Avatar

NAMMA MEDIA 24X7

“ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ ” -ಡಾ.ಎಂ.ಎನ್‌.ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ವತಿಯಿಂದ ಕ್ರೀಡಾಕೂಟವು ಇಂದು ಬೆಳಗ್ಗೆ, ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ತಮ್ಮ ಒತ್ತಡವನ್ನು ಮರೆತು ಸೌಹಾರ್ದಯುತವಾಗಿ…

Read More

ಧರ್ಮತ್ತಡ್ಕ ಶಾಲಾ ಎನ್ .ಎಸ್.ಎಸ್ ಶಿಬಿರಕ್ಕೆ ಅದ್ದೂರಿಯ ಚಾಲನೆ

ಸಜಂಕಿಲ:ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ ,ಧರ್ಮತ್ತಡ್ಕದ ಎನ್.ಎಸ್.ಎಸ್(ರಾಷ್ಟ್ರೀಯ ಸೇವಾ ಯೋಜನೆ) ಘಟಕದ ಸಪ್ತದಿನ ಸಹವಾಸ ಶಿಬಿರ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಜಂಕಿಲದಲ್ಲಿ ಆರಂಭಗೊಂಡಿತು. ವಿದ್ಯಾರ್ಥಿಗಳು ವೈಭವದ ಮೆರವಣಿಗೆಯೊಂದಿಗೆ ಶಿಬಿರಕ್ಕೆ ಪ್ರವೇಶಿಸಿದರು.ಮೆರವಣಿಗೆಯನ್ನು ಧರ್ಮತ್ತಡ್ಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಅಶೋಕ್ ಭಂಡಾರಿ ಉದ್ಘಾಟಿಸಿದರು.ಶಾಲಾ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್ ಧ್ವಜಾರೋಹಣಗೈದರು.ಶಿಬಿರದ ಔಪಚಾರಿಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಜಂಕಿಲ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆನಂದ ಕೆ. ಯವರು ವಹಿಸಿದರು.ಶಿಬಿರವನ್ನು…

Read More

ಬಾಲಕಿಯ ಬೆತ್ತಲೆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಆರೋಪಿಯ ಬಂಧನ

ಮಂಜೇಶ್ವರ: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತ ಬಾಲಕಿಯ ಮೋರ್ಫಿಂಗ್ ಮಾಡಲಾದ ಬೆತ್ತಲೆ ಚಿತ್ರವನ್ನು ಹಂಚಿದ ಆರೋಪದಂತೆ ಕಾಸರಗೋಡು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಪೊಲೀಸ್ ಇನ್ಸೆಕ್ಟರ್ ಪಿ. ಕೆ. ಜಿಜೇಷ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮೂಲತಃ ಉಜಿರೆ ನಿವಾಸಿಯಾದ ಆರೋಪಿ, ಮುಹಮ್ಮದ್ ಮಹೂಪ್ ಬಂಧಿತ ಆರೋಪಿ. ಈತನನ್ನು ಕರ್ನಾಟಕದ ಬೆಳ್ತಂಗಡಿಯಿಂದ ಬಂಧಿಸಲಾಗಿದೆ ಆರೋಪಿಯು ಸಾಮಾಜಿಕ ಜಾಲ ತಾಣವಾದ ಸ್ನ್ಯಾಪ್ ಚಾಟ್ ನಲ್ಲಿ ಬಾಲಕಿಯ ಬೆತ್ತಲೆ ಚಿತ್ರವನ್ನು ಹಂಚಿದೆಯೆಂದು ಹೇಳಲಾಗಿದೆ. ಸೈಬರ್ ಕ್ರೈಂ ತಂಡವು ಪ್ರಕರಣವನ್ನು…

Read More

ಹಿಂದೂ ಮುಸ್ಲಿಂ ಭಾವೈಕತೆ ಮೆರೆದ ಹಝ್ರತ್ ಅಸಯ್ಯದ್ ಇಸ್ಮಾಯಿಲ್ ವಲಿಯುಲ್ಲಾಹಿಲ್ ಬುಖಾರಿ ಮಂಜನಾಡಿ ಉರೂಸ್

