Avatar

NAMMA MEDIA 24X7

ಸೈಂಟ್ ಮೇರಿಸ್ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ – ವಿದ್ಯಾರ್ಥಿಗಳ ಕವನ ವಾಚನ, ರಸಪ್ರಶ್ನೆ

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ, ದಿನಾಂಕ 10.02.2026 ರಂದು ಮಂಗಳವಾರ ಮಧ್ಯಾಹ್ನ 2.00 ರಿಂದ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪಳ್ನೀರು ಮಂಗಳೂರು ಇಲ್ಲಿನ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮುಖೇನ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕರು, ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ದೀಪ ಬೆಳಗಿಸಿ ಉದ್ಘಾಟನೆಗೈದರು….

Read More

ಮಂಜೇಶ್ವರ: ಅಪ್ರಾಪ್ತೆಯ ಮುಂದೆ ನಗ್ನತೆ ಪ್ರದರ್ಶನ – ಪೋಕ್ಸೋ ಆರೋಪಿ ಅರ್ಶಾದ್ ಬಂಧನ

ಮಂಜೇಶ್ವರ : ಅಪ್ರಾಪ್ತ ಬಾಲಕಿಯ ಮುಂದೆ ನಗ್ನತೆ ಪ್ರದರ್ಶಿಸಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.ರಾಜಪುರಂ ನಿವಾಸಿ ಅರ್ಶಾದ್ (35) ಬಂಧಿತ ಆರೋಪಿ. ಕುಂಬಳೆ ಪೊಲೀಸರ ತಂಡ ಕರ್ನಾಟಕದಿಂದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ. ಅರ್ಶಾದ್ ಕರ್ನಾಟಕದಿಂದ ಹಣ್ಣು–ಹಂಪಲುಗಳನ್ನು ತಂದು ಕಾಞಂಗಾಡ್ ಭಾಗದಲ್ಲಿ ಮಾರಾಟ ಮಾಡುತ್ತಿದ್ದನು. ಕಳೆದ ಜನವರಿ 8ರಂದು ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಎದುರು ಅಶ್ಲೀಲವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ…

Read More

ಫೆಬ್ರವರಿ 12 ಮಹಾ ಮುಷ್ಕರ ಬೆಂಬಲಿಸಿ ಬಂದರು ಹಮಾಲಿ ಕಾರ್ಮಿಕರ ಸಭೆ

ಮಂಗಳೂರು:ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆ ರದ್ದೂಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರವನ್ನು ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಕೇಂದ್ರದ ಬಿಜೆಪಿ ಸರಕಾರ ಕಾರ್ಮಿಕ…

Read More

ಶ್ರೀ ಓಂಕಾರ ಭಜನಾ ಮಂಡಳಿ ಆನೆಕಲ್ಲು : ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಆನೆಕಲ್ಲು : ಕೇರಳ ಕರ್ನಾಟಕ ಗಡಿ ಭಾಗವಾದ ಆನೆಕಲ್ಲಿನಲ್ಲಿ 37 ವರ್ಷಗಳ ಇತಿಹಾಸವಿರುವ ಶ್ರೀ ಓಂಕಾರ ಭಜನಾ ಮಂಡಳಿ ಇದರ ನೂತನ ಮಂದಿರದ ಕಟ್ಟಡಕ್ಕೆ ಜಗದ್ಗುರು ಶಂಕರಾಚಾರ್ಯ ತೋಟಕಾರ್ಚಾರ್ಯ ಸಂಸ್ಥಾನ ಎಡನೀರು ಮಠದ ಪೀಠಾಧೀಶರಾದ ಪರವಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳು ಹಾಗೂ ಶ್ರೀ ಗುರುದೇವ ದತ್ತ ಸಂಸ್ಥಾನಂ ಒಡೆಯುವರು ಇದರ ಪೀಠಾಧೀಶರಾದ ಪರವಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಇವರುಗಳು ಶಿಲಾನ್ಯಾಸವನ್ನು ನೆರವೇರಿಸಿದರು. ವೇದಮೂರ್ತಿ ಬೋಳಂತಕೋಡಿ ರಾಮ ಭಟ್ ಹಾಗೂ ಗೋಪಾಲಕೃಷ್ಣ ಭಟ್ ಕಳಾಯಿ…

