Avatar

NAMMA MEDIA 24X7

ಕಾಸರಗೋಡಿನ ಕನ್ನಡ ಭವನದಲ್ಲಿ ಮಲಯಾಳ ಭಾಷಾ ಮಸೂದೆಯ ವಿರುದ್ಧ ಕನ್ನಡಿಗರ ಪ್ರತಿಭಟನೆ

ಕಾಸರಗೋಡು: ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಯು ಕಾಸರಗೋಡಿನ ಕನ್ನಡಿಗರ ಹಿತಕ್ಕೆ ಮಾರಕವಾದುದು. ಒಂದರಿಂದ ಹತ್ತನೇ ತರಗತಿಯ ತನಕ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯಗೊಳಿಸುವ ಪ್ರಸ್ತಾಪದಿಂದ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶವನ್ನು ಹೊರತುಪಡಿಸಬೇಕು. ಗಡಿನಾಡಿನಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಮಲಯಾಳ ಕಡ್ಡಾಯಗೊಳಿಸುವುದು ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ಕಸಿಯುವುದಕ್ಕೆ ಸಮಾನವಾಗಿದೆ. ಗಡಿನಾಡು ಕಾಸರಗೋಡಿನ ಕನ್ನಡಿಗರ ಹಕ್ಕು ಸವಲತ್ತುಗಳನ್ನು ಕಸಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನರಾವ್…

Read More

ಎಪ್ರಿಲ್ 4 – 5 , ಮಂಗಳೂರಿನಲ್ಲಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ

ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಲಿದೆ ಎಂದು ಕೇಂದ್ರ ಕಾರ್ಮಿಕ ಸಂಘಟನೆಯಾದ CITU ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ ಕರ್ನಾಟಕ ರಾಜ್ಯಾದ್ಯಂತ ಆಯ್ದ 250ರಷ್ಟು ಪ್ರಮುಖ CITU ನಾಯಕರು ಭಾಗವಹಿಸಲಿರುವ ಸಂಘಟನಾ ಕಾರ್ಯಾಗಾರವನ್ನು CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್ ರವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ CITU ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ರಾಜ್ಯ…

Read More

ಪಂಚಾಯತ್‌ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಮುಚ್ಚಿದ ಭೂಪ

ಉಳ್ಳಾಲ: ಪಂಚಾಯತ್‌ ನಿರ್ಮಿಸಿದ ಮಳೆ ನೀರಿನ ತೋಡನ್ನು ಮುಚ್ಚಿದ ಭೂಪನೋರ್ವನ ಕೃತ್ಯವನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ನಮೊಗರು ನಿವಾಸಿ ನಾಗೇಶ್‌ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ(56), ಅವರ ಪುತ್ರ ರವಿರಾಜ್‌ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು. ಇಂದು ಬೆಳಿಗ್ಗೆ 8.30 ರ…

Read More

ಬಸ್ಸಿನಲ್ಲೇ ಕುಸಿದು ಬಿದ್ದ ಮಹಿಳೆ ಸಾವು: ಮೃತರ ಗುರುತು ಪತ್ತೆಗೆ ಪೊಲೀಸರ ಮೊರೆ

ಮಂಜೇಶ್ವರ:ಮಂಗಳೂರು-ಕಾಸರಗೋಡು ಕೆಎಸ್ಸಾರ್ಟೀಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಲಿಸುವ ಬಸ್ಸಿನಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ​ಮಂಗಳೂರಿನಿಂದ ಹೊರಟಿದ್ದ ಸಾರಿಗೆ ಬಸ್ಸನ್ನು ಇವರು ಕೈಕಂಬ ಎಂಬಲ್ಲಿ ಹತ್ತಿದ್ದರು. ಕಾಸರಗೋಡಿಗೆ ಟಿಕೆಟ್ ಪಡೆದಿದ್ದ ಇವರು, ಬಸ್ ಕುಂಬಳೆ ತಲುಪುವಷ್ಟರಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹಪ್ರಯಾಣಿಕರು ಹಾಗೂ ಬಸ್ ಸಿಬ್ಬಂದಿ ಇವರನ್ನು ಕುಂಬಳೆ ಸೇವಾ ಸಹಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ​ಮೃತ ಮಹಿಳೆಯ ಬಳಿ ಯಾವುದೇ…

