Avatar

NAMMA MEDIA 24X7

ಜೂನ್‌ನಲ್ಲಿ ಬೆಂಗಳೂರು-ಮಂಗಳೂರು ವಂದೇ ಭಾರತ್; ಘಾಟ್ ಮಾರ್ಗದಲ್ಲಿ ಟ್ರಯಲ್ ರನ್ ಆರಂಭ

ಮಂಗಳೂರು:ಜೂನ್ ಮೊದಲ ವಾರದಲ್ಲಿ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದಲ್ಲಿ ಇಲೆಕ್ಟ್ರಿಕ್ ರೈಲಿನ ಟ್ರಯಲ್ ರನ್‌ನಡೆಯಲಿದೆ. ಜೂನ್‌ನಲ್ಲೇ ಬೆಂಗಳೂರು-ಮಂಗಳೂರು ವಂದೇ ಭಾರತ್ ಆರಂಭವಾಗಲಿದೆ. ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದ ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಕಾರ್ಯಾಚರಣೆಗೆ ದಿನಗಣನೆ ಆರಂಭವಾಗಿದೆ. ಹಾಸನ-ಮಂಗಳೂರು ರೈಲು ಭಾಗದ ಹೊಸದಾಗಿ ವಿದ್ಯುದ್ದೀಕರಿಸಲಾದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ಮಾರ್ಗದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ರೈಲ್ವೆ ಸಚಿವಾಲಯದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯ ಉನ್ನತ ತಂಡವು ಸಜ್ಜಾಗಿದೆ. ಜೂನ್ 1 ರಿಂದ ಆರಂಭವಾಗಲಿರುವ ಈ…

Read More

ಮಂಗಳೂರು–ಸೂರತ್ ರೈಲು ಇನ್ನು ವಾರದಲ್ಲಿ ಎರಡು ದಿನ ಶಾಶ್ವತ ಸಂಚಾರ

ಮಂಗಳೂರು :ಮಂಗಳೂರು- ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ. ರೈಲು 09057 / 09058 ಸಂಖ್ಯೆಯಡಿ ಸೂರತ್- ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸೇವೆ ಒದಗಿಸುತಿತ್ತು. ಜೂನ್ 3ರಿಂದ 19057 / 19058 ರೈಲು ಸಂಖ್ಯೆಯಡಿ ನಿರಂತರ ಸೇವೆ ಒದಗಿಸಲಿದೆ. 19057 ರೈಲು ಜೂ. 3ರಿಂದ ಪ್ರತೀ ಬುಧವಾರ ಹಾಗೂ ರವಿವಾರ ಸಂಜೆ 7.35ಕ್ಕೆ ಸೂರತ್‌ನಿಂದ ಹೊರಟು ಮಾರನೆ ದಿನ ಸಂಜೆ 7.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ….

Read More

ಅಡ್ಯಾರ್ ಗಾರ್ಡನ್‌ನಲ್ಲಿ ‘ಪಟ್ಲ ಸಂಭ್ರಮ-2026’ ವೈಭವ; ವಿದ್ಯಾರ್ಥಿವೇತನ, ಸನ್ಮಾನ ಸಮಾರಂಭಕ್ಕೆ ಮೆರುಗು

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಪಟ್ಲ ಸಂಭ್ರಮ-2026’, ಸನ್ಮಾನ ಸಮಾರಂಭ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಉದ್ಘಾಟಿಸಿ ಮಾತನಾಡಿ, ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮೂರು ಸಾವಿರ ರೂ ವಿದ್ಯಾರ್ಥಿವೇತನ, ಕಲಾವಿದರಿಗಾಗಿ ವಿಮಾ ಯೋಜನೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಯಕ್ಷಧ್ರುವ ಫೌಂಡೇಶನ್ ಯಶಸ್ವಿಯಾಗಿ ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. “ದಾನ ಮಾಡುವ ಸಂಕಲ್ಪ ಇದ್ದರೆ ದೇವರ…

