Avatar

NAMMA MEDIA 24X7

ಬಂಟ್ವಾಳದಲ್ಲಿ ಮಾ.30ರಿಂದ ಎ.4ರವರೆಗೆ ಬ್ರಹ್ಮಕಲಶೋತ್ಸವ ಮಹೋತ್ಸವ

ಬಂಟ್ವಾಳ: ಶ್ರೀ ಜಗದಂಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ಸೇವಾ ಸಮಿತಿ ( ರಿ.) ದೇವಿನಗರ – ದಡ್ಡಲಕಾಡು ಇಲ್ಲಿ ಮಾ.30 ರಿಂದ ಎ.4 ರ ವರೆಗೆ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,ಶ್ರೀ ಚಂಡಿಕಾಯಾಗ ಹಾಗೂ ಸಹಪರಿವಾರ ದೇವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮದಾಸ್ ಬಂಟ್ವಾಳ ತಿಳಿಸಿದರು.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‌‌‌‌ ಸತ್ಯನಾರಾಯಣ ಭಟ್ ಶಿವಕ್ಷೇತ್ರ, ಇಜ್ಜ ಇವರ ನೇತ್ರತ್ವದಲ್ಲಿ, ವೇದಮೂರ್ತಿ…

Read More

ಏಪ್ರಿಲ್ 26ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ:ಮೂವರಿಗೆ ಗೌರವ

ಮಂಗಳೂರು:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಘೋಷಿಸಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ಸಾಹಿತಿ ರೋನ್ ರೋಚ್ ಕಾಸ್ಸಿಯಾ, ಕಲಾ ಕ್ಷೇತ್ರದಲ್ಲಿ ರಾಮದಾಸ ದತ್ತಾತ್ರೇಯ ಗುಲ್ವಾಡಿ ಹಾಗೂ ಜಾನಪದ ಕ್ಷೇತ್ರದಲ್ಲಿ ಸೈರು (ಮುರಳೀಧರ) ಪುತ್ತು ನಾಯ್ಕ ಅವರು ಗೌರವ ಪ್ರಶಸ್ತಿಗೆ ಭಾಜನರಾಗಿದ್ದು ಕಾರ್ಯಕ್ರಮವು ಎ.26ರಂದು ಸಂಜೆ 5 ಗಂಟೆಗೆ ಉಡುಪಿ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸ್ಟ್ಯಾನಿ ಅಲ್ವಾರಿಸ್ ತಿಳಿಸಿದರು. ನಗರದ…

Read More

ತಿಬ್ಲಪದವು: ಮನೆ ಗೋಡೆಗೆ ಹಾರಿ ಬಡಿದ ಕಾರು.ಭೀಕರ ಅಪಘಾತ, ಅಚ್ಚರಿಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ನಾಟೇಕಲ್: ಇಲ್ಲಿಗೆ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ನಿನ್ನೆ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ.ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಬಡಿದು ಕೆಳಕ್ಕೆ ಉರುಳಿದೆ. ಅಪಘಾತದ ತೀವ್ರತೆ ಭೀಕರವಾಗಿದ್ದರೂ, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಆರಿಫ್ ಕೊಲೆ ಪ್ರಕರಣದಲ್ಲಿ‌ ಆರು ಆರೋಪಿಗಳ ಗುರುತು ಪತ್ತೆ

ಮಂಗಳೂರು :ಆರಿಫ್ ಕೊಲೆ ಪ್ರಕರಣದಲ್ಲಿ‌ ಆರು ಆರೋಪಿಗಳ ಗುರುತು ಪತ್ತೆಯಾಗಿದೆ.ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು…

Read More

ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಕುಡಿದು ಸಾವು

ಮಂಗಳೂರು : ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಮೃತರು. ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಿದ್ದರು. ಸುದೀಪ್ ರೈಗೆ ಕಳೆದ ಫೆ.17ರಂದು ಕಾರ್ಕಳ ತಾಲೂಕಿನ ಯುವತಿ ಜೊತೆಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿತ್ತು. ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್‌ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ…

Read More

ಕೊಟ್ಟಕುನ್ನು ಪ್ರತಿಭಟನೆ ಎರಡನೇ ಹಂತಕ್ಕೆ; ಪ್ರತಿಭಟನಾ ಟೆಂಟ್ ನಿರ್ಮಿಸುವ ಮೂಲಕ ಸತ್ಯಾಗ್ರಹ ಆರಂಭ