Read More

ಮುಕ್ಕ ಕಾಲೇಜಿನ ವಿದ್ಯಾರ್ಥಿನಿ ಕಾಣೆಯಾಗಿದ್ದ ಪ್ರಕರಣ – ವಯನಾಡಿನಲ್ಲಿ ಮದುವೆ ನೋಂದಣಿ ಬೆಳಕಿಗೆ

ಮಂಗಳೂರು: ಬಿಎಸ್ಸಿ ಕ್ರಿಮಿನಾಲಜಿ ಓದುತ್ತಿದ್ದ ಕಾಸರಗೋಡಿನ ಹಿಂದು ಯುವತಿ ವಯನಾಡಿನ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿದ್ದಾಳೆ.ಮುಕ್ಕ ಶ್ರೀನಿವಾಸ್ ಕಾಲೇಜಿನಲ್ಲಿ ಕ್ರಿಮಿನಾಲಜಿ ಬಿಎಸ್ಪಿ ಕಲಿಯುತ್ತಿದ್ದ ಕಾಸರಗೋಡು ಮೂಲದ ಹಿಂದು ಯುವತಿ, ಕೇರಳದ ವಯನಾಡು ಮೂಲದ ಮುಸ್ಲಿಂ ಯುವಕನೊಂದಿಗೆ ಎಸ್ಕೆಪ್ ಆಗಿದ್ದು, ವಯನಾಡಿನಲ್ಲಿ ರಿಜಿಸ್ಟರ್ ಮದುವೆಯಾಗಲು ಮುಂದಾಗಿರುವ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರು ಬಳಿಯ ಮೀಪುಗುರಿ ನಿವಾಸಿ, ಬಿಲ್ಲವ ಸಮುದಾಯದ ವಿದ್ಯಾರ್ಥಿನಿ ವೈಶಾಲಿ ಮೂರು ವರ್ಷಗಳಿಂದ ಮಂಗಳೂರಿನ ಮುಕ್ಕ ಶ್ರೀನಿವಾಸ್ ಕಾಲೇಜಿನಲ್ಲಿ ಬಿಎಸ್ಪಿ ಕಲಿಯುತ್ತಿದ್ದಳು. ಈ ಬಾರಿ ಬಿಎಸ್ಸಿ ಪದವಿ…

Read More

ತೌಳವ ಚಿತ್ರರಂಗದ ‘ದಶ ಯಾತ್ರೆ’ ಸಂಭ್ರಮ- ಫೆ.11ರಿಂದ 15ರವರೆಗೆ ನೆಹರೂ ಮೈದಾನದಲ್ಲಿ ರಂಗೇರಲಿದೆ ಕ್ರಿಕೆಟ್ ಹಬ್ಬ …. !

ಮಂಗಳೂರು:ಕರಾವಳಿಯ ತುಳು ಚಿತ್ರರಂಗ ಮತ್ತು ರಂಗಭೂಮಿ ಕಲಾವಿದರ ಬಹುನಿರೀಕ್ಷಿತ ‘ದಶ ಯಾತ್ರೆ’ ಸಂಭ್ರಮೋತ್ಸವವು ಫೆಬ್ರವರಿ 11ರಿಂದ 15ರವರೆಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಕ್ರಿಕೆಟ್ ಹಬ್ಬ ಹಾಗೂ ಸನ್ಮಾನ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ.)ದ ಅಧ್ಯಕ್ಷ ಲಂಚು ಲಾಲ್ ಕೆ.ಎಸ್ ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಮಿಟಿ ಸದಸ್ಯ ಜಿತೇಶ್ ಉಳಿಯ ನೀಡಿ , ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ…

Read More

ಉನ್ನತ ವಿದ್ಯಾಭ್ಯಾಸಕ್ಕಾಗಿ ತೆರಳಿದ ಡಾ. ಧೃತಿ ಆಳ್ವಗೆ ಗೌರವ ಸಮಾರಂಭ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ನ ನಮ್ಮ ಕ್ಲಿನಿಕ್ ವೈದ್ಯರಾದ ಡಾ.ಧೃತಿ ಆಳ್ವ ಇವರು ಉನ್ನತ ವಿದ್ಯಾಭ್ಯಾಸ ಕ್ಕಾಗಿ ತೆರಳುತ್ತಿದ್ದು ಇವರಿಗೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳ ಮೇಲಿನ ಮತ್ತು ಊರಿನ ನಾಗರೀಕರ ಮೇಲೆ ಇಟ್ಟಿರುವ ಕಾಳಜಿ ಮತ್ತು ಪ್ರೀತಿಯ ಆರೈಕೆಗೆ, ಹಾಗೂ ಬೆಂಗಳೂರಿನ ರಾಮ ನಗರ ಜಿಲ್ಲೆಯಲ್ಲಿ ಜರುಗಿದ ವಿಶೇಷ ಅಗತ್ಯ ವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮರಕಡ ಶಾಲೆಯ…

