ಗೃಹ ಪರಿಸರದ ಬಾವಿಗೆ ಬಿದ್ದು ನರಿಂಗಾನ ಕಲ್ಲರಕೋಡಿ ಶಾಲಾ ದೈಹಿಕ ಶಿಕ್ಷಕ ಆತ್ಮಹತ್ಯೆ..?ಮಗಳ ಶಾಲಾ ವಾರ್ಷಿಕೋತ್ಸವದಂದೇ ಘಟನೆ.ನರ ದೌರ್ಬಲ್ಯದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ.
ಉಳ್ಳಾಲ: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣದ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು,ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ. ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು.ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು.ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ…
