ನು ಮರೆತು ಸೌಹಾರ್ದಯುತವಾಗಿ…