​ಮೊಗ್ರಾಲ್ ಪುತ್ತೂರು: ವರ್ಷಗಳ ಪ್ರಯಾಣ ಸಂಕಷ್ಟಕ್ಕೆ ಅಂತ್ಯ ಹಾಡಬೇಕೆಂದು ಒತ್ತಾಯಿಸಿ ಕಡವತ್-ಕೊಟ್ಟಕುನ್ನು ರಸ್ತೆ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಜನಾಂದೋಲನ ಎರಡನೇ ಹಂತಕ್ಕೆ ಪ್ರವೇಶಿಸಿದೆ. ಆಂದೋಲನದ ಭಾಗವಾಗಿ, ಸ್ಥಳೀಯರು ಪ್ರತಿಭಟನಾ ಸ್ಥಳದಲ್ಲಿ ಟೆಂಟ್ ನಿರ್ಮಿಸಿ ಸತ್ಯಾಗ್ರಹ ಆರಂಭಿಸಿದ್ದಾರೆ. ಮಂಗಳವಾರ ನಡೆದ ಪಂಜಿನ ಬೆಳಕಿನ ಪ್ರದರ್ಶನದ ನಂತರ ಸ್ಥಳೀಯರು ಮುಷ್ಕರವನ್ನು ಹೆಚ್ಚು ಪ್ರಬಲ ರೂಪಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ​ಹಿರಿಯ ನಾಗರಿಕರು ಮತ್ತು ಮಹಿಳೆಯರು ಸೇರಿದಂತೆ ನೂರಾರು ಜನರು ಬೆಳಿಗ್ಗೆ ಪ್ರತಿಭಟನಾ ಟೆಂಟ್ ತಲುಪಿ ಒಗ್ಗಟ್ಟು ವ್ಯಕ್ತಪಡಿಸಿದರು. ರಸ್ತೆ ನಿರ್ಮಾಣ…

Read More

ಮರಳು ಸಾಗಾಟ ಮಾಹಿತಿ ನೀಡಿದ ದ್ವೇಷಕ್ಕೆ ಯುವಕನ ಮೇಲೆ ದಾಳಿ.ಮೂವರ ಬಂಧನ

ಕಾಸರಗೋಡು: ಅನಧಿಕೃತವಾಗಿ ನದಿಯ ಮರಳು ಸಾಗಾಟದ ಮಾಹಿತಿ ಪೊಲೀಸರಿಗೆ ನೀಡಿದ ದ್ವೇಷದಿಂದ ಮೊಗ್ರಾಲ್‌ನಲ್ಲಿ ಯುವಕನ ಮನೆಗೆ ನುಗ್ಗಿ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.ಕೆ.ಕೆ.ಪುರಂ ನಿವಾಸಿಗಳಾದ ಸನದ್ (31), ಗಫೂರ್ (34) ಮತ್ತು ತನ್ಸೀಫ್ (27) ಬಂಧಿತರಾಗಿದ್ದು, ಕುಂಬಳೆ ಪೊಲೀಸ್ ಇನ್ಸ್‌ಪೆಕ್ಟರ್ ಬೈಜು ಕೆ. ಥಾಮಸ್ ಅವರ ಸೂಚನೆಯ ಮೇರೆಗೆ ಎಸ್‌ಐ ಅನಂತಕೃಷ್ಣನ್ ಆರ್ ಮೆನನ್ ಹಾಗೂ ಅವರ ತಂಡ ಬಂಧಿಸಿದೆ. ಆರೋಪಿಗಳು ಸುಲ್ತಾನ್ ಬತ್ತೇರಿಯಲ್ಲಿ ಅಡಗಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಕೆಲವು ವಾರಗಳ ಹಿಂದೆ…