ಮಂಗಳೂರು: ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ,ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋಳಿ,ಬ್ರರ‍್ಸ್ ಕೊಲ್ಯ, ಸಾಯಿ ಫ್ರೆಂಡ್ಸ್ ಅಸೈಗೋಳಿ ಅವರಿಂದ ಮಂಜನಾಡಿ ಉರೂಸ್ ಗೆ ಅಸೈಗೋಳಿ ಜಂಕ್ಷನ್ ನಿಂದ ಮಂಜನಾಡಿ ಕೇಂದ್ರ ಮಸೀದಿ ತನಕ ಹೊರೆಕಾಣಿಕೆ ಮೆರವಣಿಗೆಯ ಮೂಲಕ ೧೫ ಕ್ವಿಂಟಾಲ್ ಅಕ್ಕಿ, ಸಕ್ಕರೆ, ತರಕಾರಿ ಇತರ ಸಾಮಾಗ್ರಿಯನ್ನು ತರಲಾಯಿತು. ಸಾಯಿ ಫ್ರೆಂಡ್ಸ್ ಅಸೈಗೋಳಿ ಅಧ್ಯಕ್ಷ ಸುನಿಲ್…

Read More

ಮಿಸೆಸ್ ಇಂಡಿಯಾ -2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

ಮಂಗಳೂರು : ಮುಲುಂಡ್‌ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಭವ್ಯ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ…

Read More

ಮಹಿಳೆಯ ಗೋಲ್ಡ್ ಚೈನ್ ಕಸಿದು ಕಂಪೌಂಡ್ ಹಾರಿ ಎಸ್ಕೇಪ್ ಆದ ಖದೀಮ …. !

ಮಂಗಳೂರು: ಕೊಂಚಾಡಿ, ಕೊಪ್ಪಲಕಾಡು ಪ್ರದೇಶದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬಳ ಕತ್ತಿನಲ್ಲಿ ಇದ್ದ ಸುಮಾರು ಮೂರುವರೆ ಪವನ್ ತೂಕದ ಚಿನ್ನದ ಸರವನ್ನು ಕಳ್ಳನು ಎಗರಿಸಿ ಪರಾರಿಯಾದ ಘಟನೆ ದಾಖಲಾಗಿದ್ದು ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಬೊಬ್ಬೆ ಕೇಳಿದಂತೆ ಅಕ್ಕಪಕ್ಕದ ನಿವಾಸಿಗಳು ಓಡಿ ಬಂದಿದ್ದು, ಕಳ್ಳನು ಸಮೀಪದ ಮನೆಯ ಕಂಪೌಂಡ್ ಹಾರಿ ವರಾರಿಯಾದನು. ಬಳಿಕ ಆತ ಬೇರೆ ಕಡೆ ಹೋಗಿ ಬಟ್ಟೆ ಬದಲಾಯಿಸಿಕೊಂಡು, ಅನುಮಾನ ಮೂಡದಂತೆ ತೆರಳಿದ್ದಾನೆ. ಘಟನೆಯ ದೃಶ್ಯಗಳು ಸಮೀಪದ ಮನೆಯ ಸಿಸಿ ಕ್ಯಾಮರಾ…

Read More

ಉಡುಪಿ: ಡಿ. 29- 30ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕ ವೈಭವ

ಉಡುಪಿ: ರಂಗಭೂಮಿ‌ ಉಡುಪಿ ಇದರ ವತಿಯಿಂದ “ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ” ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು‌.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಡಿ.29ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಭುವನೇಂದ್ರ…

Read More

ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಸಂಭ್ರಮ … !

ಉಡುಪಿ: ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ. ಹಾಗೆಯೇ ಇದೇ ಸಂದರ್ಭದಲ್ಲಿ ಸಂಘದ ನೂತನ ವರ್ಷದ ಡೈರಿ ಬಿಡುಗಡೆ, ನಿವೃತ್ತ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಸನ್ಮಾನ, ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ತಿಳಿಸಿದರು. ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಂಧು.. ! ಅಂಗಾಗ ದಾನದಿಂದ ಹಲವರಿಗೆ ಜೀವಧಾನ ….. !

ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ. ಮೃತ ಯುವತಿ ಸುಳ್ಯದ ರಥಬೀದಿ ನಿವಾಸಿ ಮಮತಾ ಅವರ ಪುತ್ರಿ ಸಿಂಧು ಎಂದು ಗುರುತಿಸಲಾಗಿದೆ. ಪುತ್ತೂರು ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದ ಸಿಂಧು ಡಿಸೆಂಬರ್ 16ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಡ್ಯಾರ್ ಬಳಿ ಬಸ್‌ ಸೀಟಿನಿಂದ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿದ್ದವರು ಆಕೆಯನ್ನು ಹಿಡಿದುಕೊಂಡು ಪ್ರಾಥಮಿಕವಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,…

Read More

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮಂಜೇಶ್ವರ : ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ 28. 12. 2025ನೇ ಬಾನುವಾರ ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಳ್ಳಲಿರುವುದು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ , ಮಹಾಮಂಗಳಾರತಿ,ಧಾರ್ಮಿಕ ಸಭೆಯು ನಡೆಯಲಿರುವುದು. ಬೆಳಗ್ಗೆ ೧೧.೧೫…

Read More
error: Content is protected !!