Read More

ವಿನಯವೇ ಯಶಸ್ಸಿನ ಅಡಿಪಾಯ”ಅಮ್ಮ* ಅಮ್ಮನ ದರ್ಶನಕ್ಕಾಗಿ ಬೋಳೂರಿಗೆ ಹರಿದು ಬಂದ ಸಾವಿರಾರು ಭಕ್ತರು

ಮಂಗಳೂರು: ವಿನಯವೇ ಯಶಸ್ಸಿನ ಅಡಿಪಾಯ ಮತ್ತು ವಿನಯವಿರುವೆಡೆಯಲ್ಲಿ ಮಾತ್ರ ಜೀವನದ ನಿಜವಾದ ಸಾಫಲ್ಯ ಇದೆ ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ನುಡಿದರು.ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮಂಗಳೂರು ಬ್ರಹ್ಮಸ್ಥಾನ ಮಹೋತ್ಸವ’ದ ಎರಡನೇ ದಿನದಂದು ನೆರೆದಿದ್ದ ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, “ಜೀವನವು ನದಿಯ ಹರಿವಿನಂತಿದ್ದು, ತನ್ನದೇ ಆದ ಏರಿಳಿತಗಳನ್ನು ಹೊಂದಿರುತ್ತದೆ. ಪ್ರತಿಯೊಂದು ಅನುಭವಕ್ಕೂ ಒಂದು ಉದ್ದೇಶವಿರುತ್ತದೆ ಎಂಬುದನ್ನು ಒಪ್ಪಿಕೊಂಡು, ಶರಣಾಗತಿ ಭಾವನೆಯೊಂದಿಗೆ ನಾವೆಲ್ಲರೂ ಮುನ್ನಡೆಯಬೇಕು” ಎಂದು ಕರೆ ನೀಡಿದರು. “ಮಣ್ಣಿನ ಅಡಿಯಲ್ಲಿ ಹೂತ…

Read More

ಸೂರಜ್ ಸಾಗರ್ ಕುಂಪಲ ನೇತೃತ್ವದ ‘ಆಸರೆ ಬಳಗ ಕುಂಪಲ’ ವತಿಯಿಂದ ದ್ವಿತೀಯ ವರ್ಷದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಸೂರಜ್ ಸಾಗರ್ ಕುಂಪಲ ನೇತೃತ್ವದ ‘ಆಸರೆ ಬಳಗ ಕುಂಪಲ’ ವತಿಯಿಂದ ದ್ವಿತೀಯ ವರ್ಷದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಕುಂಪಲ ಬಾಲಕೃಷ್ಣ ಮಂದಿರ ವಠಾರದಲ್ಲಿ ನಡೆಯಿತು. ಬ್ಯಾಂಕಾಕ್ ನ ಯುವ ಉದ್ಯಮಿ ಬಿಪಿನ್ ರೈ ,ಸುಧೀರ್ ನಾಯಕ್ ದುಬೈ , ಉದ್ಯಮಿ ಕೀರ್ತನ್ ತುಡರ್, ಪ್ರವೀಣ್ ಸುವರ್ಣ ಬಗಂಬಿಲ ವಿಗ್ನೇಶ್ವರ ಟ್ರಾನ್ಸ್ ಪೋರ್ಟ್ ಚಿತ್ರದುರ್ಗ, ಈಶ್ವರಿ ಬಿಲ್ಡರ್ಸ್ ಮಾಲಕ ನಿಶಾನ್ ಪೂಜಾರಿ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಕಲಾ ಎಸ್….

Read More

ಮಾನವೀಯತೆ ಮೆರೆದ ಬಸ್ ಸಿಬ್ಬಂದಿ; ಗಾಯಗೊಂಡ ಮಹಿಳೆ-ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಜೀವ ರಕ್ಷಣೆ

ಮಂಗಳೂರು: ಮರಕಡ ಜಂಕ್ಷನ್‌ನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆ ಹಾಗೂ ಮಗು ಕೆಳಗೆ ಬಿದ್ದ ಘಟನೆ ನಡೆದಿದ್ದು, ಇದೇ ವೇಳೆ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ 13B ‘ಮಾಸ್ಟರ್’ ಬಸ್ಸಿನ ಚಾಲಕ ದಯಾನಂದ ಮತ್ತು ನಿರ್ವಾಹಕ ಸಂದೀಪ್ ಮಾನವೀಯತೆ ಮೆರೆದಿದ್ದಾರೆ. ಘಟನೆಯನ್ನು ಗಮನಿಸಿದ ಇಬ್ಬರೂ ತಕ್ಷಣವೇ ರಕ್ಷಣೆಗೆ ಧಾವಿಸಿ, ತಮ್ಮ ಬಸ್‌ನ ನಿಯಮಿತ ಟ್ರಿಪ್‌ ಬಗ್ಗೆ ಚಿಂತಿಸದೆ ಗಾಯಾಳುಗಳ ನೆರವಿಗೆ ಮುಂದಾದರು. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಿ, ಗಾಯಗೊಂಡ ಮಹಿಳೆ ಹಾಗೂ ಮಗುವನ್ನು ತುರ್ತಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಿ…