Read More

ಇರಾನ್ ಯುದ್ಧದ ಪ್ರಭಾವ ವಿಶ್ವದ ಮೇಲೆ: ಇಂಧನ ಬೆಲೆ ಏರಿಕೆ, ಪೂರೈಕೆ ಅಸ್ತವ್ಯಸ್ತ

ಅಂತಾರಾಷ್ಟ್ರೀಯ:ಇರಾನ್ ವಿರುದ್ಧ ಅಮೆರಿಕಾ ಮತ್ತು ಇಸ್ರೇಲ್ ಸಾರಿರುವ ಯುದ್ದ ಜಗತ್ತಿನಾದ್ಯಂತ ಪರಿಣಾಮ ಬೀರಲು ಆರಂಭ ಮಾಡಿದೆ. ಇಂಧನ ಬೆಲೆಗಳು ಹೆಚ್ಚಲಾರಂಭಿಸಿದ್ದು, ಪೂರೈಕೆ ಜಾಲ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರತ ಸರಕಾರ ತೈಲದ ಮೇಲೆ ಹೇರಿದ್ದ ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ ಪ್ರಮಾಣವನ್ನು ಕಡಿತ ಮಾಡಿದೆ. ಭಾರತ ಸರಕಾರ ತೈಲೋತ್ಪನ್ನಗಳ ಮೇಲೆ ವಿಧಿಸಿದ್ದ ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ ಪ್ರಮಾಣವನ್ನು ಕಡಿತ ಮಾಡಿ ಆದೇಶ ಹೊರಡಿಸಿದೆ. ತೈಲ ಮತ್ತು ಆ ಸಂಬಂಧಿತ ಉತ್ಪನ್ನಗಳ ಪೂರೈಕೆ ಜಾಲದಲ್ಲಿ ಅಸ್ಯವ್ಯಸ್ತ ಸ್ಥಿತಿ…

Read More

2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎ.ಆರ್.ಎಸ್.ಐ ಅಗಿರುವ ತಿಲಕ್ ರಾಜ್ ಆಯ್ಕೆ

ಮಂಗಳೂರು : 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎ.ಆರ್.ಎಸ್.ಐ ಅಗಿರುವ ತಿಲಕ್ ರಾಜ್ ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಕಾವೂರು ಗ್ರಾಮದ ದಯಾನಂದ ಪೂಜಾರಿ ಮತ್ತು ವೇದಾವತಿ ದಂಪತಿಗಳ ಪುತ್ರರಾದ ತಿಲಕ್ ರಾಜ್ ಇವರು 2008 ರಲ್ಲಿ ಜಿಲ್ಲಾ ಪೊಲೀಸ್ ಡಿ.ಎ.ಆರ್ ಘಟಕಕ್ಕೆ ಸೇರ್ಪಡೆಯಾಗಿ ವಿವಿಧ ವಿಭಾಗಗಳಲ್ಲಿ ಒಟ್ಟು 18 ವರ್ಷ ಕರ್ತವ್ಯ ನಿರ್ವಹಿಸಿರುವುದಲ್ಲದೆ, ಇವರು ಭಯೋತ್ಪಾದನಾ ನಿಗ್ರಹ ದಳ ಕೂಡ್ಲು ಬೆಂಗಳೂರಿನಲ್ಲಿ ನಡೆಸುವ ಕೌಂಟರ್ ಟೆರರಿಸಂ ಕೋರ್ಸನ್ನು…

Read More

ಒಡ್ಡೂರು ಫಾರ್ಮ್‌ನಲ್ಲಿ ರೋಮಾಂಚಕ ಆಫ್‌ರೋಡ್ ಮೋಟಾರ್ ಸ್ಪರ್ಧೆ ಇಂದು–ನಾಳೆ

ಮಂಗಳೂರು: ಸಾಮಾನ್ಯವಾಗಿ ರಸ್ತೆಯಲ್ಲಿ ಸಾಗುವ, ಇಂಜಿನ್ ಅಷ್ಟೊಂದು ಶಬ್ದ ಮಾಡದ ನಾಲ್ಕು ಚಕ್ರದ ವಾಹನಗಳು ಮಾರ್ಚ್ 28 ಮತ್ತು 29ರಂದು ಮಂಗಳೂರಿಗೆ ಸಮೀಪದ ಒಡ್ಡೂರು ಫಾರ್ಮ್ ನಲ್ಲಿ ಆರ್ಭಟ ಮಾಡುತ್ತ ತಮ್ಮ ಹೊಸ ಅವತಾರದ ಪ್ರದರ್ಶನ ಮಾಡಲಿವೆ.ಇವು ನಶೆಯಲ್ಲಿದ್ದಂತೆ ಉರುಳಿ ಬೀಳುತ್ತ, ನೆಲ ಬಿಟ್ಟು ಆಕಾಶದ ಗೆಳೆತನ ಮಾಡಲು ಮೇಲೆ ಕುಪ್ಪಳಿಸುತ್ತ ತೆಂಗಿನ ತೋಟ, ಅಡಿಕೆ ಮರ, ಬಾಳೆ ತೋಟ..ಇವುಗಳ ನಡುವೆ ಸಾಮಾನ್ಯವಾಗಿ ರಸ್ತೆಯೇ ಇಲ್ಲದ ಕಠಿಣ ಪಥದಲ್ಲಿ ಭಾರೀ ವೇಗದಿಂದ ಸಾಗಿ ರೋಮಾಂಚಕ ದೃಶ್ಯಗಳನ್ನು ಸೃಷ್ಟಿಸಲಿವೆ….

