Avatar

NAMMA MEDIA 24X7

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 30 ದಿನಗಳ ಎಲ್‌ಪಿಜಿ ಸಂಗ್ರಹಕ್ಕೆ ಕೇಂದ್ರ ಸೂಚನೆ

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ ಆಯಕಟ್ಟಿನ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕನಿಷ್ಠ 30 ದಿನಗಳ ಬೇಡಿಕೆಗೆ ಸಾಕಾಗುವಷ್ಟು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಂಗ್ರಹ ಸಾಮರ್ಥ್ಯ ಹೊಂದುವಂತೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸೂಚನೆ ನೀಡಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್…

Read More

ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಿಐಟಿಯು ನೇತೃತ್ವದಲ್ಲಿ ಭಾರಿ ಹೋರಾಟ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು. ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ…

Read More

ಕಾಸರಗೋಡಿನಲ್ಲಿ ನವವಧು ಆತ್ಮಹತ್ಯೆ ; ಮರಣದ ಕಾರಣದ ಕುರಿತು ತನಿಖೆ

​ಕಾಸರಗೋಡು : ಮದುವೆಯಾದ ಕೇವಲ ಒಂದು ತಿಂಗಳಲ್ಲೇ ನವವಧುವೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಕುಟ್ಟಿಕೋಲ್‌ನ ಅಶ್ವತಿ (25) ಸಾವನ್ನಪ್ಪಿದ ದುರ್ದೈವಿ. ಖಾಸಗಿ ಆಸ್ಪತ್ರೆಯ ದಾದಿಯಾಗಿದ್ದ ಈಕೆ, ಮೇ 18ರಂದು ಮನೆಯಲ್ಲಿ ಅಸ್ವಸ್ಥರಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ​ಅಶ್ವತಿಯು ಪರಕ್ಕಳಾಯಿಯ ರೂಪೇಶ್ ಎಂಬುವರನ್ನು ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಾಸರಗೋಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ…

Read More

ಬೀದಿಬದಿ ವ್ಯಾಪಾರಿಗಳ ವಿರುದ್ಧ ಸುಳ್ಳು ಆರೋಪ: ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಹಾಗೂ ಅವರ ಸಂಘವನ್ನು ಅವಮಾನಿಸಿ, ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರದ ವಿವಿಧೆಡೆ ಬೀದಿಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರನ್ನು ಅಪರಾಧಿಗಳಂತೆ…

Read More

ಪರಿಸರ ಜಾಗೃತಿಗೆ ಸುಶಾನ್ ಟ್ರಸ್ಟ್ ಹೆಜ್ಜೆ: ಮೇ 30ರಂದು ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ

ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸ್ಥಾಪಿಸಿರುವ ಸುಶಾನ್ ಟ್ರಸ್ಟ್ ಕೊಡ್ಲಾಡಿ ಇದರ ವತಿಯಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ ಹಾಗು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮೇ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಸಂಚಾಲಕ ಕಿರಣ್ ಶೆಟ್ಟಿ ಕೊಡ್ಲಾಡಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದಾರೆ….

Read More

ಉಡುಪಿ ಜಿಲ್ಲೆಯಲ್ಲಿ ಕನ್ನಡ ಭವನದ ” ಭರವಸೆಯ ಬೆಳಕು “ಯುವ ವಿದ್ಯಾರ್ಥಿ ಪ್ರಶಸ್ತಿ -ಪ್ರದಾನ 31ರಂದು

ಉಡುಪಿ: ಉಡುಪಿ ರಾಮಕ್ಷತ್ರಿಯ ಯುವ ಸಂಘ, ನೀಲಾವರ ಘಟಕದ ವತಿಯಿಂದ ಮೇ 31ರಂದು ನೀಲಾವರ ಶಾರದಾ ಸಭಾಭವನದಲ್ಲಿ ‘ರಾಮಕ್ಷತ್ರಿಯ ಜ್ಞಾನ-ಶಕ್ತಿ-ಅರ್ಥ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀ ರಮಾನಂದ ನೀಲಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮುದಾಯದಲ್ಲಿ ಜ್ಞಾನ, ಶಕ್ತಿ ಹಾಗೂ ಸಮೃದ್ಧಿಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಮಾಗಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ ಕಾರ್ಯಕ್ರಮದ ಅಂಗವಾಗಿ ಡಾ ವಾಮನ್ ರಾವ್ ಬೇಕಲ್ ನೇತೃತ್ವದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಸಹಯೋಗದಲ್ಲಿ…

Read More

19 ವರ್ಷಗಳ ಬಳಿಕ ಗಲ್ಲುಶಿಕ್ಷೆಯಿಂದ ಪಾರಾದ ಕೇರಳದ ಅಬ್ದುಲ್ ರಹೀಂ

ತಿರುವನಂತಪುರಂ : ಉತ್ತಮ ಭವಿಷ್ಯದ ಕನಸೊಂದಿಗೆ ಸೌದಿ ಅರೇಬಿಯಾಗೆ ತೆರಳಿದ್ದ ಕೇರಳ ಮೂಲದ ಅಬ್ದುಲ್ ರಹೀಂ ಅವರ ಬದುಕು, ಒಂದು ದುರಂತ ಘಟನೆಯಿಂದ ಸಂಪೂರ್ಣ ಬದಲಾಗಿತ್ತು. ಆದರೆ, ಕೊನೆಗೂ ಸಾರ್ವಜನಿಕರ ಅಪಾರ ಬೆಂಬಲ ಮತ್ತು ಮಾನವೀಯತೆಯ ನೆರವಿನಿಂದ ಅವರು ಗಲ್ಲುಶಿಕ್ಷೆಯಿಂದ ಪಾರಾಗಿರುವ ಘಟನೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಕೇರಳದಲ್ಲಿ ಆಟೋ ಮತ್ತು ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ರಹೀಂ, 2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರಿಗೆ ತಮ್ಮ ಮಾಲೀಕರ 17…

Read More

ಬಜಾಲ್ ವಾರ್ಡಿನ ಮೈರ ಜಯನಗರ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 53ನೇ ಬಜಾಲ್ ವಾರ್ಡಿನ ಮೈರ ಜಯನಗರ–ವನರಕ್ತೇಶ್ವರಿ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಸುಮಾರು ₹50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗೆ ₹50 ಲಕ್ಷ ಅನುದಾನ ಮಂಜೂರಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಾಮಗಾರಿಗೆ…

Read More

ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ: ಸವಲತ್ತುಗಳ ಕುರಿತು ಮಾಹಿತಿ ಪಡೆದ ಪವನ್ ಕುಮಾರ್ ಶಿರ್ವ

ಬೆಂಗಳೂರು :ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿದ ಭೋವಿ ಮುಖಂಡ ಪವನ್ ಕುಮಾರ್ ಶಿರ್ವ ಅವರು, ನಿಗಮದ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಮಾಹಿತಿ ಪಡೆದು ಸೂಕ್ತ ಚರ್ಚೆ ನಡೆಸಿದರು. ಭೋವಿ ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪವನ್ ಕುಮಾರ್ ಶಿರ್ವ, ನಿಗಮದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಮುಂದಿನ…

Read More

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ; ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರುದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ಕರೆಯಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರ ‘ಸಮ್ಮೇಳನ ಸಭಾಂಗಣ’ದಲ್ಲಿ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…

Read More
error: Content is protected !!