Read More

ಪೊಳಲಿ ಶ್ರೀ ಕ್ಷೇತ್ರದಲ್ಲಿ ನೂತನ ಅನ್ನಛತ್ರ, ಮದುವೆ ಸಭಾಂಗಣ ನಿರ್ಮಾಣಕ್ಕೆ ಮುಹೂರ್ತ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು. ನಿರ್ಮಿತಿ ಕೇಂದ್ರದ ಅಧಿಕಾರಿ ನವೀನ್‌ , ದೇವಳದ ಇಂಜಿನಿಯರ್‌ ಲಕ್ಷಣ್‌ ಪೂಜಾರಿ, ಕಾಂಟ್ರಾಕ್ಟರ್‌ ಗಿರೀಶ್‌ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಡಾ.ಎ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಬಂಟ್ವಾಳ ಶಾಸಕ ಯು.ರಾಜೇಶ್‌ ನಾಯ್ಕ್‌ , ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಕೃಷ್ಣಕುಮಾರ್‌…

Read More

ರಾಜ್ಯದ 9 ನಗರಗಳ ಮಕ್ಕಳ ಬೇಸಿಗೆ ಶಿಬಿರಗಳ ಸಮಾಪನ “ಜಂಬೂರಿ” ಸಂಪನ್ನ

ಮಂಗಳೂರು, ಕಟಪಾಡಿ, ಉಡುಪಿ-ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಗಂಗೊಳ್ಳಿ, ಮೈಸೂರು, ಉಳ್ಳಾಲ, ಪುತ್ತೂರು ಸೇರಿದಂತೆ ರಾಜ್ಯದ ಒಂಭತ್ತು ನಗರಗಳಲ್ಲಿ ನಡೆದ ಬೇಸಿಗೆ ಶಿಬಿರದ ಸಮಾಪನ “ಜಂಬೂರಿ” ಮಂಗಳೂರಿನಲ್ಲಿ ಮಕ್ಕಳ ಖುಷಿ, ಸಂಭ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆಯಾ ಊರುಗಳಲ್ಲಿ ಒಟ್ಟು ಆರು ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಶಿಬಿರದ ಕೊನೆಯ ಏಳನೇಯ ದಿನ ಎಲ್ಲಾ ಊರುಗಳ ಮಕ್ಕಳು ಒಂದೇ ಕಡೆಯಲ್ಲಿ ಸೇರುವ ವ್ಯವಸ್ಥೆ ಮಾಡಲಾಗಿತ್ತು. ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿರುವ ಭುವನೇಂದ್ರ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಮಕ್ಕಳಿಗೆ ಭಗವತ್…

Read More

ಸಿಎಲ್ಪಿ ಸಭೆ ಇಂದು: ಸಿದ್ದರಾಮಯ್ಯ ಉತ್ತರಾಧಿಕಾರಿ ಆಯ್ಕೆ ಕುತೂಹಲ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ದೆಹಲಿಯಿಂದ ಮರಳಿರುವ ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೊಸ ನಾಯಕನ…

Read More

ತಣ್ಣೀರ್‌ಭಾವಿಯಲ್ಲಿ ಅಲೆಗಳ ಅಬ್ಬರ; ಇಂಡಿಯನ್ ಓಪನ್ ಸರ್ಫಿಂಗ್‌ಗೆ ಅದ್ದೂರಿ ಚಾಲನೆ

ನಗರದ ತಣ್ಣೀರ್‌ಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್-2026ರ ಏಳನೇ ಆವೃತ್ತಿಗೆ ಭರ್ಜರಿ ಚಾಲನೆ ದೊರೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಅಗ್ರ ಸರ್ಫರ್‌ಗಳು ಮೊದಲ ದಿನವೇ ಅಲೆಗಳ ಮೇಲೆ ತಮ್ಮ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದರು. ರಾಷ್ಟ್ರೀಯ ಚಾಂಪಿಯನ್‌ಶಿಪ್ ಸರಣಿಯ ಪ್ರಮುಖ ಸ್ಪರ್ಧೆಯಾಗಿರುವ ಈ ಟೂರ್ನಿಯು ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. ಉತ್ತಮ ಹವಾಮಾನ ಹಾಗೂ ಸ್ಪರ್ಧೆಗೆ ಅನುಕೂಲಕರ ಅಲೆಗಳ ನಡುವೆ ಚಾಂಪಿಯನ್‌ಶಿಪ್ ಆರಂಭಗೊಂಡಿತು….

Read More
error: Content is protected !!