Read More

ಬಂಟ್ವಾಳ ಗುಪ್ತವಾರ್ತೆ ವಿಭಾಗದ ಇರ್ಷಾದ್‌ಗೆ ಮುಖ್ಯಮಂತ್ರಿ ಪದಕ ಗೌರವ

ಬಂಟ್ವಾಳ: 2025- 26 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆಯಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಗುಪ್ತವಾರ್ತೆ ವಿಭಾಗದ ಇರ್ಷಾದ್ ಪಡಂಗಡಿ ಅವರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿಯಾಗಿರುವ ಇರ್ಷಾದ್ ಅವರು 2008 ರಲ್ಲಿ ಪೋಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದಾರೆ.ಬಳಿಕ ಮಂಗಳೂರು ವಿಶೇಷ ಘಟಕ, ಉಪ್ಪಿನಂಗಡಿ ಠಾಣೆ, ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಇವರು ಅನೇಕ ಕೊಲೆ ಪ್ರಕರಣಗಳ ಪತ್ತೆ , ದರೋಡೆ ,ಮನೆಕಳ್ಳತನ,ಗಾಂಜಾ ಹಾಗೂ ಖೋಟಾ ನೋಟು ಪ್ರಕರಣಗಳ ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ಪೋಲೀಸ್…

Read More

ಕೇಂದ್ರ ಟೀಕೆಯಲ್ಲೇ 3 ವರ್ಷ ವ್ಯರ್ಥ — ಪ್ರಧಾನಿ ನಿರ್ಧಾರಕ್ಕೆ ವಿಜಯೇಂದ್ರ ಅಭಿನಂದನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನಿರ್ಧಾರದಿಂದ ನಮ್ಮ ದೇಶದಲ್ಲಿ ಪೆಟ್ರೋಲ್- ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿಮೆ ಮಾಡಿದ್ದಾರೆ. ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರ ಸರಕಾರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ನರೇಂದ್ರ ಮೋದಿಜೀ ಅವರು ದೇಶದ ಸಾಮಾನ್ಯ ಜನರ ಪರವಾಗಿ ದೃಢನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಯುದ್ಧದ ಈ ಸಂದರ್ಭದಲ್ಲಿ ರಾಜ್ಯ- ದೇಶದ ಜನತೆ…

Read More

ಚಕ್ರಾ ನದಿಯಲ್ಲಿ ಸಿಕ್ಕ ಆಂಜನೇಯನ ಬಂಡೆ ಹಿಂದೆ ಅಚ್ಚರಿಯ ಕಥೆ!

ಉಡುಪಿ: ಆಜ್ರಿ ಗ್ರಾಪಂ ವ್ಯಾಪ್ತಿಯ ಬಾಂಡ್ಯದ ಚಕ್ರಾ ನದಿಯ ತಟದಲ್ಲಿರುವ ಪುರಾತನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಲುವಾಗಿ ಇತ್ತೀಚೆಗೆ ಆರೂಢ ಚಿಂತನಾ ಪ್ರಶ್ನೆ ಇಡಲಾಗಿತ್ತು. ಈ ವೇಳೆ ಅಲ್ಲಿಯೇ ಸಮೀಪದಲ್ಲಿ ಹರಿಯುವ ಚಕ್ರಾ ನದಿಯಲ್ಲಿ ಆಂಜನೇಯನ ಕೆತ್ತನೆಯಿರುವ ಬಂಡೆಯೊಂದು ಪತ್ತೆಯಾಗಿದ್ದು, ಅದರ ಹಿಂದೆ ಹತ್ತಾರು ಕಥೆಗಳಿರುವುದು ಬೆಳಕಿಗೆ ಬಂದಿದೆ.ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜಕ್ಕೆ ಸೇರಿದ್ದು ನೂರಾರು ವರ್ಷಗಳ ಕಾಲ ಪೂಜೆ ನಡೆಯುತ್ತಿತ್ತು. ಈ ನಡುವೆ, ಕೆಲವು ವರ್ಷದ ಬಳಿಕ…

Read More
error: Content is protected !!