Read More

ಯುವತಿಯ ಮೇಲೆ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ:ಯುವಕ ಬಂಧನ

ಮಂಜೇಶ್ವರ : ಯುವತಿಯ ಹೆಗಲಿಗೆ ಕೈಯಿಟ್ಟು ಚುಂಬಿಸಲು ಯತ್ನಿಸಿದ ಹಾಗೂ ಬೆದರಿಕೆ ಹಾಕಿದ ಆರೋಪದ ಮೇರೆಗೆ ಮಂಜೇಶ್ವರ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಕುಂಜತ್ತೂರು ಜಲಾಲಿ ಮಸೀದಿ ಸಮೀಪದ ಸಣ್ಣಡ್ಕ ಹೌಸ್ ನಿವಾಸಿ ಸುನಿಲ್ ಕುಮಾರ್ (38) ಬಂಧಿತ ಆರೋಪಿ. ಮಂಜೇಶ್ವರ ಎಸ್‌.ಐ ವೈಷ್ಣವ್ ರಾಮಚಂದ್ರನ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ. ಜನವರಿ 26ರಂದು ಕುಂಜತ್ತೂರು ಮಾಸ್ಕೋ ಹಾಲ್ ಸಮೀಪದ ಬಸ್ ನಿಲ್ದಾಣದಲ್ಲಿ ಯುವತಿಯ ಕೈ ಹಿಡಿದು ಚುಂಬಿಸಲು ಯತ್ನಿಸಿದ ಘಟನೆ ನಡೆದಿತ್ತು. ಫೆಬ್ರವರಿ 8ರಂದು ರಾತ್ರಿ…

Read More

ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಬಯಲು

ಪುತ್ತೂರು:ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಇದೀಗ ಬಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿತ್ತು ಎನ್ನಲಾದ ಕಿಡ್ನಾಪ್ ಯತ್ನ ಪ್ರಕರಣದಲ್ಲಿ, ಇದು ಸಂಪೂರ್ಣ ನಾಟಕ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.ಮಂಗಳೂರು ಪಿಯುಸಿ ಕಾಲೇಜಿಗೆ ಸೇರ್ಪಡೆ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿನಿಯೇ ಕಿಡ್ನಾಪ್ ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಬ್ಲೇಡ್ ಬಳಸಿ ಕೈಗೆ ಸಣ್ಣ ಗಾಯ ಮಾಡಿಕೊಂಡು ಕಿಡ್ನಾಪ್ ನಡೆದಂತೆ ತೋರಿಸಲು ಯತ್ನಿಸಿದ್ದಾಳೆ. ಘಟನೆಗೆ ನಾಟಕೀಯ ತಿರುವು ನೀಡಲು ವಿದ್ಯಾರ್ಥಿನಿ ತನ್ನ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿ,…

Read More

ಐದು ವರ್ಷಗಳ ಸೇವಾ ಪಯಣಕ್ಕೆ ಕೃತಜ್ಞತೆ ಸಲ್ಲಿಸಿದ: ಕೊಳ್ನಾಡು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷೆ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ

ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಒಂದು ಅವಧಿಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ತಾಳಿತ್ತನೂಜಿ–ನಾರ್ಶದ ಪ್ರಜ್ಞಾವಂತ ಮತದಾರರು, ಪಕ್ಷದ ನಾಯಕರು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಗ್ರಾಮದ ಎಲ್ಲಾ ಹಿತೈಷಿ ನಾಗರೀಕರಿಗೆ,ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ (ಸುಗ್ರಾಮ)ಇವರಿಗೂ ಮೊಟ್ಟ ಮೊದಲನೆಯದಾಗಿ ತುಂಬು ಹೃದಯದ ಧನ್ಯವಾದಗಳು. ತಾಳಿತ್ತನೂಜಿ–ನಾರ್ಶ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಹಾಗೂ ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯತ್‌ಗಳಲ್ಲೊಂದಾದ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಜವಾಬ್ದಾರಿಯಿಂದ ಸ್ವೀಕರಿಸಿ,…

Read More
error: Content is protected !!