Read More

ಅಡುಗೆ ಅನಿಲ ಕ್ಷಾಮ ವಿರುದ್ಧ ಹೊಸಂಗಡಿಯಲ್ಲಿ ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಎಡಬಿಡಂಗಿ ನಿರ್ಧಾರದ ಭಾಗವಾಗಿ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಕೇಂದ್ರ ಸರ್ಕಾರ ಅಮೆರಿಕಾ ಅಧ್ಯಕ್ಷರ ಬೆದರಿಕೆಗೆ ಬಗ್ಗಿ ರಷ್ಯಾ ದಿಂದ ಸಿಗುತ್ತಿದ್ದ ಕಚ್ಚಾ ಕ್ರೂಡ್ ಆಯಿಲ್ ಖರೀದಿಸದೆ ಇರುವುದರಿಂದ ಅಡುಗೆ ಅನಿಲ ಕ್ಷಾಮ ಉಂಟಾಗಿದ್ದು ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದು ಹಲವಾರು ಜನರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಪರದಾಡುವ ಪರಿಸ್ತಿತಿ ಬಂದಿದೆ. ಇದಕ್ಕೆದುರಾಗಿ ಜನತೆ ಬೀದಿಗಿಳಿದು ಪ್ರತಿಭಟಿಸಬೇಕೆಂದು ಸಿಪಿಐಎಂ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಹಾಗೂ ಮಾಜಿ ಜಿಲ್ಲಾ…

Read More

ವಿಧಾನಸಭಾ ಚುನಾವಣೆಗೆ ವಾರಗಳಷ್ಟೇ ಬಾಕಿ ಎಣ್ಮಕಜೆ ಮುಂಡ್ಯತಡ್ಕ ಪಳ್ಳತ್‌ನಲ್ಲಿ ಎಕೆಎಂ ಅಶ್ರಫ್ ಕ್ಷೇತ್ರ ಪರ್ಯಟನೆಗೆ ಚಾಲನೆ

ಪೆರ್ಲ:ಬೇಸಿಗೆಯ ಬಿಸಿ ಸುಡುತ್ತಿರುವಾಗ ಕೇರಳ ವಿಧಾನಸಭಾ ಚುನಾವಣೆಯ ಬಿಸಿ ಮುಗಿಲು ಮುಟ್ಟಿದೆ.ಸುಡು ಬಿಸಿಲಿನಲ್ಲಿಯೂ ಪ್ರಚಾರ ಸಭೆ ಭರದಿಂದ ಸಾಗುತ್ತಿದೆ.ಕುತೂಹಲ ಮೂಡಿಸಿದ ಮಂಜೇಶ್ವರ ಕ್ಷೇತ್ರದಲ್ಲಿಯೂ ಚುನಾವಣಾ ಚಟುವಟಿಕೆ ಮುಂದುವರಿದಿದೆ. ಮಂಜೇಶ್ವರ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರ ಕ್ಷೇತ್ರ ಪ್ರವಾಸವು ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮುಂಡ್ಯತಡ್ಕ ಪಳ್ಳತ್ ನಲ್ಲಿ ಆರಂಭವಾಯಿತು.ಸಂಸದ ರಾಜ್ ಮೋಹನ್ ಉನ್ನಿಥಾನ್ ಉದ್ಘಾಟಿಸಿದರು.ಯುಡಿಎಫ್ ಕ್ಷೇತ್ರದ ಸಂಚಾಲಕ ಮಂಜುನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಅಜೀಜ್ ಮೆರಿಕೆ ಸ್ವಾಗತಿಸಿದರು.ಪುತ್ತೂರು ಶಾಸಕ ಅಶೋಕ್ ರೈ, ಕರ್ನಾಟಕ ಪಿಸಿಸಿ…

Read More

ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಾಲಯದಲ್ಲಿ ಏಪ್ರಿಲ್ 9-10ರಂದು ಪೂಜಾ ಮಹೋತ್ಸವ

ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜಾ ಮಹೋತ್ಸವವು ಏಪ್ರಿಲ್ 9 ಮತ್ತು 10ರಂದು ಭಕ್ತಿಭಾವದಿಂದ ನಡೆಯಲಿದೆ. ಏಪ್ರಿಲ್ 9ರಂದು ಬೆಳಗ್ಗೆ ಗಣಪತಿ ಹೋಮ, ನಾಗಾರಾಧನೆ ಹಾಗೂ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಪ್ರಸಾದ ವ್ಯವಸ್ಥೆ ಇರಲಿದ್ದು, ಸಂಜೆ ದೀಪಾರಾಧನೆ ಮತ್ತು ವಿಶೇಷ ಪೂಜಾ ವಿಧಿಗಳು ಜರುಗಲಿವೆ. ರಾತ್ರಿ ಅನ್ನಸಂತರ್ಪಣೆಯೂ ನಡೆಯಲಿದೆ. ಏಪ್ರಿಲ್ 10ರಂದು ಬೆಳಿಗ್ಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ರಿಂದ…

Read More
error: Content is protected !!